ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆ | ಸಂಘದ ಎಲ್ಲಾ ಶಾಖೆಗಳಲ್ಲಿ ದೀಪ ಪ್ರಜ್ವಲನೆ ಮೂಲಕ ಆಚರಣೆ

ಕಾಣಿಯೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಸ್ಥಾಪನಾ ದಿನಾಚರಣೆಯನ್ನು ಇಂದು ಮಂಗಳವಾರ ಕಾಣಿಯೂರು ಶಾಖೆಯಲ್ಲಿ ಆಚರಿಸಲಾಯಿತು.

ಹಿರಿಯರಾದ, ಸಲಹಾ ಸಮಿತಿ ಸದಸ್ಯ ಸೀತಾರಾಮ ಗೌಡ ಮುಂಡಾಳ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಸಲಹಾ ಸಮಿತಿ ಸದಸ್ಯ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ ಸಂಘ ನಡೆದು ಬಂದ ಹಾದಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು.

ಸಲಹಾ ಸಮಿತಿ ಸದಸ್ಯರಾದ ಚಂದ್ರಶೇಖರ ಗೌಡ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ಶೇಷಪ್ಪ ಗೌಡ ಅಬೀರ ಮತ್ತು ಸಂಘದ ಸಿಬ್ಬಂದಿಗಳಾದ ಶಿವಕುಮಾರ್‍ ಎಂ., ಹಿತೇಶ್‍ ಎಂ. ಮತ್ತು ಗ್ರಾಹಕರು ಉಪಸ್ಥಿತರಿದ್ದರು. ಶಾಖಾ ಮ್ಯಾನೇಜರ್‍ ಪದ್ಮಶ್ರೀ ಪಿ. ಸ್ವಾಗತಿಸಿ, ವಂದಿಸಿದರು. ಸಂಘ ಸ್ಥಾಪನಾ ದಿನಾಚರಣೆ ಅಂಗವಾಗಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಲ್ಲಾ ಶಾಖೆಗಳಲ್ಲಿ ದೀಪ ಪ್ರಜ್ವಲನೆ ಮೂಲಕ ಆಚರಿಸಲಾಯಿತು.





















































 
 
error: Content is protected !!
Scroll to Top