ಅಪಘಾತ

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ

ಪುತ್ತೂರು: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಗುಂಪಕಲ್ಲು ಎಂಬಲ್ಲಿ ಮನೆಯೊಂದರ ಮೇಲೆ ತೆಂಗಿನಮರ ಬಿದ್ದು ಮನೆಗೆ ಹಾನಿ ಉಂಟಾದ ಘಟನೆ ನಡೆದಿದೆ. ಅಕ್ಕಪಕ್ಕದಲ್ಲಿದ್ದ ಶ್ವೇತಾ ಹಾಗೂ ವಿಜಯ ಎಂಬವರ ಮನೆ ಮೇಲೆ ತೆಂಗಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ಮಾಡಿ ಮನೆ ಮೇಲೆ ಬಿದ್ದ ತೆಂಗಿನ ಮರವನ್ನು ತೆರವುಗೊಳಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾರೀ ಗಾಳಿಮಳೆ : ಮನೆ ಮೇಲೆ ಬಿದ್ದ ತೆಂಗಿನಮರ Read More »

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ

ಸಿಂಗಾಪುರ: ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿ ಅವಘಡದಲ್ಲಿ ಮಾರ್ಕ್‌ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಅಮ್ಮಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಬರುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಈ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದಾರೆ  ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ Read More »

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ

ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಟೆಂಪೋ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರು ಖಾಸಗಿ ಬಸ್‍ ನಿಲ್ದಾಣದ ಬಳಿ ಇಂದು ನಡೆದಿದೆ. ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು ಪರಿಣಾಮ ಟೆಂಪೋ ಪಕ್ಕದಲ್ಲಿದ್ದ ಅಂಗಡಿಯೊಂದಕ್ಕೆ ನುಗ್ಗಿದೆ. ಘಟನೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ Read More »

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ

ಬೆಳ್ತಂಗಡಿ : ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ  ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೇಣೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನೌಶದ್ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕ ಎನ್ನಲಾಗಿದೆ. ಕಾರು ಚಾಲಕ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಮಂಗಳೂರಿನ

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ Read More »

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ. ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಲಾರಿ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು

12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್‌ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »

ಮರದ ಗೆಲ್ಲು ಕಡಿಯುತ್ತಿದ್ದಾಗ ವಿದ್ಯುತ್‍ ಶಾಕ್‍ ಹೊಡೆದು ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಮರದ ಗೆಲ್ಲು ಕಡಿಯುತ್ತಿದ್ದಾಗ ವಿದ್ಯುತ್‍ ಶಾಕ್‍ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಪುಂಡಿಕ್ಕು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ನಿವಾಸಿ ಚನನ ಗೌಡ (69) ಮೃತಪಟ್ಟವರು. ಚನನ ಗೌಡರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ.

ಮರದ ಗೆಲ್ಲು ಕಡಿಯುತ್ತಿದ್ದಾಗ ವಿದ್ಯುತ್‍ ಶಾಕ್‍ ಹೊಡೆದು ಕಾರ್ಮಿಕ ಮೃತ್ಯು Read More »

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಪ್ರಯಾಣಿಕನೋರ್ವ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಮೃತಪಟ್ಟವರು. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್‌ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »

error: Content is protected !!
Scroll to Top