ಬೈಕ್ ಮೇಲೆ ಕಾಡುಕೋಣ ದಾಳಿ : ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ಸಂಭವಿಸಿದೆ. ಬೈಕ್ ಸವಾರನನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಮಗ ಸುಕೇಶ್(31) ಎಂಬವರು ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೆಳ್ತಂಗಡಿಯಿಂದ ಕೆಲಸ ಮುಗಿಸಿ ಡಿ.26ರಂದು ರಾತ್ರಿ ಸುಮಾರು 8.45ಕ್ಕೆ ಮನೆಗೆ ಬೈಕ್ನಲ್ಲಿ ಬರುತ್ತಿದ್ದಾಗ ಲಾಯಿಲ ಗ್ರಾಮದ ಅಲೆಕ್ಕಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ […]
ಬೈಕ್ ಮೇಲೆ ಕಾಡುಕೋಣ ದಾಳಿ : ಸವಾರನಿಗೆ ಗಂಭೀರ ಗಾಯ Read More »










