ಅಪಘಾತ

ಕ್ರಿಕೆಟ್ ಆಡುತ್ತಿದ್ದಾಗ ಯುವಕನಿಗೆ ಹೃದಯಾಘಾತ : ಮೃತ್ಯು

ಮಂಗಳೂರು: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತವಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಪ್ರದೀಪ್‌ ಪೂಜಾರಿ (31) ಮೃತಪಟ್ಟ ಯುವಕ. ಸಂಜೆ ವೇಳೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ಆಡುತ್ತಿದ್ದಾಗ ಯುವಕನಿಗೆ ಹೃದಯಾಘಾತ : ಮೃತ್ಯು Read More »

ಬೈಕ್‌ಗೆ ಗುದ್ದಿ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು : ಐವರು ಗಂಭೀರ

ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್‌ನಿಂದ ಕೆಳಗೆ ಬಿದ್ದಿರುವ ಭೀಕರ ಅಪಘಾತ ನಗರದ ಯಶವಂತಪುರ ಸರ್ಕಲ್‌ನಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ.ಬೈಕ್‌ನಲ್ಲಿದ್ದ ಇಬ್ಬರು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ನಸುಕಿನ 3.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಯಾಂಕಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿದ್ದ ಕಾರು ಅತಿವೇಗದ ಪರಿಣಾಮದಿಂದಾಗಿ ಫ್ಲೈಓವರ್ ಮೇಲಿನ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಗುದ್ದಿದೆ. ಇದರಿಂದ ಫ್ಲೈಓವರ್ ಮೇಲಿನಿಂದ ಕಾರು ಕೆಳಗೆ ಬಿದ್ದಿದೆ.ಚಾಲಕ

ಬೈಕ್‌ಗೆ ಗುದ್ದಿ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು : ಐವರು ಗಂಭೀರ Read More »

ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ  ಆಂಬ್ಯುಲೆನ್ಸ್‌ ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ನಡೆದಿದೆ. ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಅಪಘಾತ ಸಂಭವಿಸಿದ್ದು. ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹಾಗೂ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.  ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು

ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ Read More »

ಹಾರ್ಡ್ ವೇರ್ ಅಂಗಡಿಗೆ ಬೆಂಕಿ : ಅಪಾರ ನಷ್ಟ

ಪುತ್ತೂರು: ಹಾರ್ಡ್ ವೇರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಹಾನಿಯಾದ ಘಟನೆ ಪುರುಷರಕಟ್ಟೆಯಲ್ಲಿ ನಡೆದಿದೆ. ಪುರುಷರಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಅಪಾರ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಹಾರ್ಡ್ ವೇರ್ ಅಂಗಡಿಗೆ ಬೆಂಕಿ : ಅಪಾರ ನಷ್ಟ Read More »

ಕಾರು ಡಿಕ್ಕಿ : ಪಾದಚಾರಿ ಆನಂದ ಮೃತ್ಯು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಪಡಂಗಡಿ ಹೊನ್ನಕಟ್ಟೆಯಲ್ಲಿ ನಡೆದಿದೆ. ಪಡಂಗಡಿ ನಿವಾಸಿ ಆನಂದ ಮೃತಪಟ್ಟವರು. ಆನಂದ ಅವರು ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ರಸ್ತೆ ಬಿದ್ದು ಗಂಭೀರ ಗಾಯಗೊಂಡ ಆನಂದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುತ್ತಿರುವ ಸಂದರ್ಭ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರು ಡಿಕ್ಕಿ : ಪಾದಚಾರಿ ಆನಂದ ಮೃತ್ಯು Read More »

ಶಾಲಾ ಗೋಡೆ, ಮೇಲ್ಛಾವಣಿ ಕುಸಿತ | ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಡಬ: ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಟಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಟಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಶಾಲಾ ಗೋಡೆ, ಮೇಲ್ಛಾವಣಿ ಕುಸಿತ | ನಾಲ್ವರು ವಿದ್ಯಾರ್ಥಿಗಳಿಗೆ ಗಾಯ Read More »

ವಿಟ್ಲದಲ್ಲಿ ಮನೆ ಮೇಲೆ ಗುಡ್ಡ ಕುಸಿತ | ಸ್ಥಳಕ್ಕೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ

ವಿಟ್ಲ: ವ್ಯಾಪ್ತಿಯ ಮನೆಯೊಂದರ ಮೇಲೆ ಗುಡ್ಡ ಕುಸಿದ ಘಟನೆ ನಡೆದಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕುರುಂಬಳ ನಿವಾಸಿ ಕಲಂದರ್ ಅಲಿ ಎಂಬವರ ಮನೆ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದು, ಅವರು ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ

ವಿಟ್ಲದಲ್ಲಿ ಮನೆ ಮೇಲೆ ಗುಡ್ಡ ಕುಸಿತ | ಸ್ಥಳಕ್ಕೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ Read More »

ಇನ್ನೋವಾ ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೂಜಿಬಾಳ್ತಿಲ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಚಿಲಂಪಾಡಿಯ ನೂಜಿಬಾಳ್ತಿಲದಲ್ಲಿ ಇಂದು ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಮೃತಪಟ್ಟವರು. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ವಾಹನವನ್ನು ನೋಡಿ ಬ್ರೇಕ್

ಇನ್ನೋವಾ ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ !

ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಕಾರುಗಳೆರಡು ಜಖಂ ಗೊಂಡಿದೆ. ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಕತ್ಯಾಡಿ ನಿವಾಸಿಯೊಬ್ಬರಿಗೆ ತೀವು ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ ! Read More »

ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್‌ರೇಪ್‌

ಬಿಯರ್‌ಗೆ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕೃತ್ಯ ಕಾರ್ಕಳ: ಅನ್ಯಕೋಮಿನ ಯುವಕರ ತಂಡ ಯುವತಿಯೊಬ್ಬಳಿಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಿನ್ನೆ ಕಾರ್ಕಳದಲ್ಲಿ ಸಂಭವಿಸಿದೆ.ರೇಷ್ಮೆ ಕೃಷಿ ಮಾಡಿಕೊಂಡಿರುವ ಬೋವಿ ಸಮುದಾಯದ 21ರ ಹರೆಯದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ರಾತ್ರಿಯೇ ಆಸ್ಪತ್ರೆ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ

ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್‌ರೇಪ್‌ Read More »

error: Content is protected !!
Scroll to Top