ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ

ಹಲ್ಲೆ ಮಾಡಿ ಬಲವಂತದಿಂದ ಹೇಳಿಕೆ ಪಡೆದಿದ್ದಾರೆ ಎಂದು ಆರೋಪ

ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.

ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ ಹಲ್ಲೆ ನಡೆಸಿ ತನ್ನನ್ನು ಬೆದರಿಸಿದರು. ಸುಳ್ಳು ಹೇಳಿಕೆ ಪಡೆಯುವ ಪ್ರಯತ್ನ ನಡೆಸಿದರು ಚಿನ್ನಯ್ಯನಿಗೆ‌ ಹೇಳಿ ತನ್ನ ಮೇಲೆ ಅವನ ಮೂಲಕ ಮತ್ತೆ ಹಲ್ಲೆ ನಡೆಸಿ ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿದರು ಎಂದು ಜಯಂತ ದೂರಿನಲ್ಲಿ ಆರೋಪಿಸಿದ್ದಾರೆ.





















































 
 

ಸುಳ್ಳು ಹೇಳಿಕೆ ನೀಡಲು ಒಪ್ಪದಿದ್ದಾಗ ದೊಡ್ಡವರ ವಿರುದ್ಧ ದೂರು ನೀಡುತ್ತಿಯಾ ನಿನ್ನನ್ನು ಹಾಗೂ ನಿನ್ನೊಂದಿಗೆ ಇರುವವರನ್ನು ಜೈಲಿಗೆ ಹಾಕದೆ ಬಿಡುವುದಿಲ್ಲ ಎಂದು ಬೆದರಿಸಿದ್ದಾರೆ. ಅಧಿಕಾರಿಗಳ ಹಲ್ಲೆಯಿಂದ ಗಾಯಗೊಂಡ ತಾನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ತನ್ನಿಂದ ಯಾವುದೇ ಹೇಳಿಕೆ ಪಡೆಯದೆ ಅವರಾಗಿಯೇ ಹೇಳಿಕೆಯನ್ನು ಟೈಪ್ ಮಾಡಿದ್ದಾರೆ. ಪ್ರತಿದಿನ ಎಸ್.ಐ.ಟಿ ಕಚೇರಿಗೆ ಕರೆಸಿ ಮಾನಸಿಕ ದೈಹಿಕ ಹಿಂಸೆ ನೀಡಿದ್ದಾರೆ. ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯಿಸಿದ್ದಾರೆ. ಎಸ್.ಐ.ಟಿ ಯಿಂದ ತನಗೆ ಬೆದರಿಕೆ ಇದ್ದ ಕಾರಣ ನ್ಯಾಯಾಲಯದಿಂದ ತಾತ್ಕಾಲಿಕ ತಡೆ‌ ಲಭಿಸಿದ ಬಳಿಕ ಇದೀಗ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ತನ್ನ ಮೇಲೆ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.

error: Content is protected !!
Scroll to Top