ಪಾನಮತ್ತ ನಟನಿಂದ ಸರಣಿ ಅಪಘಾತ

ಯದ್ವಾತದ್ವಾ ಕಾರು ಓಡಿಸಿ ಹಲವು ವಾಹನಗಳಿಗೆ ಗುದ್ದಿದ ನಟ

ಬೆಂಗಳೂರು: ಕನ್ನಡದ ನಟನೊಬ್ಬ ಪಾನಮತ್ತನಾಗಿ ಯದ್ವಾತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಕೆಲವು ಚಿತ್ರಗಳಲ್ಲಿ ಹೀರೊ ಆಗಿ ನಟಿಸಿದ್ದ ಮಯೂರ್ ಪಟೇಲ್​ ಎಂಬಾತ ಶರಾಬಿನ ಮತ್ತಿನಲ್ಲಿ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ. ಅವರ ಕಾರು ಗುದ್ದಿದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್​ ಎಂಬುವರ ಕಾರುಗಳು ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಅಲ್ಲೇ ಇದ್ದವರು ಕಂಟ್ರೋಲ್ ರೂಮ್​ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೊಯ್ಸಳ ಪೊಲೀಸರು ಮಯೂರ್​ ಪಟೇಲ್​ನನ್ನು ಠಾಣೆಗೆ ಕರೆದೊಯ್ದು ತಪಾಸಣೆ ಮಾಡಿದಾಗ ಶರಾಬು ಸೇವಿಸಿರುವುದು ದೃಢಪಟ್ಟಿದೆ.





















































 
 

ಅಪಘಾತದ ಕುರಿತು ಶ್ರೀನಿವಾಸ್​ ನೀಡಿದ ದೂರಿನ ಮೇರೆಗೆ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಯೂರ್ ಪಟೇಲ್ ಕಾರ್ ಸೀಜ್ ಮಾಡಲಾಗಿದೆ. ಅಪಘಾತದ ವೇಳೆ ಮಯೂರ್​ ಪಟೇಲ್ ಕಾರಿಗೆ ಇನ್ಶೂರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ. ಅಪಘಾತ ಆಗುತ್ತಿದ್ದಂತೆ ಕಾರಿನಿಂದ ಇಳಿದ ಮಯೂರ್ ಪಟೇಲ್, ಏನೇ ಇದ್ದರೂ ನಾನು ಮಾಡಿಸಿಕೊಡ್ತೀನಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

error: Content is protected !!
Scroll to Top