ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ

ಪುತ್ತೂರು : ಏ.26 ರಂದು ಪುತ್ತೂರಿನಲ್ಲಿ ಜೈನಭವನದಲ್ಲಿ ನಡೆಯಲಿರುವ ಬಿಜೆಪಿ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ ಭಾನುವಾರ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆಯಿತು.

ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಾವೇಶದಲ್ಲಿ ರಾಜ್ಯ ಆರೋಗ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಮತ್ತಿತರ ಮಹಿಳಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದರು.

ಸಭೆಯಲ್ಲಿ ಮಹಿಳಾ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಪಾಂಡೆ, ಮಹಿಳಾ ಆಯೋಗದ ಮಾಜಿ ಸದಸ್ಯೆ, ಮಹಿಳಾ ಕಾರ್ಯದ ರಾಜ್ಯ ಸಹಸಂಚಾಲಕಿ ಶ್ಯಾಮಲ ಕುಂದರ್, ಕೇಂದ್ರ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿನಿ, ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಪೆರುವೋಡಿ, ಜಿಲ್ಲಾ ಮಹಿಳಾ ಕಾರ್ಯದ ಸಹಸಂಚಾಲಕಿ ಡಾ.ಮಂಜುಳಾ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಧಾಕೃಷ್ಣ ಬೂಡಿಯಾರ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಪುತ್ತೂರು ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲ ಕಾರ್ಯದರ್ಶಿ ಜಯಶ್ರೀ ಶೆಟ್ಟಿ, ಮಾಜಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನಗರಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಶರಾವತೀ ರವಿನಾರಾಯಣ, ಗ್ರಾಮ, ತಾಲೂಕು, ಜಿಲ್ಲಾ ಮಟ್ಟದ ಚುನಾಯಿತ ಮಹಿಳಾ ಪ್ರತಿನಿಧಿಗಳು, ನಗರಸಭೆ ಸದಸ್ಯರುಗಳು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top