ಅಪಘಾತ

ಅತಿ ವೇಗದಿಂದ ಬಂದ ಕಾರು ಢಿಕ್ಕಿ: ವ್ಯಕ್ತಿ ಸಾವು

ಹುಬ್ಬಳ್ಳಿ: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಗುದ್ದಿದ್ದು, ವ್ಯಕ್ತಿಯ ರುಂಡ ದೇಹದಿಂದ ಬೇರ್ಪಟ್ಟು ಕಾರಿನ ಎಂಜಿನ್ ಒಳಗೆ ಸಿಲುಕಿದ ಘಟನೆ ಕುಂದಗೋಳದ ಶೇರವಾಡದ ಬಳಿ ನಡೆದಿದೆ. ಸದಾನಂದ ಕಾಟೇಗಾರ(32) ಮೃತ ದುರ್ದೈವಿ. ಇವರು ಶೇರವಾಡ ಗ್ರಾಮದವರು ಎಂದು ತಿಳಿದು ಬಂದಿದೆ. ಹಾಳಾಗಿ ನಿಂತಿದ್ದ ಬುಲ್ಡೋಸರ್ ಅನ್ನು ಸರಿಪಡಿಸಲು ಸದಾನಂದ ಅವರು ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿರುವುದಾಗಿದೆ. ಪರಿಣಾಮ ಅವರ ರುಂಡ […]

ಅತಿ ವೇಗದಿಂದ ಬಂದ ಕಾರು ಢಿಕ್ಕಿ: ವ್ಯಕ್ತಿ ಸಾವು Read More »

ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ : ಎರಡು ದಿನಗಳ ಹಿಂದೆ ತಾಲೂಕಿನ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ (55) ಮೃತ ವ್ಯಕ್ತಿ. ಏ.20ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಬೈಕನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ

ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಸ್ಕೂಟಿಗೆ ಬಸ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು

ಸರ್ವಿಸ್‌ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವಾಗ ಸ್ಕೂಟಿಯ ಹಿಂಬದಿಗೆ ಗುದ್ದಿದ ಬಸ್‌ ಉಡುಪಿ: ಎಕ್ಸ್‌ಪ್ರೆಸ್‌ ಬಸ್‌ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಪು ಹೆದ್ದಾರಿಯಲ್ಲಿ ಸಂಭವಿಸಿದೆ. ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಈ ಅಪಘಾತ ಸಂಬವಿಸಿದ್ದು, ಬಸ್‌ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ. ಕಾಪು ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದಂತೆ ಬಸ್‌ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ದುಬಾಯಿಯಲ್ಲಿ

ಸ್ಕೂಟಿಗೆ ಬಸ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು Read More »

ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್‌ ಪಲ್ಟಿ : ಹಲವರಿಗೆ ಗಾಯ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. 25ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದ ಪ್ರಯಾಣಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. SKSSF ಕಕ್ಕಿಂಜೆ ಅಂಬುಲೆನ್ಸ್, ಚಾರ್ಮಾಡಿ ಹಸನಬ್ಬ ಅವರ ತಂಡ ಹಾಗೂ ರಾಜ್ಯೋತ್ಸವ

ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್‌ ಪಲ್ಟಿ : ಹಲವರಿಗೆ ಗಾಯ Read More »

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ

ಉಡುಪಿ: ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕಟಪಾಡಿಯ ಕಲ್ಲಾಪು ಸಮೀಪ ನಡೆದಿದೆ. ಮೃತನನ್ನು ಕಟಪಾಡಿ ಸರ್ಕಾರಿ ಗುಡ್ಡೆ ನಿವಾಸಿ ಭೀಮಪ್ಪ ಹುನ್ನಳ್ಳಿ ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆಯ ಹನಗುಂದದವರಾಗಿದ್ದಾರೆ. ಸಹ ಸವಾರ ಕಟಪಾಡಿ ನಾಯ್ಕರ್‌ತೋಟದ ಸಾಗರ್ ಶೆಣೈ ಗಾಯಗೊಂಡಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ‌ಕಾರಣ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ Read More »

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಅಪಾರ ಹಾನಿ ಬೆಳ್ತಂಗಡಿ: ಬೆಳ್ತಂಗಡಿಯ ಎಲ್ಲೆಡೆ ಸೋಮವಾರ ಸಂಜೆ, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದು ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು

ಭಾರಿ ಗಾಳಿ ಮಳೆ : ಕಾರಿನ ಮೇಲೆ ಬಿದ್ದ ಮರ Read More »

ಜೀಪು – ಆಪೆ – ಟೆಂಪೋ ನಡುವೆ ಸರಣಿ ಅಪಘಾತ

ಪುತ್ತೂರು: ಮಂಜಲ್ಪಡ್ಪು ಬಳಿಯಲ್ಲಿ ಜೀಪು, ಟೆಂಪೋ ಮತ್ತು ಆಪೆ ‌ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಜೀಪು ‌ಚಾಲಕ ಬ್ರೇಕ್ ಒತ್ತಿದ ಪರಿಣಾಮ ಹಿಂದಿದ್ದ ಆಮೆ ವಾಹನ ಜೀಪ್‌ಗೆ ಗುದ್ದಿದೆ. ಹಾಗೆಯೇ ಆಪೆ ವಾಹನದ ಹಿಂದಿದ್ದ ಟೆಂಪೋ ಆಪೆಗೆ ಢಿಕ್ಕಿಯಾಗಿ ಈ ಸರಣಿ ಅಪಘಾತ ಸಂಭವಿಸಿದೆ.

ಜೀಪು – ಆಪೆ – ಟೆಂಪೋ ನಡುವೆ ಸರಣಿ ಅಪಘಾತ Read More »

ಕಂದಕಕ್ಕೆ ಉರುಳಿದ ಬಸ್‌ : 15 ಮಂದಿ ಸಾವು

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ದುರಂತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ

ಕಂದಕಕ್ಕೆ ಉರುಳಿದ ಬಸ್‌ : 15 ಮಂದಿ ಸಾವು Read More »

ತಾಂತ್ರಿಕ ದೋಷದಿಂದ 4 ತಾಸು ಆಕಾಶದಲ್ಲೇ ಹಾರಾಡಿದ ವಿಮಾನ

ಜೀವದ ಮೇಲೆ ಆಸೆ ಬಿಟ್ಟು ನಾವಿನ್ನು ಬರುವುದಿಲ್ಲ ಎಂದು ಸಂದೇಶ ಕಳುಹಿಸಿದ ಪ್ರಯಾಣಿಕರು ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. ಫ್ಲೈಟ್​​ನ್ನು ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲು ಹರಸಾಹಸ ಪಡಲಾಗಿದ್ದು, ಅಂತಿಮವಾಗಿ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡಿಂಗ್​​ ಮಾಡಲಾಗಿದೆ. Fly91 ಏರ್‌ಲೈನ್ಸ್ IC3401(ATRTURBOPROP AT7) ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣದಿಂದ

ತಾಂತ್ರಿಕ ದೋಷದಿಂದ 4 ತಾಸು ಆಕಾಶದಲ್ಲೇ ಹಾರಾಡಿದ ವಿಮಾನ Read More »

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು

ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17ರಂದು ಪ್ರಯಾಣಿಸಿದ್ದರು. ಅದೇ ದಿನ ರಾತ್ರಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೇರಳದ ತ್ರಿಶೂರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದರು. ಭಾನುವಾರ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು Read More »

error: Content is protected !!
Scroll to Top