ಅಪಘಾತ

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು […]

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ

ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಮಂಗಳೂರು : ನಗರದ ಅಕ್ಬರ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಜ್ವಾಲೆಯು ಕಟ್ಟಡದ ಹಲವು ಮಳಿಗೆಗಳಿಗೆ ವ್ಯಾಪಿಸಿದ್ದು, ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ. ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಅಂಗಡಿಗೂ ಬೆಂಕಿಯಿಂದ ಹಾನಿ ಉಂಟಾಗಿದೆ. ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಂಗಡಿಗಳಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ Read More »

ಸಿದ್ದರಾಮಯ್ಯ ಕಟೌಟ್‌ ಬಿದ್ದು ಮೂವರಿಗೆ ಗಂಭೀರ ಗಾಯ

ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಅಳವಡಿಸಿದ್ದ ಬೃಹತ್‌ ಕಟೌಟ್‌ ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ

ಸಿದ್ದರಾಮಯ್ಯ ಕಟೌಟ್‌ ಬಿದ್ದು ಮೂವರಿಗೆ ಗಂಭೀರ ಗಾಯ Read More »

ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ

ಭೀಕರ ಬೆಂಕಿ ದುರಂತದಲ್ಲಿ 100ಕ್ಕೂ ಅಧಿಕ ಜನರು ಸಾವಿಗೀಡಾಗಿರುವ ಶಂಕೆ ಇಸ್ಲಾಮಾಬಾದ್‌: ಕರಾಚಿಯ ಭೂಗತ ಜಗತ್ತಿನ ಪಾತಕಿ ದಾವೂದ್‌ ಇಬ್ರಾಹಿಂ ಒಡೆತನದ ಗುಲ್ ಪ್ಲಾಜಾ ಶಾಪಿಂಗ್‌ ಮಾಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಪರಿಶೀಲನೆ ವೇಳೆ ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆಯಾಗಿದ್ದು, ಒಟ್ಟು ಸಾವು 100 ಮೀರಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪಾಕಿಸ್ತಾನದ ʻಮನಿ ಕ್ಯಾಪಿಟಲ್‌ʼ ಅಂತಲೇ ಫೇಮಸ್‌ ಆಗಿರುವ ಕರಾಚಿ ಸದರ್‌ ಪ್ರದೇಶದಲ್ಲಿರುವ ಗುಲ್‌ ಶಾಪಿಂಗ್‌ ಮಾಲ್‌ನ ನೆಲಮಾಳಿಗೆಯಲ್ಲಿ ಜ.17

ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ Read More »

ಬೆಂಕಿ ಅವಘಡ : 13 ಇಲೆಕ್ಟ್ರಿಕ್‌ ಸ್ಕೂಟರ್‌ ಸುಟ್ಟು ಕರಕಲು

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಇಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬುಧವಾರ ರಾತ್ರಿ 9:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಓಡಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಇಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ

ಬೆಂಕಿ ಅವಘಡ : 13 ಇಲೆಕ್ಟ್ರಿಕ್‌ ಸ್ಕೂಟರ್‌ ಸುಟ್ಟು ಕರಕಲು Read More »

ಕಾರು – ಲಾರಿ ನಡುವೆ ಅಪಘಾತ: ಇಬ್ಬರು ಸಾವು

ಕಾಸರಗೋಡು: ಚಟ್ಟಂಚಾಲ್ ತೆಕ್ಕಿಲ್ ಬಳಿಯಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮೂವರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ನಡೆದಿದೆ. ಮೃತರನ್ನು ಸಜೀಪ ಬೈಲುಗುತ್ತು ನಿವಾಸಿ ಆಸಿಫ್ ಮುಹಮ್ಮದ್ ಮತ್ತು ನಾಟೆಕಲ್ ನಿವಾಸಿ ಮುಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಐವರು ಗೆಳೆಯರು ವ್ಯವಹಾರಕ್ಕೆ ಸಂಬಂಧಿಸಿದ ಹಾಗೆ ಕಾರಿನಲ್ಲಿ ವಯರನಾಡಿಗೆ ತೆರಳಿ ಊರಿಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಸಿಫ್ ‌ಸ್ಥಳದಲ್ಲೇ ಮೃತಪಟ್ಟಿದ್ದು, ಶಫೀಕ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿದೆ. ಮಂಜೇಶ್ವರ

ಕಾರು – ಲಾರಿ ನಡುವೆ ಅಪಘಾತ: ಇಬ್ಬರು ಸಾವು Read More »

ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್: ತಂದೆ ಗಂಭೀರ, ಮಗ ಸಾವು

ಸುಳ್ಯ: ನಿಯಂತ್ರಣ ತಪ್ಪಿ ಬೆಳ್ಳಾರೆ ರಸ್ತೆಯ ಕಲ್ಲೋಣಿ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಮೋರಿಗೆ ಬೈಕ್ ಬಿದ್ದ ಪರಿಣಾಮ ಮಗ ಮೃತಪಟ್ಟಿದ್ದು, ತಂದೆ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಘಟನೆ ನಡೆದಿದೆ. ಕಡಬದ ಮರ್ಧಾಳ ಸಮೀಪದ ನಿಶಾಂತ್(24) ಮೃತಪಟ್ಟಿದ್ದು, ಬೈಕಿನಲ್ಲಿದ್ದ ಅವರ ತಂದೆ ಮೋನಪ್ಪ ಅವರಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿವೆ. ತಂದೆ ಮತ್ತು ಮಗ ಶಬರಿಮಲೆಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಸುಳ್ಯಕ್ಕೆ ಬೈಕ್ ಮೂಲಕ ತೆರಳುತ್ತಿದ್ದರು. ತಿರುವಿನಲ್ಲಿ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಗಾಯಾಳು ಮೋನಪ್ಪ

ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್: ತಂದೆ ಗಂಭೀರ, ಮಗ ಸಾವು Read More »

ತೆಂಗಿನಮರದಿಂದ ಬಿದ್ದು ನಿವೃತ್ತ ಶಿಕ್ಷಕ ಸಾವು

ಕಾಳುಮೆಣಸು ಕೊಯ್ಯಲು ಮರ ಏರಿದಾಗ ಸಂಭವಿಸಿದ ದುರ್ಘಟನೆ ಪುತ್ತೂರು : ನಿವೃತ್ತ ಶಿಕ್ಷಕರೊಬ್ಬರು ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ಘಟನೆ ಬೆಟ್ಟಂಪಾಡಿಯಲ್ಲಿ ಸೋಮವಾರ ಸಂಭವಿಸಿದೆ. ಬೆಟ್ಟಂಪಾಡಿ ಗ್ರಾಮದ ಗುಮ್ಮಟಿಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತಪಟ್ಟಿರುವ ವ್ಯಕ್ತಿ. ಗುಮ್ಮಟಿಗದ್ದೆಯಲ್ಲಿ ಸೋಮವಾರ ಕಾಳುಮೆಣಸು ಕೀಳಲೆಂದು ತೆಂಗಿನಮರ ಏರಿದ್ದ ನಾರಾಯಣ ನಾಯ್ಕ ಬಿದ್ದು ಮೃತಪಟ್ಟಿದ್ದಾರೆ. ಅಲ್ಯುಮಿನಿಯಂ ಏಣಿ ಇಟ್ಟು ಅವರು ಕಾಳುಮೆಣಸು ಕೊಯ್ಯುತ್ತಿದ್ದರು. ಈ ವೇಳೆ ಏಣಿ ಜಾರಿ ಏಣಿ ಸಮೇತ ಬಿದ್ದ ನಾರಾಯಣ ನಾಯ್ಕ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿತ್ತು.

ತೆಂಗಿನಮರದಿಂದ ಬಿದ್ದು ನಿವೃತ್ತ ಶಿಕ್ಷಕ ಸಾವು Read More »

ಪುತ್ತೂರು : ವಿದ್ಯುತ್‌ ಕಂಬದ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಬಲೂನ್‌ ವಿದ್ಯುತ್‌ ತಂತಿಗೆ ತಗುಲಿದಾಗ ಸಂಭವಿಸಿದ ಅವಘಡ ಪುತ್ತೂರು : ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ

ಪುತ್ತೂರು : ವಿದ್ಯುತ್‌ ಕಂಬದ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ Read More »

ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು

ಹಳಿತಪ್ಪಿ ಇನ್ನೊಂದು ಹಳಿಗೆ ಜಿಗಿದಾಗ ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಮ್ಯಾಡ್ರಿಡ್‌ : ಸ್ಪೇನ್ ದೇಶದ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದು ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ ಎಂದು ಸ್ಪೇನ್‌ನ ಅದಿಪ್ ರೈಲು ನೆಟ್ ವಾರ್ಕ್ ಆಪರೇಟರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ

ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ : 21 ಪ್ರಯಾಣಿಕರು ಸಾವು Read More »

error: Content is protected !!
Scroll to Top