ಅಪಘಾತ

ಕಾರುಗಳ ಡಿಕ್ಕಿ : ಒಂದೇ ಕುಟುಂಬದ ಐದು ಮಂದಿ ಸಾವು

ಮಂತ್ರಾಲಯಕ್ಕೆ ಹೊರಟಿದ್ದವರ ಕಾರು ಭೀಕರ ಅಪಘಾತ ಬೆಂಗಳೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಕೊಟೆಕಲ್‌ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇದರಲ್ಲಿ ಇಬ್ಬರು ಪುಟ್ಟ ಮಕ್ಕಳೂ ಇದ್ದಾರೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರು ಒಂದೇ ಕಾರಿನಲ್ಲಿ […]

ಕಾರುಗಳ ಡಿಕ್ಕಿ : ಒಂದೇ ಕುಟುಂಬದ ಐದು ಮಂದಿ ಸಾವು Read More »

ಉಪ್ಪಿನಂಗಡಿ : ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಟೆಂಪೊ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಪರಿಸರದ ಕೆಂಪುಹೊಳೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಉಪ್ಪಿನಂಗಡಿ : ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಟೆಂಪೊ Read More »

ಸೀರೆ ಬೈಕ್ ಟಯರ್‌ಗೆ ‌ಸುತ್ತಿ ರಸ್ತೆಗೆಸೆಯಲ್ಪಟ್ಟ ಮಹಿಳೆ

ಮಂಗಳೂರು: ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರ ಸೀರೆ ಟಯರ್‌ಗೆ ಸುತ್ತಿದ ಪರಿಣಾಮ ಮಹಿಳೆ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್‌ನ ಕಾನ ಎಂಬಲ್ಲಿ ನಡೆದಿದೆ. ಮಹಿಳೆ ತಮ್ಮ ಪುತ್ರನ ಜೊತೆಗೆ ಬೈಕಿನಲ್ಲಿ ಹೋಗುತ್ತಿದ್ದರು. ಅವರ ಸೀರೆ ಟಯರ್‌ಗೆ ಸುತ್ತಿದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಬಸ್‌ ಒಂದರ ಚಾಲಕ ಮೊಯ್ದಿ ಎಂಬವರು ಬಸ್ಸು ನಿಲ್ಲಿಸಿ, ರಸ್ತೆಗೆಸೆಯಲ್ಪಟ್ಟ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವುದಕ್ಕೆ ನೆರವಾಗಿದ್ದು, ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸೀರೆ ಬೈಕ್ ಟಯರ್‌ಗೆ ‌ಸುತ್ತಿ ರಸ್ತೆಗೆಸೆಯಲ್ಪಟ್ಟ ಮಹಿಳೆ Read More »

ಹಾಂಕಾಂಗ್‌ ಗಗನಚುಂಬಿ ಕಟ್ಟಡಗಳಲ್ಲಿ ಭೀಕರ ಬೆಂಕಿ ದುರಂತ : 44 ಮಂದಿ ಸಜೀವ ದಹನ

7 ಬಹುಮಹಡಿ ಕಟ್ಟಡಗಳಿಗೆ ವ್ಯಾಪಿಸಿದ ಬೆಂಕಿ; 279 ಮಂದಿ ನಾಪತ್ತೆ ಹಾಂಕಾಂಗ್‍: ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯಲ್ಲಿ ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅನೇಕ ಗಗನಚುಂಬಿ ಕಟ್ಟಡಗಳಿರುವ ಬೃಹತ್‌ ವಸತಿ ಸಮುಚ್ಚಯದಲ್ಲಿ ಬುಧವಾರ ಈ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 7 ಗಗನಚುಂಬಿ ಕಟ್ಟಡಗಳು ಬೆಂಕಿಯಿಂದ ಸಂಪೂರ್ಣ ನಾಶವಾಗಿವೆ. ರಕ್ಷಣಾ ಕಾರ್ಯ

ಹಾಂಕಾಂಗ್‌ ಗಗನಚುಂಬಿ ಕಟ್ಟಡಗಳಲ್ಲಿ ಭೀಕರ ಬೆಂಕಿ ದುರಂತ : 44 ಮಂದಿ ಸಜೀವ ದಹನ Read More »

ಪಲ್ಟಿಯಾಗಿ ನಜ್ಜುಗುಜ್ಜಾದ ಕಾರು: ಚಾಲಕನಿಗೆ ಗಾಯ

ಪುತ್ತೂರು: ಬಡಕ್ಕೋಡಿ ಮಸೀದಿ ಸಮೀಪದ ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಚಾಲಕನನ್ನು ‌ಸವಣೂರಿನ ಯತೀಶ್‌ ಕೆಡೆಂಜಿ ಎಂದು ಗುರುತಿಸಲಾಗಿದೆ. ಅವರ ತಲೆಗೆ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹಾಗೆಯೇ ಅವರು ಚಲಾಯಿಸುತ್ತಿದ್ದ ರಿಟ್ಜ್ ಕಾರು ನಜ್ಜುಗುಜ್ಜಾಗಿದ್ದು, ದೊಡ್ಡ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ಯತೀಶ್‌ ಅವರು ಪುತ್ತೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರಿನ ಚಾಲಕ ಅಡ್ಡ ಬಂದ ಮಗುವನ್ನು

ಪಲ್ಟಿಯಾಗಿ ನಜ್ಜುಗುಜ್ಜಾದ ಕಾರು: ಚಾಲಕನಿಗೆ ಗಾಯ Read More »

ದಕ್ಷ ಐಎಎಸ್‌ ಅಧಿಕಾರಿಯ ಪ್ರಾಣಕ್ಕೆ ಎರವಾದ ಶ್ವಾನ

ಭೀಕರ ಅಪಘಾತದಲ್ಲಿ ಮೂವರು ಸಾವು ಬೆಂಗಳೂರು: ಕಲಬುರಗಿಯ ಜೇವರ್ಗಿ ಸಮೀಪ ನಿನ್ನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಮಾರ್ಗ ಮಧ್ಯೆ ಶ್ವಾನ ಅಡ್ಡಬಂದ ಹಿನ್ನೆಲೆ ಅದನ್ನು ತಪ್ಪಿಸಲು ಹೋಗಿ ಜೇವರ್ಗಿ ಬೈಪಾಸ್‌ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬೀಳಗಿ ಅವರ ಸೋದರರಾದ ಶಂಕರ ಬೀಳಗಿ

ದಕ್ಷ ಐಎಎಸ್‌ ಅಧಿಕಾರಿಯ ಪ್ರಾಣಕ್ಕೆ ಎರವಾದ ಶ್ವಾನ Read More »

ಸೇಬು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಅಪಾರ ಪ್ರಮಾಣದಲ್ಲಿ ನಷ್ಟ

ಕಾರ್ಕಳ: ಕುದುರೆಮುಖ – ಮಾಳ ರಸ್ತೆಯಲ್ಲಿ ಕಾಶ್ಮೀರದಿಂದ ‌ಮಂಗಳೂರಿಗೆ ಸೇಬು ಹಣ್ಣುಗಳನ್ನು ರವಾನೆ ಮಾಡುತ್ತಿದ್ದ ಲಾರಿಯೊಂದು ಟೈರ್ ಸ್ಪೋಟಗೊಂಡ ಪರಿಣಾಮ ಹೊತ್ತಿ ಉರಿದ ಘಟನೆ ನಡೆದಿದೆ. ಚಾಲಕ ಮತ್ತು ಸಹಾಯಕ ಅಪಾಯದಿಂದ ಪಾರಾಗಿದ್ದಾರೆ‌. ಶನಿವಾರ ಮುಂಜಾನೆ ಈ ದುರಂತ ನಡೆದಿದೆ. ಘಾಟಿಯಲ್ಲಿ ‌ಲಾರಿ ಇಳಿಯುತ್ತಿದ್ದ‌ ಸಂದರ್ಭದಲ್ಲಿ ಟಯರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ರೂ. ಗಳ ಸೇಬು ಹಣ್ಣುಗಳು ಬೆಂಕಿಗಾಹುತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕೆ

ಸೇಬು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಅಪಾರ ಪ್ರಮಾಣದಲ್ಲಿ ನಷ್ಟ Read More »

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಮಡಿಕೇರಿ: ಭಾನುವಾರ ರಾತ್ರಿ ಗೋಣಿಕೊಪ್ಪದಲ್ಲಿ ನಡೆದ ಭೀಕರ ಅಪಘಾತ ಒಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕೈಕೇರಿ ಸಮೀಪ ಈ ದುರಂತ ನಡೆದಿದೆ. ವೇಗವಾಗಿ ಬಂದ ವಾಹನವೊಂದು ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪ್ರಮಾಣದ ಗಾಯಗಳಾಗಿವೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು Read More »

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಪಿಜಿಗೆ ಹೋಗಲು ಹಳಿ ದಾಟುವಾಗ ಡಿಕ್ಕಿಯಾದ ರೈಲು ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು Read More »

ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ

ಜನಪ್ರಿಯ ಗಾಯಕನ ಕಾರ್ಯಕ್ರಮಕ್ಕೆ ಮಿತಿಮೀರಿ ಬಂದ ಜನರಿಂದಾಗಿ ದುರ್ಘಟ ನೆ ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿದ ಐವರ ವಿರುದ್ಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ಕಾಸರಗೋಡು ಫ್ಲೀ ಯುವಜನ

ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ Read More »

error: Content is protected !!
Scroll to Top