ಅಪಘಾತ

ಕುತ್ತಾರ್‌ : 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಬಟ್ಟೆ ಒಣಗಲು ಹಾಕುವಾಗ ಆಯತಪ್ಪಿ ಬಿದ್ದ ವೈದ್ಯ ದಂಪತಿಯ ಪುತ್ರಿ ಮಂಗಳೂರು: ಬಾಲಕಿ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ತೊಕ್ಕೊಟ್ಟು ಸಮೀಪ ಕುತ್ತಾರ್‌ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಯೆನೆಪೋಯ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಮುಮ್ತಾಜ್‌ ಅಹ್ಮದ್‌ ಮತ್ತು ಡಾ.ಕಮ್ರಾಜ್‌ ದಂಪತಿಯ ಪುತ್ರಿ 15ರ ಹರೆಯದ ಹಿಬಾ ಐಮನ್‌ ಸಾವಿಗೀಡಾಗಿರುವ ಬಾಲಕಿ ಕುತ್ತಾರ್‌ನಲ್ಲಿರುವ ಸಿಲಿಕೋನಿಯಾ ಎಂಬ ಬಹುಮಹಡಿ ವಸತಿ ಸಂಕೀರ್ಣದ ಫ್ಲ್ಯಾಟ್‌ನಲ್ಲಿ ಈ ವೈದ್ಯ ದಂಪತಿ ವಾಸವಾಗಿದ್ದರು. ಇದೇ ಕಟ್ಟಡದಿಂದದ ಬಾಲಕಿ ಬಿದ್ದಿದ್ದಾಳೆ. 18 ಮಹಡಿಗಳ ಬೃಹತ್‌ […]

ಕುತ್ತಾರ್‌ : 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು Read More »

ಅಹಮದಾಬಾದ್‌ ವಿಮಾನ ದುರಂತ : ಆಸ್ಪತ್ರೆಗೆ ಆಗಮಿಸಿದ ಮೋದಿ

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್‌ಗೆ ಬಂದಿಳಿದಿದ್ದು, ಇಲ್ಲಿನ ಸಿವಿಲ್ ಆಸ್ಪತ್ರೆಗೆ ಆಗಮಿಸಿ ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ. ಮೆಡಿಕಲ್ ಕಾಲೇಜು ಹಾಸ್ಟೆಲ್​ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್​ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.

ಅಹಮದಾಬಾದ್‌ ವಿಮಾನ ದುರಂತ : ಆಸ್ಪತ್ರೆಗೆ ಆಗಮಿಸಿದ ಮೋದಿ Read More »

ಅಹಮದಾಬಾದ್‌ ವಿಮಾನ ದುರಂತ : ಇಂದು ಪ್ರಧಾನಿ ಮೋದಿ ಭೇಟಿ

ನವದೆಹಲಿ: ಏರ್‌ ಇಂಡಿಯಾ ವಿಮಾನ ಪತನಗೊಂಡು 265 ಮಂದಿ ಸಾವನ್ನಪ್ಪಿರುವ ಅಹಮದಾಬಾದ್‌ನ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಸಚಿವರು ಮತ್ತು ಅಧಿಕಾರಿಗಳ ಜೊತೆ ನಿನ್ನೆಯಿಂದೀಚೆಗೆ ನಿರಂತರ ಸಂಪರ್ಕದಲ್ಲಿರುವ ಮೋದಿ ಇಂದು ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ವಿಮಾನ ಪತನಗೊಂಡ ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯೂ ಅವಘಡದ ಕುರಿತು ಕೇಂದ್ರ

ಅಹಮದಾಬಾದ್‌ ವಿಮಾನ ದುರಂತ : ಇಂದು ಪ್ರಧಾನಿ ಮೋದಿ ಭೇಟಿ Read More »

ಅಹಮದಾಬಾದ್‌ವಿಮಾನ ದುರಂತ ಸಾವಿನ ಸಂಖ್ಯೆ 265ಕ್ಕೇರಿಕೆ

ಡ್ರೀಮ್‌ಲೈನರ್‌ನಲ್ಲಿ ಪ್ರಯಾಣಿಸುತ್ತಿದ್ದವರ ಕನಸುಗಳೆಲ್ಲ ಆಕಾಶದಲ್ಲೇ ಸುಟ್ಟು ಕರಕಲಾಯಿತು 1.25 ಲಕ್ಷ ಲೀಟರ್‌ನಷ್ಟು ಪೆಟ್ರೋಲ್‌ ಸ್ಫೋಟಿಸಿ ಭೀಕರ ಅವಘಡ ನವದೆಹಲಿ: ಡ್ರೀಮ್‌ಲೈನರ್‌ ವಿಮಾನದಲ್ಲಿ ಬದುಕಿನ ನಾನಾ ಕನಸುಗಳನ್ನು ಹೊತ್ತು ಪ್ರಯಾಣಿಸುತ್ತಿದ್ದವರ ಕನಸುಗಳೆಲ್ಲ ಆಕಾಶದಲ್ಲೇ ಹೊತ್ತಿ ಉರಿದು ಕರಟಿ ಹೋಗಿವೆ. ದೇಶ ಕಂಡ ಮಹಾ ವಿಮಾನ ದುರಂತವೊಂದು 265 ಮಂದಿಯ ಪ್ರಾಣ ಕಸಿದುಕೊಂಡಿದೆ. ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನಗೊಂಡು ಸಂಭವಿಸಿದ ಮಹಾದುರಂತದಲ್ಲಿ ಒಟ್ಟು 265 ಮಂದಿ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ 242 ಮಂದಿಯ ಪೈಕಿ ಓರ್ವ ಮಾತ್ರ

ಅಹಮದಾಬಾದ್‌ವಿಮಾನ ದುರಂತ ಸಾವಿನ ಸಂಖ್ಯೆ 265ಕ್ಕೇರಿಕೆ Read More »

ಅಹಮದಾಬಾದ್‍ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್‍ ಮಾಜಿ ಸಿಎಂ ವಿಜಯ್ ರೂಪಾನಿ‌ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್‍

ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಇರುವ ಕುರಿತು ಫೋಟೊಗಳು ವೈರಲ್‍ ಆಗುತ್ತಿದೆ. ಗುಜರಾತಿನ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವಘಡದಲ್ಲಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. 2016-2021ರವರೆಗೆ ಮುಖ್ಯಮಂತ್ರಿಯಾಗಿದ್ದ ರೂಪಾನಿ ಅವರು ಕುಳಿತಿರುವುದನ್ನು ಸೆಲ್ಫಿ ತೆಗೆದ ಸಹಪ್ರಯಾಣಿಕೆಯ ಫೊಟೋ ಇದೀಗ ವೈರಲ್ ಆಗುತ್ತಿದೆ. ಮೇಘಾನಿ ನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನ ಬಿದ್ದಿದ್ದು, ಹಲವು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು‌ ತಿಳಿದುಬಂದಿದೆ. ವಿಮಾನದ

ಅಹಮದಾಬಾದ್‍ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್‍ ಮಾಜಿ ಸಿಎಂ ವಿಜಯ್ ರೂಪಾನಿ‌ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್‍ Read More »

ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆದ ತಕ್ಷಣದಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವೊಂದು ಗುಜರಾತಿನ ಅಹಮದಾಬಾದ್‌ನಲ್ಲಿ ಪತನವಾದ ದುರಂತ ಇಂದು ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಮಧ್ಯಾಹ್ನ ಗುಜರಾತ್‌ ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏ‌ರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್

ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ Read More »

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು

ಮಂಗಳೂರು: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾ ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು Read More »

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ

ರಾಸಾಯನಿಕ, ತೈಲ ತುಂಬಿರುವ ಕಂಟೈನರ್‌ಗಳು ಸ್ಫೋಟಿಸುವ ಆತಂಕ ಮಂಗಳೂರು: ಕೇರಳದ ಕರಾವಳಿ ಸಮೀಪ ಸಿಂಗಾಪುರ ಮೂಲದ ಕಂಟೈನರ್‌ ಸಾಗಿಸುತ್ತಿದ್ದ ಬೃಹತ್‌ ಹಡಗಿಗೆ ಭೀಕರ ಸ್ಫೋಟದ ಬಳಿಕ ಹತ್ತಿಕೊಂಡ ಬೆಂಕಿಯನ್ನು ನಂದಿಸಲು 48 ತಾಸುಗಳ ಸತತ ಕಾರ್ಯಾಚರಣೆಯ ಬಳಿಕವೂ ಸಾಧ್ಯವಾಗಿಲ್ಲ. ಹಡಗಿನಲ್ಲಿ ರಾಸಾಯನಿಕವೂ ಸೇರಿದಂತೆ ಅಪಾಯಕಾರಿ ತೈಲ ಮತ್ತು ಅನಿಲ ಇರುವ ಕಂಟೈನರ್‌ಗಳು ಕೂಡ ಇವೆ. ಹೀಗಾಗಿ ಈ ಹಡಗು ಕರಾವಳಿ ಭಾಗದಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಕೆಲದಿನಗಳ ಹಿಂದೆಯಷ್ಟೇ ಕೇರಳ ಕರಾವಳಿಯಾಚೆ ಕಂಟೈನರ್‌ ಹಡಗೊಂದು ಮುಳುಗಿ ಅನೇಕ

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ Read More »

ಮಂಗಳೂರು: ಟ್ಯಾಂಕರ್‌ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಮೃತ್ಯು

ಮಂಗಳೂರು: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಹಸವಾರ ಟ್ಯಾಂಕರ್‌ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಸುರತ್ಕಲ್ ಕಾನ ಜನತಾ ಕಾಲನಿ‌ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದ್ದು, ಮುಲ್ಕಿ ಕೊಲ್ನಾಡು ನಿವಾಸಿ ಮುಹಮ್ಮದ್ ಶರೀಫ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಶ್ರಫ್ ಮತ್ತು ಶರೀಫ್ ಮಂಗಳೂರು ಕಡೆಯಿಂದ ಸುರತ್ಕಲ್‌ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹಾಸನದಿಂದ

ಮಂಗಳೂರು: ಟ್ಯಾಂಕರ್‌ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಮೃತ್ಯು Read More »

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ

ಗಾಯಗೊಂಡವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು : ಕೇರಳದ ಕೊಚ್ಚಿ ಕರಾವಳಿ ತೀರದಿಂದ ಸುಮಾರು 78 ನಾಟಿಕಲ್‌ ಮೈಲು ದೂರದಲ್ಲಿ ಸರಕು ಸಾಗಿಸುವ ಹಡಗಿಗೆ ಬೆಂಕಿ ಹತ್ತಿಕೊಂಡು ಭಾರಿ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು ಹಡಗಿನ 18 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ನಾಲ್ವರು ನಾಪತ್ತೆಯಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಅಝಿಕ್ಕಲ್ ಮತ್ತು ಕೊಚ್ಚಿಯ ಮಧ್ಯದಲ್ಲಿ ಈ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಕಂಟೇನರ್ ಹಡಗಿನ ಎಂವಿ ವಾನ್ ಹೈ 503ನಲ್ಲಿದ್ದ 22

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ Read More »

error: Content is protected !!
Scroll to Top