ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ

ಎರಡು ಕಿ.ಮೀ. ತನಕ ಅಟ್ಟಿಸಿಕೊಂಡು ಬಂದು ದಾಳಿ ಮಾಡಿದ ಹೆಜ್ಜೇನುಗಳು

ಬಂಟ್ವಾಳ : ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ಜೇನುನೊಣಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶನಿವಾರ ಬಂಟ್ವಾಳ ಸಜೀಪದ ಶಾರದಾ ನಗರ ಭಜನಾ ಮಂದಿರದ ಬಳಿ ಸಂಭವಿಸಿದೆ. ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೆಂಕಟರಮಣ ಗಾಯಗೊಂಡವರು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಶನಿವಾರ ಬೆಳಗ್ಗೆ 9ರ ಸುಮಾರಿಗೆ ಅವರು ಒಂದು ಮನೆಯ ಗಣತಿ ಕಾರ್ಯ ಪೂರ್ಣಗೊಳಿಸಿ ಮತ್ತೊಂದು ಮನೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳ ಹಿಂಡು ದಾಳಿ ಮಾಡಿದೆ. ಸ್ವಲ್ಪ ಹೊತ್ತು ಮನೆಯಲ್ಲಿ ಆಶ್ರಯ ಪಡೆದ ಅವರು ಸ್ಕೂಟರ್‌ನಲ್ಲಿ ಹೊರಟಾಗ ಮತ್ತೆ ದಾಳಿ ಮಾಡಿದವು. ಸುಮಾರು 2 ಕಿ.ಮೀ. ವರೆಗೂ ಹಿಂಬಾಲಿಸಿಕೊಂಡು ಬಂದು ಮುಖ ಹಾಗೂ ಕುತ್ತಿಗೆಯ ಭಾಗಕ್ಕೆ ಕುಟುಕಿವೆ.





















































 
 

ಬಳಿಕ ಅವರು ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಮಂಗಳೂರಿಗೆ ತೆರಳಿ ಚಿಕಿತ್ಸೆ ಪಡೆದರು. ಅಪಾಯದಿಂದ ಪಾರಾಗಿದ್ದರೂ ಹೆಚ್ಚಿನ ನೋವಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ. ಬಂಟ್ವಾಳ ತಾಲೂಕು ಪ್ರಭಾರ ಶಿಕ್ಷಣಾಧಿಕಾರಿ ಬಬಿತಾ ಹಾಗೂ ಇತರ ಅಧಿಕಾರಿಗಳು ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

error: Content is protected !!
Scroll to Top