ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ

ರಾಷ್ಟ್ರಪತಿ ಭವನದಿಂದ ನೂತನ ನೇಮಕಾತಿ ಆದೇಶ

ನವದೆಹಲಿ : ರಾಷ್ಟ್ರಪತಿ ಭವನ ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ.

ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಸಂಬಂಧಿತರು ತಮ್ಮ ಹುದ್ದೆಗಳನ್ನು ಸ್ವೀಕರಿಸುವ ದಿನಾಂಕದಿಂದ ಈ ನೇಮಕಾತಿಗಳು ಜಾರಿಗೆ ಬರಲಿವೆ ಎಂದು ತಿಳಿಸಲಾಗಿದೆ.





















































 
 

ದೆಹಲಿಯ ಪ್ರಸ್ತುತ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾರನ್ನು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಅಮೆರಿಕದಲ್ಲಿ ಭಾರತದ ಮಾಜಿ ರಾಯಭಾರಿಯಾಗಿದ್ದ ತರಣ್ಜಿತ್ ಸಿಂಗ್ ಸಂಧುರನ್ನು ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿರುವ ಶಿವ ಪ್ರತಾಪ್ ಶುಕ್ಲಾ ಅವರನ್ನು ತೆಲಂಗಾಣ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಪ್ರಸ್ತುತ ತೆಲಂಗಾಣ ರಾಜ್ಯಪಾಲರಾಗಿರುವ ಜಿಷ್ಣು ದೇವ್ ವರ್ಮಾರನ್ನು ಮಹಾರಾಷ್ಟ್ರ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ.

ನಂದ ಕಿಶೋರ್ ಯಾದವ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ನಿವೃತ್ತ ಸೇನಾ ಅಧಿಕಾರಿಯಾದ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಅವರನ್ನು ಬಿಹಾರ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ತಮಿಳುನಾಡಿನ ರಾಜ್ಯಪಾಲರಾಗಿರುವ ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಕೇರಳದ ಪ್ರಸ್ತುತ ರಾಜ್ಯಪಾಲರಾಗಿರುವ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರು ತಮಿಳುನಾಡು ರಾಜ್ಯಪಾಲರ ಕಾರ್ಯಭಾರವನ್ನು ವಹಿಸಲಿದ್ದಾರೆ. ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕವೀಂದರ್ ಗುಪ್ತಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಪಟ್ಟಿ

ವಿನಯ್ ಕುಮಾರ್ ಸಕ್ಸೇನಾ – ಲಡಾಖ್ ಲೆಫ್ಟಿನೆಂಟ್ ಗವರ್ನರ್
ತರಣ್ಜಿತ್ ಸಿಂಗ್ ಸಂಧು – ದೆಹಲಿ ಲೆಫ್ಟಿನೆಂಟ್ ಗವರ್ನರ್
ಶಿವ ಪ್ರತಾಪ್ ಶುಕ್ಲಾ – ತೆಲಂಗಾಣ ರಾಜ್ಯಪಾಲ
ಜಿಷ್ಣು ದೇವ್ ವರ್ಮಾ – ಮಹಾರಾಷ್ಟ್ರ ರಾಜ್ಯಪಾಲ
ನಂದ ಕಿಶೋರ್ ಯಾದವ್ – ನಾಗಾಲ್ಯಾಂಡ್ ರಾಜ್ಯಪಾಲ
ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ – ಬಿಹಾರ ರಾಜ್ಯಪಾಲ
ಆರ್.ಎನ್. ರವಿ – ಪಶ್ಚಿಮ ಬಂಗಾಳ ರಾಜ್ಯಪಾಲ
ರಾಜೇಂದ್ರ ವಿಶ್ವನಾಥ ಅರ್ಲೇಕರ್‌ – ತಮಿಳುನಾಡು ರಾಜ್ಯಪಾಲರ ಕರ್ತವ್ಯ
ಕವೀಂದರ್ ಗುಪ್ತಾ – ಹಿಮಾಚಲ ಪ್ರದೇಶ ರಾಜ್ಯಪಾಲ

error: Content is protected !!
Scroll to Top