ಅಪಘಾತ

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಸಾವಿನ ಸಂಖ್ಯೆ 23ಕ್ಕೇರಿಕೆ

ಸ್ಫೋಟದ ಬಿರುಸಿಗೆ ನಾಲ್ಕು ಮಹಡಿಯ ಕಟ್ಟಡ ಧರಾಶಾಯಿ ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೇರಿದೆ. ಭಾನುವಾರ ಮಧ್ಯಾಹ್ನ ವಿರುಧುನಗರ ಜಿಲ್ಲೆಯ ಕಟ್ಟನಾರ್‌ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದೆ. ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, […]

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಸಾವಿನ ಸಂಖ್ಯೆ 23ಕ್ಕೇರಿಕೆ Read More »

ಬೈಕುಗಳೆರಡರ ನಡುವೆ ಅಪಘಾತ: ಓರ್ವ ಮೃತ್ಯು

ಪುತ್ತೂರು: ಬೈಕುಗಳೆರಡರ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಚ ಘಟನೆ ಪಡೀಲ್‌ನ ಯಾಸಿನ್ ಚಿಕನ್ ಸೆಂಟರ್ ಸಮೀಪ ನಡೆದಿದೆ. ಒಂದು ಬೈಕ್ ರಾಂಗ್ ‌ಸೈಡಿನಲ್ಲಿ ಬರುತ್ತಿದ್ದು, ಈ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ನ ಸವಾರನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ‌ಲಭ್ಯವಾಗಬೇಕಿದೆ.

ಬೈಕುಗಳೆರಡರ ನಡುವೆ ಅಪಘಾತ: ಓರ್ವ ಮೃತ್ಯು Read More »

ವ್ಯಾನ್‌ ಪ್ರಪಾತಕ್ಕೆ ಉರುಳಿ ಬಿದ್ದು 9 ಮಂದಿ ಸಾವು

ಪ್ರಸಿದ್ಧ ಪ್ರವಾಸಿ ತಾಣ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ದುರಂತ ಕೊಯಮತ್ತೂರು : ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ. ಮೃತರನ್ನು ಅಜಿತಾ (54), ರಮ್ಲಾ

ವ್ಯಾನ್‌ ಪ್ರಪಾತಕ್ಕೆ ಉರುಳಿ ಬಿದ್ದು 9 ಮಂದಿ ಸಾವು Read More »

ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು

ಯಾದಗಿರಿ: ಸ್ಲೀಪರ್ ಬಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತಿದ ಬೆಂಕಿ ಎರಡೂ ವಾಹನಗಳನ್ನು ಕ್ಷಣ ಮಾತ್ರದಲ್ಲಿ ಸುಟ್ಟು ಕರಕಲಾಗಿಸಿದ ಘಟನೆ ನಡೆದಿದೆ. ಸುರಪುರದ ಶಾಂತಪುರ ಕ್ರಾಸ್‌‌ನ ಬೀದರ್ – ಬೆಂಗಳೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸು ಕಲಬುರ್ಗಿ ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ನಾಲ್ಕಕ್ಕೂ ಹೆಚ್ಚು ಜನರು ಸುಟ್ಟು ಕರಕಲಾಗಿದ್ದಾರೆ. ಕಾರಿನಲ್ಲಿದ್ದ ಎಲ್ಲರೂ ಈ ದುರಂತದಲ್ಲಿ ಸಜೀವ ದಹನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾಗಿ ಹೇಳಲಾಗುತ್ತಿದೆ. ನಾಲ್ಕು ತಲೆ‌ ಬುರುಡೆಗಳು

ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು Read More »

ಎರಡು ಓಮ್ನಿಗಳ ನಡುವೆ ಅಪಘಾತ

ಪುತ್ತೂರು: ನಗರದ ಹಾರಾಡಿ ‌ಸಮೀಪ ಎರಡು ಓಮ್ನಿ ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ವಾಹನಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ಓಮ್ನಿಗಳ ನಡುವೆ ಅಪಘಾತ Read More »

ಭೀಕರ ಅಪಘಾತ : ಮಂತ್ರಾಲಯಕ್ಕೆ ಹೋಗುತ್ತಿದ್ದ 8 ಭಕ್ತರು ಸ್ಥಳದಲ್ಲೇ ಸಾವು

13 ಮಂದಿಗೆ ಗಂಭೀರ ಗಾಯ-ಬೊಲೆರೊ ವಾಹನಕ್ಕೆ ಗುದ್ದಿದ ಟ್ಯಾಂಕರ್‌ ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ

ಭೀಕರ ಅಪಘಾತ : ಮಂತ್ರಾಲಯಕ್ಕೆ ಹೋಗುತ್ತಿದ್ದ 8 ಭಕ್ತರು ಸ್ಥಳದಲ್ಲೇ ಸಾವು Read More »

ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 250 ಮಂದಿ ನಾಪತ್ತೆ

ರೊಹಿಂಗ್ಯಾ ನಿರಾಶ್ರಿತರನ್ನು ಮಲೇಷ್ಯಾಕ್ಕೆ ಸಾಗಿಸುತ್ತಿದ್ದ ದೋಣಿ ಮುಳುಗಡೆ ಢಾಕ್ಕಾ: ಅಂಡಮಾನ್ ಸಮುದ್ರದಲ್ಲಿ ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿದ ಪರಿಣಾಮ ಸುಮಾರು 250 ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾದೇಶಿ ಪ್ರಜೆಗಳು ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಬಾಂಗ್ಲಾದೇಶದ ಕಾಕ್ಸ್‌ ಬಜಾರ್‌ ಜಿಲ್ಲೆಯ ಟೆಕ್ನಾಫ್‌ನಿಂದ ಈ ದೋಣಿ ಮಲೇಷ್ಯಾಕ್ಕೆ ತೆರಳುತ್ತಿತ್ತು. ದೋಣಿಯಲ್ಲಿ ರೊಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳಿದ್ದರು. ಸಾಮರ್ಥ್ಯಕ್ಕಿಂತ ಹೆಚ್ಚು ಜನರು ತುಂಬಿ ಓವರ್‌ಲೋಡ್‌ ಅಗಿದ್ದ ದೋಣಿ ದೋಣಿ ಭಾರಿ ಬಿರುಗಾಳಿ ಹಾಗೂ ಅಲೆಗಳ ಹೊಡೆತದಿಂದ ನಡುಸಮುದ್ರದಲ್ಲಿ

ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 250 ಮಂದಿ ನಾಪತ್ತೆ Read More »

ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : ಮೂವರು ಸಜೀವ ದಹನ

ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಿಸಿದ್ದ ಗೋದಾಮಿನಲ್ಲಿ ಸಂಭವಿಸಿದ ದುರಂತ ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ ಘಟನೆಯಲ್ಲಿ ಮಗುವೂ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು

ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : ಮೂವರು ಸಜೀವ ದಹನ Read More »

ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ

ಅಂಬೇಡ್ಕರ್‌ ಜಯಂತಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಸಂಭವಿಸಿದ ದುರಂತ ಚಿಕ್ಕಮಗಳೂರು : ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿದು ಬಾಲಕಿ ಮೃತಪಟ್ಟು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು ನೆನಪಿಸುವಂತಿದೆ.

ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ Read More »

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸುಳ್ಯದ ಯುವತಿ ಅಪಘಾತಕ್ಕೆ ಬಲಿ

ಪ್ರವಾಸ ತೆರಳಿದ್ದ ವೇಳೆ ಸಂಭವಿಸಿದ ದುರಂತ ಸುಳ್ಯ: ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸುಳ್ಯದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಕಂದಡ್ಕದ ಶಶಿಕಲಾ ಭಟ್ ಎಂಬವರ ಪುತ್ರಿ ಕ್ಷಿಪ್ರ (27) ಎಂಬ ಯುವತಿ ಶನಿವಾರ ರಾತ್ರಿ ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಕ್ಷಿಪ್ರ ಸಹದ್ಯೋಗಿಗಳೊಂದಿಗೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸುಳ್ಯದ ಯುವತಿ ಅಪಘಾತಕ್ಕೆ ಬಲಿ Read More »

error: Content is protected !!
Scroll to Top