ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ 3 ಮತ್ತು 4 ನೇ ಆರೋಪಿಗಳಿಗೆ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆರೋಪಿಗಳಾದ ಮಂಜುನಾಥ ಶೆಣೈ ಮತ್ತು ಕೇಶವ್ ಪರವಾಗಿ ವಾದ ಮಂಡನೆ ಮಾಡಿರುವ ವಕೀಲ ನರಸಿಂಹ ಪ್ರಸಾದ್ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿಕೊಡುವಲ್ಲಿ ಸಫಲರಾಗಿದ್ದಾರೆ.
ವಾದವನ್ನು ಆಲಿಸಿದ ನ್ಯಾಯಾಧೀಶೆ ಸರಿತಾ ಡಿ. ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದಾಗಿದೆ.

























