ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು: ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕದ ನ್ಯೂಟೌನ್‌ನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವನನ್ನು ಅಭಿಷೇಕ್ (23) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೂ ‌ಮುನ್ನ ಯುವಕ ಡೆತ್‌ನೋಟ್ ಬರೆದಿದ್ದಾನೆ. ಅದರಲ್ಲಿ ನನ್ನ ಹೆತ್ತವರು ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಆದರೆ ನಾನು ಅವರಿಗೆ ಒಳ್ಳೆಯ ಮಗನಾಗಲಿಲ್ಲ. ಕ್ಷಮಿಸಿ ಮುಂದಿನ ಜನ್ಮದಲ್ಲಿ ನಾನು ನಿಮ್ಮೆಲ್ಲರ ಜೊತೆಗೆ ಸಂತೋಷವಾಗಿರುತ್ತೇನೆ ಎಂದು ಬರೆದಿದ್ದಾನೆ.























































 
 

ಹಾಗೆಯೇ ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ ಎಂದು ನೋವು ತೋಡಿಕೊಂಡಿದ್ದಾನೆ.

ಆತನ ಹೆತ್ತವರು ಇದು ಪ್ರೀತಿಯ ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾಡಿಕೊಂಡ ಆತ್ಮಹತ್ಯೆ ಎನ್ನುವ ಸಂದೇಹ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆಗೆ ಆಕೆಯ ಪ್ರೇಯಸಿ ಹಾಗೂ ಪೋಷಕರು ನೀಡುತ್ತಿದ್ದ ಕಿರಕುಳವೇ ಕಾರಣ ಎಂದು ಮೃತನ ಹೆತ್ತವರು ಯಲಹಂಕ ಉಪನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top