ಬಸ್ಸಿಗೆ ಡಿಕ್ಕಿ ಹೊಡೆದ ಕಾರು | ನಾಲ್ವರಿಗೆ ಗಾಯ
ನೆಲ್ಯಾಡಿ: ಕಾರೊಂದು ಕೆಎಸ್ ಆರ್ ಟಿಸಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಹೇಶ್ (28), ಅಭಿಷೇಕ್ (30), ಮುತ್ತುರಾಜ್ (30), ಹಾಗೂ ನವೀನ್ (29) ಗಾಯಗೊಂಡವರು. ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಗಾಯಗೊಂಡವರು ಬೆಂಗಳೂರಿನ ಬನಶಂಕರಿ ಲೇ ಔಟ್ ನಿವಾಸಿಗಳೆಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿಗೆ ಡಿಕ್ಕಿ ಹೊಡೆದ ಕಾರು | ನಾಲ್ವರಿಗೆ ಗಾಯ Read More »









