ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : ತಪ್ಪಿದ ಅನಾಹುತ

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಇಂದು ಬೆಳಗ್ಗೆ ನಡೆದಿದೆ.

ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವಘಡದಿಂದ ಕೊಡಗು, ಕೇರಳ, ಮಾಕುಟ್ಟ ರಸ್ತೆಯಲ್ಲಿ ಕೆಲವು ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.





















































 
 
error: Content is protected !!
Scroll to Top