ಅಪಘಾತ

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಸಂಚಾರ ಸ್ಥಗಿತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಗಾಳಿ, ಮಳೆ ಅಬ್ಬರ ಮುಂದುವರಿದಿದ್ದು, ಧಾರಾಕಾರ ಗಾಳಿ, ಮಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಗುಡ್ಡ ಕುಸಿದಿರುವ ಪರಿಣಾಮ ಶೃಂಗೇರಿ-ಮಂಗಳೂರು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪೊಲೀಸ್, ಪಂಚಾಯತ್‌ ಅಧಿಕಾರಿಗಳು ಹಾಗೂ ಸ್ಥಳೀಯರು ಸುರಿಯುತ್ತಿರುವ ಮಳೆ ಮಧ್ಯೆಯೇ ರಸ್ತೆಗೆ ಉರುಳಿರುವ ಮಣ್ಣಿನ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆ ಕೂಡ […]

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಸಂಚಾರ ಸ್ಥಗಿತ Read More »

ಮಂಗಳೂರು : ಕುಸಿದು ಬಿದ್ದ ಆಸ್ಪತ್ರೆಯ ಗೋಡೆ

ಒಂದೇ ಕುಟುಂಬದ ಆರು ಮಂದಿ ಅದೃಷ್ಟವಶಾತ್‌ ಪಾರು ಮಂಗಳೂರು : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಕುಸಿದು ಬಿದ್ದಿದ್ದು, ಭಾರಿ ಅವಘಡವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕುಟುಂಬವೊಂದು ಅದೃಷ್ಟವಶಾತ್‌ ಪಾರಾಗಿದೆ. ಕಂಕನಾಡಿ ಬಳಿಯ ಸುವರ್ಣ ಲೇನ್‌ನಲ್ಲಿ ಭಾರಿ ಅವಘಡ ಸಂಭವಿಸಿದೆ. ಧಾರಾಕಾರ ಮಳೆಗೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.

ಮಂಗಳೂರು : ಕುಸಿದು ಬಿದ್ದ ಆಸ್ಪತ್ರೆಯ ಗೋಡೆ Read More »

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ : ಆರು ಮಂದಿ ಸಾವು

ಡೆಹ್ರಾಡೂನ್: : ಅಹಮದಾಬಾದ್ ವಿಮಾನ ದುರಂತ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದ್ದು, ಉತ್ತರಾಖಂಡದ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಗೌರಿಕುಂಡ್ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿ ಹೆಲಿಕಾಪ್ಟರ್​​ನಲ್ಲಿದ್ದ ಪೈಲಟರ್​ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ. ಘಟನೆಯ ನಂತರ ಎನ್​​ಡಿಆರ್​ಎಫ್​ ತಂಡಗಳು ಸ್ಥಳಕ್ಕೆ ತಲುಪಿವೆ. ಹೆಲಿಕಾಪ್ಟರ್‌ನ ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ. ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಹೊಗೆಯನ್ನು ನೋಡಿದ ನಂತರ ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ : ಆರು ಮಂದಿ ಸಾವು Read More »

ಕಾಂತಾರ-1 ಶೂಟಿಂಗ್‌ನಲ್ಲಿ ಇನ್ನೊಂದು ಅವಘಡ : ಜಲಾಶಯದಲ್ಲಿ ದೋಣಿ ಪಲ್ಟಿ

ಶಿವಮೊಗ್ಗ: ಕಾಂತಾರ-1 ಚಿತ್ರತಂಡಕ್ಕೆ ಇನ್ನೊಂದು ಅವಘಡ ಎದುರಾದ ಕುರಿತು ವರದಿಯಾಗಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿ ಸಮೀಪ ಶೂಟಿಂಗ್‌ ನಡೆಯುತ್ತಿದ್ದಾಗ ದೋಣಿ ಮಗುಚಿ ಬಿದ್ದು ಅವಘಡ ಸಂಭವಿಸಿದೆ. ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ. ಬೋಟ್‌ನಲ್ಲಿ ಚಿತ್ರದ ನಾಯಕ ಮತ್ತು ನಿರ್ದೇಶಕ ರಿಷಬ್‌ ಶೆಟ್ಟಿಯವರೂ ಇದ್ದರು ಎನ್ನಲಾಗಿದೆ. ಕಾಂತಾರ-1 ಸಿನಿಮಾದ ಚಿತ್ರೀಕರಣ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಸಿನಿಮಾ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್​ನಲ್ಲಿ

ಕಾಂತಾರ-1 ಶೂಟಿಂಗ್‌ನಲ್ಲಿ ಇನ್ನೊಂದು ಅವಘಡ : ಜಲಾಶಯದಲ್ಲಿ ದೋಣಿ ಪಲ್ಟಿ Read More »

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ

ಎರಡು ಅಂಗಡಿ, ಒಂದು ವಾಹನ ನಾಶ ಮಂಗಳೂರು : ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜ್ ಮುಂಭಾಗ ಗುಜರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ವ್ಯಾಪಿಸಿದೆ. ಎರಡು ಅಂಗಡಿ ಮತ್ತು ಒಂದು ಗೂಡ್ಸ್‌ ವಾಹನ ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಸೊತ್ತುಗಳಿಗೆ ಹಾನಿಯಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು.

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ Read More »

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ

ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಅಹಮದಾಬಾದ್‌: ಇಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 274ಕ್ಕೇರಿದೆ. ವಿಮಾನದಲ್ಲಿದ್ದ 230 ಪ್ರಯಾಣಿಕರು, 10 ಗಗನಸಖಿಯರು ಮತ್ತು ಇಬ್ಬರು ಪೈಲಟ್‌ಗಳ ಪೈಕಿ ಬದುಕುಳಿದಿರುವುದು ಒಬ್ಬ ಪ್ರಯಾಣಿಕ ಮಾತ್ರ. ವಿಮಾನ ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಬಿ.ಜೆ.ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿದ ಪರಿಣಾಮ ಇನ್ನಷ್ಟು ಸಾವುಗಳು ಸಂಭವಿಸಿವೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಮೇಘನಿ ನಗರದಲ್ಲಿ

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ Read More »

ಭೀಕರ ವಿಮಾನ ಅವಘಡದಲ್ಲಿ ಏಕೈಕ ಪ್ರಯಾಣಿಕ ಬದುಕಿ ಉಳಿದದ್ದಾದರೂ ಹೇಗೆ?

ಇಲ್ಲಿದೆ ವಿಶ್ವಾಸ್ ಕುಮಾರ್ ರಮೇಶ್‌ಗೆ ಪುನರ್ಜನ್ಮ ಸಿಕ್ಕಿದ ಪೂರ್ಣ ಮಾಹಿತಿ ಅಹಮದಾಬಾದ್ : ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಬದುಕುಳಿದದ್ದಾರೂ ಹೇಗೆ ಎಂಬ ಪ್ರಶ್ನೆ ಎಲ್ಲರನ್ನು ಈಗ ಕಾಡುತ್ತಿದೆ. ಇಡೀ ವಿಮಾನ ಬೆಂಕಿಯುಂಡೆಯಂತಾಗಿ ಕಟ್ಟಡಕ್ಕೆ ಅಪ್ಪಳಿಸಿದ್ದು, 1.25 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಗೊಂಡಿದೆ. ವಿಮಾನದಲ್ಲಿ ಇದ್ದವರು ಯಾರೂ ಬದುಕುಳಿಯುವ ಸಾಧ್ಯತೆಯಿಲ್ಲ ಎಂದೇ ಭಾವಿಸಿರುವಾಗ ವಿಶ್ವಾಸ್‌ ಕುಮಾರ್‌ ರಮೇಶ್‌ ಪವಾಡ ಎಂಬಂತೆ ಬದುಕುಳಿದಿದ್ದಾರೆ. ಅದೂ ಹೆಚ್ಚೇನೂ ಗಂಭೀರ ಗಾಯಗಳಿಲ್ಲದೆ. ಇದು

ಭೀಕರ ವಿಮಾನ ಅವಘಡದಲ್ಲಿ ಏಕೈಕ ಪ್ರಯಾಣಿಕ ಬದುಕಿ ಉಳಿದದ್ದಾದರೂ ಹೇಗೆ? Read More »

ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ಉಳ್ಳಾಲ: ವಿದ್ಯಾರ್ಥಿನಿಯೋರ್ವಳು ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಕುತ್ತಾರುನಲ್ಲಿ ನಡೆದಿದೆ. ಹಿಬಾ ಐಮನ್ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ರಾಜ್ ಅಹಮ್ಮದ್ ಮತ್ತು ಖಮ್ರಾಜ್ ಬಾನು ಅವರ ಹಿರಿಯ ಪುತ್ರಿಯಾಗಿರುವ ಹಿಬಾ ಐಮನ್  18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವಾಸ ಮಾಡುತ್ತಿದ್ದರು. ನಿನ್ನೆ ರಾತ್ರಿ ದಂಪತಿ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು. ಮನೆಯಲ್ಲಿ

ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು Read More »

ಬೆಂದು ಹೋದ ಜೀವಗಳು – ಕರಟಿ ಹೋದ ಕನಸುಗಳು…

ವಿಮಾನ ದುರಂತದ ಮನಕಲಕುವ ಕಥೆಗಳು ಅಹದಾಬಾದ್‌: ಅಹಮದಾಬಾದ್‌ನಲ್ಲಿ ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಕರಟಿ ಹೋದ ಕನಸುಗಳೆಷ್ಟೋ, ಬೆಂದು ಹೋದ ಬದುಕುಗಳೆಷ್ಟೋ? ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿಕೊಂಡು ಪ್ರಯಾಣ ಬೆಳೆಸಿದ್ದವರು ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ಗುರುತು ಕೂಡ ಸಿಗದಷ್ಟು ಭೀಕರವಾಗಿ ಸಾಯಬಹುದು ಎಂದು ಕನಸು ಮನಸ್ಸಿನಲ್ಲೂ ಎಣಿಸಿರಲಿಕ್ಕಿಲ್ಲ. ಮನೆ ಕಟ್ಟಲು ತೊಡಗಿದ್ದ ನರ್ಸ್‌, ಸುಖಸಾಗರದಲ್ಲಿ ತೇಲಾಡುತ್ತಿದ್ದ ಸುಂದರ ಕುಟುಂಬ, ಹೆಂಡತಿಯನ್ನು ಕರೆತರಲು ಹೋಗುತ್ತಿದ್ದ ಮಾಜಿ ಮುಖ್ಯಮಂತ್ರಿ… ಹೀಗೆ ಒಂದೊಂದೇ ದುರಂತ ಕಥೆಗಳು ಹೊರಬರುತ್ತಿವೆ. ವಿಮಾನದಲ್ಲಿದ್ದ

ಬೆಂದು ಹೋದ ಜೀವಗಳು – ಕರಟಿ ಹೋದ ಕನಸುಗಳು… Read More »

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಅಪಾಯದಿಂದ ಪಾರು

ಹೊಸಂಗಡಿ: ರಾಜ್ಯ ಹೆದ್ದಾರಿ 70ರ ಕುಲೆಗಟ್ಟು ಎಂಬಲ್ಲಿ ಕಾರೊಂದು ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 3 ಗಂಟೆಗೆ ನಿದ್ರೆಯ ಮಂಪರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯಾವುದೇ ಗಂಭೀರ ಗಾಯ ಉಂಟಾಗಿಲ್ಲ ಎನ್ನಲಾಗಿದೆ. ಕಂಬ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿದ್ದು, ಸ್ಥಳೀಯರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಅಪಾಯದಿಂದ ಪಾರು Read More »

error: Content is protected !!
Scroll to Top