ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ: ವ್ಯಕ್ತಿ ಮೃತ್ಯು!
ಪುತ್ತೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕರಾಯ ಗ್ರಾಮದ ಪೆದಮಲೆಯಲ್ಲಿ ನಡೆದಿದೆ. ಮೃತರನ್ನು ಕರಾಯ ಗ್ರಾಮದ ಸಗುಣ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಅಂಗಾರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಯಂತ ಕುಮಾರ್ ಎಂಬವರ ಮನೆಯಲ್ಲಿ ಕೆಲಸಕ್ಕೆ ಹೋಗಿದ್ದ ಸಗುಣ ಅವರು, ಗುಡ್ಡದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದಾರೆ. ಸ್ಥಳೀಯರು ಆರೈಕೆ ಮಾಡಿ, ಪುತ್ತೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು […]
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ: ವ್ಯಕ್ತಿ ಮೃತ್ಯು! Read More »









