ಅಂಬಿಕಾದಲ್ಲಿ ನಡೆದ ಬಾಲಸ್ತುತಿ ಸ್ಪರ್ಧೆ |  ಸುದೀಪ್ತಿ ಹಾಗೂ ವಿಖ್ಯಾತ್‌ಗೆ ’ಬಾಲಸ್ತುತಿ ರತ್ನ’ ಬಿರುದು ಪ್ರದಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಮುನ್ನಡೆಯುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ವಿಷು ಹಬ್ಬದ ಪ್ರಯುಕ್ತ ಆಯೋಜಿಸಲಾದ ಹಿಂದೂ ಧಾರ್ಮಿಕ ಶ್ಲೋಕಗಳ ಕಂಠಪಾಠ ಸ್ಪರ್ಧೆ ಬಾಲಸ್ತುತಿ – 2023 4 ವರ್ಷದ ಮಕ್ಕಳ ವಿಭಾಗದಲ್ಲಿ ಸುದೀಪ್ತಿ ಹಾಗೂ 5ನೇ ವರ್ಷದ ಮಕ್ಕಳ ವಿಭಾಗದಲ್ಲಿ ವಿಖ್ಯಾತ್ ಪ್ರಥಮ ಸ್ಥಾನ ಗಳಿಸುವ ಮೂಲಕ ತಲಾ ಐದು ಸಾವಿರ ರೂಪಾಯಿ ಹಾಗೂ ಶಾರದಾಂಬೆಯ ಭಾವಚಿತ್ರ ಸಹಿತವಾದ ಪಾದುಕೆ ಬಹುಮಾನದೊಂದಿಗೆ ಬಾಲಸ್ತುತಿ ರತ್ನ ಬಿರುದಿಗೆ ಭಾಜನರಾಗಿದ್ದಾರೆ. ಸುದೀಪ್ತಿ ಪುತ್ತೂರಿನ ಮುರ ನಿವಾಸಿಗಳಾದ ಗುರುರಾಜ ತಂತ್ರಿ ಹಾಗೂ ಶ್ರೀಲಕ್ಷ್ಮೀ ಪ್ರಭಾ ದಂಪತಿ ಪುತ್ರಿ. ಪಾಪೆಮಜಲಿನ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಯಾಗಿರುವ ವಿಖ್ಯಾತ್ ಪಾಪೆಮಜಲಿನ ವಾಮನಾಥ ಹಾಗೂ ಜ್ಯೋತಿ ದಂಪತಿ ಪುತ್ರ. ಬಹುಮಾನ ವಿಜೇತ ಇತರ ನಾಲ್ಕು ವರ್ಷದ ಮಕ್ಕಳ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸದ್ವಿತಾ ಬಿರಾದಾರ್ ಗಳಿಸಿದರೆ, ತೃತೀಯ ಸ್ಥಾನವನ್ನು ಅದಿತಿ ಹೆಬ್ಬಾರಹಿತ್ಲು ಪಡೆದುಕೊಂಡರು.

ಐದು ವರ್ಷ ಮಕ್ಕಳ ವಿಭಾಗದಲ್ಲಿ ಅನ್ವಿತಾ ಎಚ್.ಪಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ನಿಹಾಂತ್ ಎಂ ಪಡೆದುಕೊಂಡರು.

ಹಿಂದೂ ಸಂಸ್ಕೃತಿ, ಸಂಸ್ಕಾರಗಳ ಉಳಿವು ಬೆಳೆವಿನ ನೆಲೆಯಲ್ಲಿ ಹಿಂದೂ ಧಾರ್ಮಿಕ ಶ್ಲೋಕಗಳ ಕಂಠಪಾಠ ಸ್ಪರ್ಧೆಯನ್ನು ಆಯೋಜಿಸಲಾಯಿತು.





























 
 

ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ, ಸಂಸ್ಕೃತ ವಿಭಾಗದ ಉಪನ್ಯಾಸಕಿ ಶಶಿಕಲಾ ವರ್ಕಾಡಿ ಹಾಗೂ ಅಂಬಿಕಾ ವಿದ್ಯಾಲಯದ ಸಂಸ್ಕೃತ ಶಿಕ್ಷಕಿ ಸೌಂದರ್ಯಲಕ್ಷ್ಮೀ ತೀರ್ಪುಗಾರರಾಗಿ ಸಹಕರಿಸಿದರು.

ನಮ್ಮ ಸಂಸ್ಕಾರ, ಆಚಾರ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡುವುದು ನಮ್ಮ ಕರ್ತವ್ಯ. ಅಂಬಿಕಾ ಶಿಕ್ಷಣ ಸಂಸ್ಥೆ ಈ ಕರ್ತವ್ಯವನ್ನು ತನ್ನ ಆರಂಭದಿಂದಲೂ ಮಾಡಿಕೊಂಡು ಬರುತ್ತಿದೆ. ಬಾಲಸ್ತುತಿಯ ಮೂಲಕ ಸಂಸ್ಕಾರ ಪ್ರಸರಣದ ಮತ್ತೊಂದು ಹೆಜ್ಜೆಯನ್ನು ಇಡಲಾಗಿದೆ. ಈ ಬಾಲಸ್ತುತಿ ಪ್ರತಿವರ್ಷವೂ ನಡೆದುಬರಲಿದೆ.

–        ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿಗಳು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top