ಅಪಘಾತ

ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ

ಬೆಳ್ತಂಗಡಿ : ಬೈಕ್‍ ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಮುಂಡಾಜೆಯಲ್ಲಿ ನಡೆದಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಎಂಬವರ ಪುತ್ರಿ  ಅನರ್ಥ್ಯ (9) ಮೃತಪಟ್ಟ ಬಾಲಕಿ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಥ್ಯ ಉಜಿರೆಯಿಂದ ಬೈಕ್‌ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ವಾಹನವನ್ನು […]

ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ Read More »

ಶಿರಾಡಿ ಘಾಟ್‍ ನ ದೋಣಿಗಲ್‍ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು

ಶಿರಾಡಿ: ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತದ ಪರಿಣಾಮ ಮಂಗಳೂರು – ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್’ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶುಕ್ರವಾರ ಶಿರಾಡಿ ಘಾಟ್ ನಲ್ಲಿ ರೈಲು ಸಂಪರ್ಕ ಕಡಿತಗೊಂಡಿತ್ತು. ದೋಣಿಗಲ್ ಬಳಿ ಗುಡ್ಡವೊಂದು ಕುಸಿಯುತ್ತಿದ್ದು, ರಸ್ತೆಯನ್ನು ಸಂಪೂರ್ಣ ಆವರಿಸಿಕೊಂಡಿತ್ತು. ಕುಸಿದ ಮಣ್ಣನ್ನು ಸರಿಸುವಲ್ಲಿ ಜೆಸಿಬಿ ಮೂಲಕ ಕಾರ್ಯ ನಿರ್ವಹಿಸಿ, ವಾಹನ ಸಾಗಾಟಕ್ಕೆ ಅನುವು ಮಾಡಿಕೊಡಲಾಯಿತು. ಸಂಚಾರಕ್ಕೆ ಸಂಪೂರ್ಣ ತೊಡಕ್ಕಾಗಿದ್ದು ಮಂಗಳೂರು ಕಡೆಯಿಂದ ಹೋಗಿರುವ ವಾಹನಗಳು ಸರತಿ ಸಾಲಿನಲ್ಲಿ

ಶಿರಾಡಿ ಘಾಟ್‍ ನ ದೋಣಿಗಲ್‍ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು Read More »

ಆವರಣ ಇಲ್ಲದ ಬಾವಿಗೆ ಬಿದ್ದು ವೃದ್ಧೆ ಮೃತ್ಯು

ಉಪ್ಪಿನಂಗಡಿ: ಆವರಣ ಇಲ್ಲದ ಬಾವಿಗೆ ವೃದ್ಧೆಯೊಬ್ಬರು ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿಯ ನೂಜಿ ಎಂಬಲ್ಲಿ ನಡೆದಿದೆ. ನೂಜಿ ನಿವಾಸಿ ಹೊನ್ನಮ್ಮ (65) ಮೃತಪಟ್ಟವರು. ಹೊನ್ನಮ್ಮ ಶುಕ್ರವಾರ ಸಂಜೆ ಕಾಣೆಯಾಗಿದ್ದು, ಮನೆಯವರು ಹುಡುಕಾಡಿದಾಗ ಮನೆಯ ಆವರಣ ಗೋಡೆಯಿಲ್ಲದ ಬಾವಿಯ ಬಳಿ ಇವರ ಕೊಡೆ ಪತ್ತೆಯಾಗಿತ್ತು. ಬಾವಿಯಲ್ಲಿ ನೋಡಿದಾಗ ಮೃತದೇಹ ಬಾವಿಯಲ್ಲಿ ತೇಲುತ್ತಿತ್ತು. ಯಾರೂ ಇಲ್ಲದ ಸಂದರ್ಭ ಇವರು ಬಾವಿಗೆ ಇಣುಕಿ ನೋಡಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ರಾತ್ರಿ ಇವರ ಮೃತದೇಹವನ್ನು ಅಡೆಕ್ಕಲ್ ಸಂತು ಹಾಗೂ

ಆವರಣ ಇಲ್ಲದ ಬಾವಿಗೆ ಬಿದ್ದು ವೃದ್ಧೆ ಮೃತ್ಯು Read More »

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ್ ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ | ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಸುಮಾರು 20 ಅಡಿ ಆಳದಲ್ಲಿ ಸಿಲುಕಿರುವ ಮಾಹಿತಿ ದೊರೆತ ಬೆನ್ನಲ್ಲೇ ಕರಾವಳಿಯ ಮುಗುಳು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಶಿರೂರಿಗೆ ಇಂದು ಆಗಮಿಸುತ್ತಿದೆ ಎಂದು ತಿಳಿದು ಬಂದಿದೆ. ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದು12 ದಿನವಾಗಿದ್ದು, ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಸದ್ಯ ಎಲ್ಲಾ ರೀತಿಯಲ್ಲೂ ಹುಡುಕಾಟ ನಡೆದಿದೆ. ಆದರೂ ಪತ್ತೆಯಾಗಿಲ್ಲ. ಮುಳುಗು ತಜ್ಞರಿಂದ ನೀರಿನಲ್ಲಿರುವ ಲಾರಿ

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ್ ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ | ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ Read More »

ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿತ | ಸಂಚಾರದಲ್ಲಿ ಬದಲಾವಣೆ

ಹಾಸನ:  ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಹಳಿಯಿಂದ ಜಾರಿದ ಘಟನೆ ಇಂದು ಮುಂಜಾನೆ ಹಾಸನದ ಶಾಂತಿಗ್ರಾಮದ ಬಳಿ ನಡೆದಿದೆ.   ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಹಾಸನ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಆಗಿದೆ.

ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿತ | ಸಂಚಾರದಲ್ಲಿ ಬದಲಾವಣೆ Read More »

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯ

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ಇಂದು ನಡೆದಿದೆ. ಮೂಲತಃ ಕೇರಳ ಕಣ್ಣೂರಿನ ಮುಂಡಯ ಪರಂಬೂರು ನಿವಾಸಿ ವಿಸ್ಮಯ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.ಮಂಗಳೂರು ಕಡೆಗೆ ತೆರಳುವ ಆಟೋ ರಿಕ್ಷಾವನ್ನು ಚಾಲಕ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯ Read More »

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

ಮುಂಬಯಿ: ಬಹು ಮಹಡಿಯ ಕಟ್ಟಡವೊಂದು ಕುಸಿದ ಪರಿಣಾಮ ಹಲವಾರು ಮಂದಿ ಅಡಿಯಲ್ಲಿ ಸಿಲುಕಿರುವ ಘಟನೆ ನವಿಮುಂಬಯಿಯಲ್ಲಿ ಇಂದು ಮುಂಜಾನೆ ನಡೆದಿದೆ. ನವಿ ಮುಂಬಯಿಯ ಶಹಬಾಜ್ ಎಂಬಲ್ಲಿ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯಕ್ಕೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹಲವಾರು ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ನವಿಮುಂಬಯಿ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದು 24 ಕುಟುಂಬಗಳು ವಾಸವಾಗಿದ್ದವು ಎಂದು

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು

ವಿಟ್ಲ: ಆಟೋ ರಿಕ್ಷಾ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟ ರಿಕ್ಷಾ ಚಾಲಕ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು Read More »

ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು

ಮಂಗಳೂರು : ಸುರಿದ ಭಾರೀ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಜೋಕಟ್ಟೆಯಲ್ಲಿ ನಡೆದಿದೆ. ಮಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತಪಟ್ಟ ಬಾಲಕ. ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಶೈಲೇಶ್ ಅತಿಥಿಯಾಗಿ ಬಂದಿದ್ದ ಎನ್ನಲಾಗಿದ್ದು, ಬುಧವಾರ  ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಮನೆಯ ಪಕ್ಕದ ತಡೆಗೋಡೆ ಕುಸಿದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು Read More »

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ

ಉತ್ತರಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಪತ್ತೆಯಾಗಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ. ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲಿಟರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ Read More »

error: Content is protected !!
Scroll to Top