ಅಪಘಾತ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವನ್ನಪ್ಪಿದ ಸವಾರ

ಉಳ್ಳಾಲ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ  ಹಿನ್ನಲೆ ದ್ವಿಚಕ್ರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಮೃತ ಅಝರ್‍ ಸ್ಕೂಟರ್‍ನಲ್ಲಿ ಬರುತ್ತಿದ್ದ ವೇಳೆ ಕೇರಳ ಕಡೆಗೆ ಚಲಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದರಿಂದ ರಸ್ತೆಗೆ ಎಸೆದು ಬಿದ್ದಿದರಿಂದ ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ.  ಅಝರ್‍ ಮೃತ […]

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ | ಸ್ಥಳದಲ್ಲೇ ಸಾವನ್ನಪ್ಪಿದ ಸವಾರ Read More »

ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು

ಬಂಟ್ವಾಳ : ಜೋಗ ಜಲಪಾತ ಪ್ರವಾಸಕ್ಕೆಂದು ತೆರಳಿದ್ದ ಬಸ್‍ ಅಪಘಾತಕ್ಕೀಡಾಗಿತ್ತು, ಅಪಘಾತದಲ್ಲಿ ಗಾಯಗೊಂಡ ಪ್ರವಾಸಿಗರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿದ್ದ ಮಹಿಳೆಯೋರ್ವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಎಂದು ಗುರುತಿಸಲಾಗಿದೆ. ಡಿ.15 ರಂದು ಬಂಟ್ವಾಳ ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು, ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ

ಪ್ರವಾಸಕ್ಕೆಂದು ತೆರಳಿದ ಬಸ್ ಅಪಘಾತದಲ್ಲಿ ಚಿಕಿತ್ಸೆ ಫಲಿಸಿದೆ ಮಹಿಳೆ ಮೃತ್ಯು Read More »

ಬೈಕ್‍ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್‍ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅರ್ಕುಳ ಬಳಿ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ. ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದನಾಗಿದ್ದ ಪ್ರವಿತ್ ಕುಮಾರ್ ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ ಕ್ರೀಮ್ ಸಾಗಿಸುತ್ತಿದ್ದ ವಾಹನ ಯುವಕನ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬೈಕ್‍ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು Read More »

ಕಾರಿಗೆ ಟಿಪ್ಪರ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ : ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ  ಹೊಡೆದ ಘಟನೆ ಇಂದು(ಡಿ.31) ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ  ಕಾರಿನಲ್ಲಿದ್ದ  ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.

ಕಾರಿಗೆ ಟಿಪ್ಪರ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ Read More »

ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಪುತ್ತೂರು : ಪುತ್ತೂರಿನ ಹೈಸ್ಕೂಲ್ ನಲ್ಲಿ ವ್ಯಾಸಂಗ ಪಡೆಯುತ್ತಿದ್ದ ವಿದ್ಯಾರ್ಥಿನಿ ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.  ವಿದ್ಯಾರ್ಥಿನಿ  ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆಂದು ತಿಳಿದು ಬಂದಿದೆ. ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಮನನೊಂದು ಈ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಸಂತ್ರಸ್ತೆಯ  ತಂದೆ ಆರೋಪಿಸಿದ್ದಾರೆ. ಮಗಳು ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಕಲ್ಲೇರಿ ಮೂಲದ ಸದ್ಯ ಪಡೀಲುನಲ್ಲಿದ್ದು ಪುತ್ತೂರು ನಗರದಲ್ಲಿರುವ ಸರಕಾರಿ ಪ್ರೌಢ ಶಾಲೆಯೊಂದರಲ್ಲಿ ಓದುತ್ತಿರುವ

ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ Read More »

ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿನಿಂದ ಪೊದೆಗೆ ಬಿದ್ದ ವಿದ್ಯಾರ್ಥಿ

ಮೂಡುಬಿದ್ರೆ : ಬಸ್ಸು ಚಲಿಸುತ್ತಿದ್ದಂತೆ ಕಾಲೇಜು ವಿದಯಾರ್ಥಿಯೋರ್ವ ನಿಯಂತ್ರಣ ತಪ್ಪಿ ಬಲ್ಲೆಗೆ ಬಿದ್ದ ಘಟನೆ ಡಿ.30 ರಂದು ಮೂಡುಬಿದ್ರೆ ಸಮೀಪ ತೊಡಾರಿನ ಖಾಸಗಿ ಕಾಲೇಜು ಬಳಿ ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್‌ನ ಬಾಗಿಲಲ್ಲಿ ನಿಂತಿದ್ದ ವೇಳೆ ಕಾಲೇಜು  ನಿಯಂತ್ರಣ ತಪ್ಪಿ ಬಸ್ಸಿಂದ ಬಲ್ಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ.  ಅದೃಷ್ಟವಶಾತ್ ಬಸ್ಸಿಂದ ಬಿದ್ದ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರ್ಕಾಳ-ಮೂಡುಬಿದರೆ-ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ತೋಡಾರಿನ ಕಾಲೇಜು ವಿದ್ಯಾರ್ಥಿಯೊಬ್ಬ ಕಾಲೇಜಿಗೆ ಬರುತ್ತಿರುವ ವೇಳೆ ತನ್ನ ನಿಲ್ದಾಣ ಬರುವ ಮನ್ನವೇ ಇಳಿಯುವ

ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿನಿಂದ ಪೊದೆಗೆ ಬಿದ್ದ ವಿದ್ಯಾರ್ಥಿ Read More »

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಪಂಜ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಡಿ.29 ರಂದು ರಾತ್ರಿ ಪಂಜದ ಕೃಷ್ಣನಗರದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿ ಜೀವನ್ ಎಂದು ಗುರುತಿಸಲಾಗಿದೆ. ಪಂಜ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಜೀವನ್ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾಣಿಸಲಾಗಿದೆ. ಕಾರಿನಲ್ಲಿದ್ದ ದೇವಣ್ಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ Read More »

ವಿದ್ಯುತ್ ಶಾಕ್‍ ನಿಂದ ಮಗು ಮೃತ್ಯು

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗುವೊಂದು ಮೃತಪಟ್ಟ ಘಟನೆ ನೆ.ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತಪಟ್ಟ ಮಗು. ಅಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮಗು ಮುಟ್ಟಿದೆ. ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದು, ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ವಿದ್ಯುತ್ ಶಾಕ್‍ ನಿಂದ ಮಗು ಮೃತ್ಯು Read More »

ಸಮುದ್ರದ ನೀರಿನಲ್ಲಿ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋದ ಪುತ್ತೂರಿನ ವ್ಯಕ್ತಿ ಮೃತ್ಯು !

ಪುತ್ತೂರು : ಸಮುದ್ರದ ನೀರಿನಿಂದ ಸಹೋದರನ ಪುತ್ರಿಯನ್ನು ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ನಡೆದಿದೆ. ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್‌ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ ಸಂಭವಿಸಿದೆ.

ಸಮುದ್ರದ ನೀರಿನಲ್ಲಿ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋದ ಪುತ್ತೂರಿನ ವ್ಯಕ್ತಿ ಮೃತ್ಯು ! Read More »

ಈಚರ್ ಲಾರಿ-ಬೈಕ್‍ ಡಿಕ್ಕಿ : ಬಾಲಕ ಮೃತ್ಯು

ಮಾಣಿ: ಈಚ‌ರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಸಮೀಪದ ಮುರ ನಿವಾಸಿ ಅಬ್ದುಲ್ ಸಲೀಂ ಎಂಬವರ ಪುತ್ರ ಶಾಝಿನ್ (6) ಮೃತಪಟ್ಟಬಾಲಕ. ಸಲೀಂ ಅವರು ತನ್ನ ಪತ್ನಿ-ಮಕ್ಕಳೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗಡಿಯಾರ ಎಂಬಲ್ಲಿ ಈಚರ್ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ

ಈಚರ್ ಲಾರಿ-ಬೈಕ್‍ ಡಿಕ್ಕಿ : ಬಾಲಕ ಮೃತ್ಯು Read More »

error: Content is protected !!
Scroll to Top