ತೊಕ್ಕೊಟ್ಟು : ವ್ಯಾಪಾರಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಇವರು ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿದ್ದರು. ತೊಕ್ಕೊಟ್ಟು ಜಂಕ್ಷನ್ ಬಳಿ ಟೈಲರ್‌ಗಳಿಗೆ ಸಂಬಂಧಿಸಿದ ಹೊಲಿಗೆ ನೂಲು ಸೇರಿದಂತೆ ಇತರ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಅಂಗಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಮೃತರು ತಾಯಿ, ಪತ್ನಿ ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top