ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ

ಪುತ್ತೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಪಲ್ಲವಿ 593 (98.83 ಶೇ.) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಪಲ್ಲವಿ ಅವರು ಲೆಕ್ಕಶಾಸ್ತ್ರ-100, ಅರ್ಥಶಾಸ್ತ್ರ 100, ಸಂಸ್ಕೃತ 100, ಸಂಖ್ಯಾಶಾಸ್ತ್ರ-99, ವ್ಯವಹಾರ ಅಧ್ಯಯನ-99, ಇಂಗ್ಲಿಷ್-95 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆ ಮಾಡುವ ಜೊತೆಗೆ ರಾಜ್ಯಕ್ಕೆ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಪರ್ಲಡ್ಕ ನಿವಾಸಿಯಾದ ದೇವದಾಸ ಕಿಣಿ ಮತ್ತು ಗೀತಾ ಕಿಣಿ ದಂಪತಿ ಪುತ್ರಿ.

ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಗಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಸನ್ಮಾನಿಸಿ ಶುಭ ಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕ ಸಂತೋಷ ಬಿ. ,ಸದಸ್ಯ ಸಂಪತ್ ಕುಮಾರ್, ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ವಿದ್ಯಾರ್ಥಿನಿ ಪಲ್ಲವಿ ಅವರನ್ನು ಅಭಿನಂದಿಸಿ ಅವರ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top