ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ

ಕೆಲ ದಿನಗಳಿಂದ ಯಾರಿಗೂ ಸಿಗದಿದ್ದ ತಿಮರೋಡಿ ಇಂದು ದಿಢೀರ್‌ ಹಾಜರು

ಮಂಗಳೂರು: ಕೆಲ ದಿನಗಳಿಂದ ಯಾರಿಗೂ ಕಾಣಿಸದಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಇಂದು ದಿಢೀರ್‌ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು ಹಾಜರಾಗಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರನ್ನು ನಿಂದಿಸಿದ ಆರೋಪದಲ್ಲಿ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಕೇಸ್‌ಗೆ ಸಂಬಂದಿಸಿ ಆಗಸ್ಟ್‌ 21ರಂದು ಉಜಿರೆಯ ತಿಮರೋಡಿ ನಿವಾಸಕ್ಕೆ ಪೊಲೀಸರು ಆಗಮಿಸಿ ಮಹೇಶ್‌ ಶೆಟ್ಟಿಯನ್ನು ಬಂಧಿಸಿದ್ದರು.





















































 
 

ಬಂಧನದ ವೇಳೆ ತಿಮರೋಡಿ ಸೇರಿದಂತೆ ಹಲವು ಮಂದಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಹೀಗಾಗಿ ಬೆಳ್ತಂಗಡಿ ಠಾಣೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗಲು ತಿಮರೋಡಿ ಇಂದು ಬೆಳಗ್ಗೆ ಠಾಣೆಗೆ ಬಂದಿದ್ದಾರೆ.

ಆ.26ರಂದು ಚಿನ್ನಯ್ಯನನ್ನು ತಿಮರೋಡಿಯ ನಿವಾಸಕ್ಕೆ ಮಹಜರು ಮಾಡಲು ಕರೆದುಕೊಂಡು ಬರಲಾಗಿತ್ತು. ಮಹಜರಿಗೆ ಕರೆ ತರುವ ಕೆಲ ಗಂಟೆಯ ಮೊದಲು ತಿಮರೋಡಿ ಮನೆಯಿಂದ ಹೊರಗಡೆ ಹೋಗಿದ್ದರು. ಅನಂತರ ಅವರು ಯಾರಿಗೂ ಕಾಣಿಸಿಕೊಂಡಿರಲಿಲ್ಲ.

error: Content is protected !!
Scroll to Top