ಅಪಘಾತ

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು […]

ಕರ್ನೂಲ್ ಬಸ್ ಬೆಂಕಿಗಾಹುತಿ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ಖಾಸಗಿ ಬಸ್ಸಿಗೆ ಬೆಂಕಿ: 20 ಮಂದಿ ಸಾವು, ಹಲವರಿಗೆ ಗಾಯ

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡು 20 ಮಂದಿ ದಹನವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಬಸ್ಸಿನಲ್ಲಿ 42 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್‌ಗೆ ಬೆಂಕಿ ಹತ್ತಿದ್ದು ಇದರಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ ಬೆಂಗಳೂರಿನಿಂದ ಹೈದರಾಬಾದ್‌ಗೆ ಹೋಗುತ್ತಿತ್ತು. ಬೆಳಗ್ಗಿನ ಜಾವ 3.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬಸ್ಸಿಗೆ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಅಪಘಾತದ ಪರಿಣಾಮ ಬೈಕ್

ಖಾಸಗಿ ಬಸ್ಸಿಗೆ ಬೆಂಕಿ: 20 ಮಂದಿ ಸಾವು, ಹಲವರಿಗೆ ಗಾಯ Read More »

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು

ಟಯರ್‌ ಬ್ಲಾಸ್ಟ್‌ ಆಗಿ ಬಸ್‌ ಬೆಂಕಿಗಾಹುತಿ ಬೆಂಗಳೂರು: ಖಾಸಗಿ ಬಸ್‌ಗೆ ನಡುರಸ್ತೆಯಲ್ಲೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿರುವ ಘಟನೆ ಆಂಧ್ರದ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ತಲುಪಿದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರುಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೋಗುತ್ತಿರುವಾಗ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಟಯರ್‌ ಬ್ಲಾಸ್ಟ್‌ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನು

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು Read More »

ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ

ಮೀನು ಹಿಡಿಯಲು ಹೋದ ಮಕ್ಕಳ ದುರಂತ ಅಂತ್ಯದಿಂದ ಇಡೀ ಗ್ರಾಮಕ್ಕೆ ಶೋಕ ಉಡುಪಿ: ನಿನ್ನೆ ಒಂದೇ ದಿನ ಮಲ್ಪೆ ಮತ್ತು ಬೈಂದೂರಲ್ಲಿ ಸಮುದ್ರದಲ್ಲಿ ಮುಳುಗಿ ನಾಲ್ಕು ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕಡಲ ಕಿನಾರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್‌ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ

ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ Read More »

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆದ್ದಾರಿ ಬದಿಯಲ್ಲಿ ಕಾರು ದುರಸ್ತಿ ಮಾಡುತ್ತಿದ್ದ ಮೆಕ್ಯಾನಿಕ್‌ ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು Read More »

ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು

ಖರೀದಿಸಿ ಐದು ದಿನವಷ್ಟೇ ಆಗಿದ್ದ ಬಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಜೈಪುರ : ರಾಜಸ್ಥಾನದ ಜೈಸಲ್ಮೇರ್ ಬಳಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 20 ಜನರು ಜೀವಂತ ಸುಟ್ಟು ಕರಕಲಾದ ದಾರುಣ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಹೊಸದಾಗಿ ಖರೀದಿ ಮಾಡಿದ್ದ ಬಸ್‌ ಕೆಲವೇ ಟ್ರಿಪ್‌ಗಳನ್ನಷ್ಟೇ ಮಾಡಿತ್ತು ಎಂದು ತಿಳಿದುಬಂದಿದೆ. ಸಂಜೆ 4 ಗಂಟೆಗೆ ಪ್ರಯಾಣ ಆರಂಭಿಸಿದ ಬಸ್‌ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಹಿಂಬದಿಯಿಂದ ಹೊಗೆ ಬರಲಾರಂಭಿಸಿದೆ. ಚಾಲಕ ಬಸ್ಸನ್ನು ರಸ್ತೆ

ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು Read More »

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

ಮನೆಯ ಎದುರು ಕುಳಿತಿದ್ದ ವೇಳೆ ಬಡಿದ ಸಿಡಿಲು ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಸಿಡಲು ಬಡಿದಿದ್ದು,

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು Read More »

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ

ಮಂಗಳೂರು : ಉಳ್ಳಾಲದ ಕೋಟೆಪುರದಲ್ಲಿರುವ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕದ ಗೋದಾಮು ಬುಧವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಶವಾಗಿದೆ. ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಖಾದರ್ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಫುಡ್ ಗೋದಾಮಿಗೆ ರಾತ್ರಿ ಬೆಂಕಿಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲೆ ಹೊರಗೂ ಆವರಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ತುಂಬಾ ಹೊತ್ತಿನ ನಂತರ ಮಂಗಳೂರಿನಿಂದ ಅಗ್ನಿ ಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಿದೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿದ್ದರು.

ಉಳ್ಳಾಲದಲ್ಲಿ ಮೀನು ಸಂಸ್ಕರಣಾ ಘಟಕ ಬೆಂಕಿಗಾಹುತಿ Read More »

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ

ಮುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಅಪೂರ್ವ ಭಟ್‌ ಪುತ್ತೂರು: ನಾಲ್ಕು ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಬರೋಬ್ಬರಿ 134 ದಿನ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿದ ಅಪೂರ್ವ ಭಟ್‌ ಅಗಲಿಕೆ ಭಾರಿ ದುಃಖ ತಂದಿದ್ದು, ಸಾವಿರಾರು ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಕಂಬನಿ

4 ತಿಂಗಳು ಜೀವನ್ಮರಣ ಹೋರಾಟ ನಡೆಸಿ ನಿಧನರಾದ ಅಪೂರ್ವ ಭಟ್‌ : ಕಂಬನಿ ಮಿಡಿದ ಪುತ್ತೂರಿನ ಜನ Read More »

ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು

ಬೆಳ್ತಂಗಡಿ: ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಸೋಮವಾರ ರಾತ್ರಿ ಹರೀಶ್ ಎಂಬವರ ಮನೆ ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ರಾತ್ರಿ ಆಗುತ್ತಿದ್ದಂತೆಯೇ ಮನೆಗೆ ಬೆಂಕಿ ಹತ್ತಿಕೊಂಡಿದೆ.ಮನೆಗೆ

ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು Read More »

error: Content is protected !!
Scroll to Top