ಅಪಘಾತ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಪುತ್ತೂರು: ಕಳೆದ ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರ್ಮ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲೀಕ ಗಣೇಶ್ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲೈಟಿಂಗ್ಸ್ ‌ಸಂಬಂಧಿಸಿದ ಕೆಲಸಕ್ಕೆ ಡಿ. 6 ರಂದು ಬದಿಯಡ್ಕಕ್ಕೆ ತೆರಳಿದ್ದ ಅವರು ಸ್ಕೂಟರ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೃತರು ಪತ್ನಿ, ಇಬ್ಬರು […]

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು Read More »

ಚಾರ್ಮಾಡಿ ಘಾಟಿಯಲ್ಲಿ ಭೀಕರ ಕಾಡ್ಗಿಚ್ಚು

2 ಕಿ.ಮೀ. ತನಕ ವ್ಯಾಪಿಸಿದ ಬೆಂಕಿಗೆ ಹುಲ್ಲುಗಾವಲು ಭಸ್ಮ ಮಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ ತೀವ್ರವಾದ

ಚಾರ್ಮಾಡಿ ಘಾಟಿಯಲ್ಲಿ ಭೀಕರ ಕಾಡ್ಗಿಚ್ಚು Read More »

ಪಿಕಪ್ – ಸ್ಕೂಟಿ ಢಿಕ್ಕಿ: ಮಹಿಳೆ ಸಾವು

ಚಿಕ್ಕಮಗಳೂರು: ಪಿಕಪ್ ಮತ್ತು ಸ್ಕೂಟಿ ‌ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಶಿನಗುಪ್ಪೆ ಗ್ರಾಮದಲ್ಲಿ ನಡೆದಿದೆ. ಚಂದ್ರಿಕಾ (40) ಎಂಬವರೇ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಏಕಾಏಕಿ ಅವರ ಮೇಲೆ ಪಿಕಪ್ ಹರಿದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗಮಿಸಿದ್ದು, ಈ ವೇಳೆ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು. ಸದ್ರಿ ಅಪಘಾತ ಸಂಭವಿಸುತ್ತಿರುವ

ಪಿಕಪ್ – ಸ್ಕೂಟಿ ಢಿಕ್ಕಿ: ಮಹಿಳೆ ಸಾವು Read More »

ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ ಉಜಿರೆ ಕಡೆಯಿಂದ ಚಾರ್ಮಾಡಿ ಕಡೆಗೆ

ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರಿಗೆ ಗಂಭೀರ ಗಾಯ Read More »

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ಕಾರಿನಲ್ಲಿದ್ದ ಯುವಕ-ಯುವತಿ ಅದೃಷ್ಟವಶಾತ್‌ ಪಾರು ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು Read More »

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ

ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಪಲಾಯನ ಮಾಡಿದ್ದ ಕಾರು ಸುಳ್ಯ: ಕೊಡಗು ಸಂಪಾಜೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನ ಸಾವಿಗೆ ಕಾರಣವಾಗಿದ್ದ ಕಾರನ್ನು ಮಡಿಕೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಿಕ್ಷಾಕ್ಕೆ ಹಿಂದಿನಿಂದ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಸುಂದರ ಸಾವಿಗೀಡಾಗಿದ್ದರು. ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ Read More »

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ

ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಡಿಸಿಎಂ ಮುಂಬೈ: ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಬಾರಾಮತಿಯಲ್ಲಿ ನೆರವೇರಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಪವಾರ್ ಕುಟುಂಬ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಾದ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯ ರಂಗದ ನಾಯಕರು ಮತ್ತು ಎಲ್ಲ ವರ್ಗದ ಜನರು ಅಂತ್ಯಕ್ರಿಯೆಯಲ್ಲಿ

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ Read More »

ಪಾನಮತ್ತ ನಟನಿಂದ ಸರಣಿ ಅಪಘಾತ

ಯದ್ವಾತದ್ವಾ ಕಾರು ಓಡಿಸಿ ಹಲವು ವಾಹನಗಳಿಗೆ ಗುದ್ದಿದ ನಟ ಬೆಂಗಳೂರು: ಕನ್ನಡದ ನಟನೊಬ್ಬ ಪಾನಮತ್ತನಾಗಿ ಯದ್ವಾತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಕೆಲವು ಚಿತ್ರಗಳಲ್ಲಿ ಹೀರೊ ಆಗಿ ನಟಿಸಿದ್ದ ಮಯೂರ್ ಪಟೇಲ್​ ಎಂಬಾತ ಶರಾಬಿನ ಮತ್ತಿನಲ್ಲಿ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ.

ಪಾನಮತ್ತ ನಟನಿಂದ ಸರಣಿ ಅಪಘಾತ Read More »

ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಜಿತ್‌ ಪವಾರ್‌ ದುರ್ಮರಣ

ಪ್ರಧಾನಿ ಮೋದಿ, ಗಣ್ಯರಿಂದ ಸಂತಾಪದ ಮಹಾಪೂರ ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಪ್ರಭಾವಿ ರಾಜಕೀಯ ನಾಯಕ ಅಜಿತ್‌ ಪವಾರ್‌ ವಿಮಾನ ಅವಘಡದಲ್ಲಿ ಮೃತ್ಯುವಿಗೀಡಾಗಿರುವ ದುರ್ಘಟನೆ ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದೆ. ನಿನ್ನೆ ಮುಂಬೈಯಲ್ಲಿ ಸಚಿವ ಸಂಪುಟ ಸಭಯಲ್ಲಿ ಭಾಗವಹಿಸಿ ಇಂದು ಬೆಳಗ್ಗೆ 8 ಗಂಟೆಗೆ ಕಿರು ವಿಮಾನದಲ್ಲಿ ತನ್ನ ತವರು ಕ್ಷೇತ್ರವಾದ ಬಾರಾಮತಿಗೆ ಹೊರಟಿದ್ದ ಅಜಿತ್‌ ಪವಾರ್‌ 8.45ಕ್ಕೆಲ್ಲ ಇನ್ನಿಲ್ಲವಾಗಿದ್ದಾರೆ. ಬಾರಾಮತಿಯ ಜಿಲ್ಲಾ ಪರಿಸತ್‌ ಚುನಾವಣೆಯ ಪ್ರಚಾರಕ್ಕೆಂದು ಹೊರಟಿದ್ದ ಅವರ ಪಾಲಿಗೆ ಇದುವೇ ಕೊನೆಯ ಪ್ರಯಾಣವಾಗಿತ್ತು. ನಾಲ್ಕು ಸಭೆಗಳಲ್ಲಿ

ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಜಿತ್‌ ಪವಾರ್‌ ದುರ್ಮರಣ Read More »

ವಿಮಾನ ಅವಘಡದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ದುರ್ಮರಣ

ಮುಂಬೈ: ಎನ್‌ಸಿಪಿ ನಾಯಕ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಗ್ಗೆ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಲ್ಯಾಂಡಿಂಗ್‌ಗೆ ಯತ್ನಿಸುತ್ತಿದ್ದಾಗ ಭೀಕರವಾಗಿ ಪತನಗೊಂಡಿದೆ. ಅಜಿತ್ ಪವಾರ್ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. 66 ವರ್ಷದ ಅಜಿತ್ ಪವಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಹಾಗೂ ಅವರ ವೈಯಕ್ತಿಕ ಸಹಾಯಕ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನೂ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ

ವಿಮಾನ ಅವಘಡದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ದುರ್ಮರಣ Read More »

error: Content is protected !!
Scroll to Top