ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡೀಪಾರು ಮಾಡಿದ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮೂಲಕ ಜನರಿಗೆ ತಪ್ಪು ಮಾಹಿತಿ ರವಾನೆ ಮಾಡಿದ ಆರೋಪದಲ್ಲಿ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ಪೊಲೀಸರ ಮನವಿಯ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ಸೆ. 18 ರಿಂದ ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಈ ಆದೇಶದ ಎಲ್ಲಾ ಅಂಶಗಳು ಸರಿಯಾಗಿದ್ದರೂ ಜನರಿಗೆ ತಪ್ಪು ಮಾಹಿತಿ ನೀಡಲು ಪುತ್ತೂರು ಎ.ಸಿ. ಮತ್ತು ಬಂಟ್ವಾಳ ಡಿವೈಎಸ್ಪಿ ಬಗ್ಗೆ ಜಯಂತ್ ಟಿ. ತಪ್ಪು ಮಾಹಿತಿಗಳನ್ನು ಒಳಗೊಂಡ ವಿಡಿಯೋ ಪ್ರಸಾರ ಮಾಡಿದ್ದರು.
























