ಬೆಂಗಳೂರು, ಅರಮನೆ ಮೈದಾನ: ಸುಳ್ಯ ತಾಲೂಕಿನ ಮಡಪ್ಪಾಡಿಯ ಹಿರಿಯ ಸಹಕಾರಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಪೂರ್ವಾಧ್ಯಕ್ಷ, ಪಿ.ಸಿ. ಜಯರಾಮರಿಗೆ ಕರ್ನಾಟಕ ಸರಕಾರವು ನೀಡುವ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಯನ್ನು ನಿನ್ನೆ ನವೆಂಬರ್ 14 ರಂದು ಬೆಂಗಳೂರಿನ ಪ್ಯಾಲೇಸ್ ಗೌಂಡ್’ನಲ್ಲಿ ಜರುಗಿದ ಅದ್ದೂರಿಯ ಸಹಕಾರ ಸಪ್ತಾಹ ಸಮಾರಂಭದ ಉದ್ಘಾಟನಾ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಜಯರಾಮರ ಹುಟ್ಟೂರ ಮತ್ತು ಪರವೂರ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.
























