ಅಪಘಾತ

ಖಾಸಗಿ ಬಸ್ ಪಲ್ಟಿ | ಹಲವರಿಗೆ ಗಂಭೀರ ಗಾಯ

ಬಂಟ್ವಾಳ: ಫರಂಗಿಪೇಟೆ ಸಮೀಪ ಖಾಸಗಿ ಬಸ್ ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದು ಕೂಡಾ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ […]

ಖಾಸಗಿ ಬಸ್ ಪಲ್ಟಿ | ಹಲವರಿಗೆ ಗಂಭೀರ ಗಾಯ Read More »

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಕೊಣಾಜೆ:  ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕ ವಿದೇಶದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಡುಪದವಿನ ಉಮ್ಮರ್ ಅವರ  ಪುತ್ರ ನೌಫಲ್(25) ಮೃತ ಯುವಕ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ‌ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವಿವಾಹಿತನಾಗಿರುವ ನೌಫಲ್ ಅವರ ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ನೌಫಲ್ ಅವರ ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ತಿಳಿಸಿದ್ದಾರೆ.

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು Read More »

ಮಲೆಬೆಟ್ಟು : ಬೈಕ್‌ ಮತ್ತು ಪಿಕಪ್ ನಡುವೆ ಅಪಘಾತ | ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ : ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್‌ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ, ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ, ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೆಬೆಟ್ಟು : ಬೈಕ್‌ ಮತ್ತು ಪಿಕಪ್ ನಡುವೆ ಅಪಘಾತ | ಬೈಕ್‌ ಸವಾರ ಗಂಭೀರ ಗಾಯ Read More »

ಕಪ್ಪೆಚಿಪ್ಪು ಹೆಕ್ಕಲು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ಹೊಳೆಗೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಮೃತಪಟ್ಟ ವ್ಯಕ್ತಿ ರಾಜು ಮರಕಾಲ ಅವರು ಶುಕ್ರವಾರ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋಗಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಬೆಳಿಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಸ್ಥಳೀಯರು ತೇಲುತ್ತಿರುವ ಶವವೊಂದನ್ನು ಗಮನಿಸಿದ್ದಾರೆ. ತಕ್ಷಣ ಕೋಟ ಪೊಲೀಸ್ ಠಾಣೆಗೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ಗೆ

ಕಪ್ಪೆಚಿಪ್ಪು ಹೆಕ್ಕಲು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು Read More »

ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ- ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತವಾಗಿದೆ. ಕಲ್ಲು,ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ, ಯಡಕುಮೇರಿ, ಶಿರವಾಗಿಲು, ಆಲೂರು ಸೇರಿ 6 ಕಡೆಗಳಲ್ಲಿ  6 ರೈಲುಗಳು ನಿಂತಿವೆ.

ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ Read More »

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು

ಪುತ್ತೂರು: ಕಾಂಕ್ರೀಟ್ ಮಿಕ್ಸ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಲಾರಿಯೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಉರುಳಿ ಬಿದ್ದ ಘಟನೆ ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲದಲ್ಲಿ ಇಂದು ನಡೆದಿದೆ. ಆರ್ಲಪದವಿನ ಕಾಮಗಾರಿ ಒಂದಕ್ಕೆ ಕಾಂಕ್ರೀಟ್ ಮಿಕ್ಸ್ ಹೇರಿಕೊಂಡು ಹಂಟ್ಯಾರು – ಪಾಣಾಜೆ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಕೊರಿಂಗಿಲ ಎಂಬಲ್ಲಿಗೆ ತಲುಪಿದಾಗ ಎದುರಿನಿಂದ ಬಂದ ಲಾರಿಗೆ ಸೈಡ್ ಕೊಡುವ ಭರದಲ್ಲಿ ಈ ದುರಂತ ಸಂಭವಿಸಿದ್ದು ಸುಮಾರು 30 ಅಡಿ ಆಳದ ತೋಟಕ್ಕೆ ಬಿದ್ದಿದೆ.  ಅದರ ಚಾಲಕ ಅದೃಷ್ಟವಶಾತ್ ಪಾರಗಿದ್ದಾನೆ. ಅಗಲ ಕಿರಿದಾದ ರಸ್ತೆ ಹಾಗೂ

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು Read More »

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ

ಕಾರವಾರ: ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್‍ ಬಿ ಹೊಸ ಸೇತುವೆ

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ Read More »

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ

ಪುತ್ತೂರು: ಪಿಕಪ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಘಟನೆ ಇದೀಗ ನೆಹರೂನಗರದ ಮಾಸ್ಟರ್ ಪ್ಲಾನರಿ ಬಳಿ ನಡೆದಿದೆ. ಪಿಕಪ್ ಚಾಲಕ ಟರ್ನ್‍ ಮಾಡುವ ಸಂದರ್ಭ  ಸ್ಕೂಟಿ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಇದೇಸ್ಥಳದಲ್ಲಿ ಹಲವಾರು ಆಕ್ಸಿಡೆಂಟ್ ಗಳು ಈ ಹಿಂದೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಸಂಬಂಧ ಪಟ್ಟ ಇಲಾಖೆ ಯಾವುದೇ

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ Read More »

ಡಿಜೆ ವಾಹನಕ್ಕೆ ತಗುಲಿದ ಹೈಟೆನ್ಷನ್ ತಂತಿ | 9 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ

ಬಿಹಾರ : ಡಿಜೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ವಿದ್ಯುತ್ ಶಾಕ್‍ ನಿಂದ 9 ಮಂದಿ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಸುಲ್ತಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಧ್ಯರಾತ್ರಿ ವೇಳೆ ಡಿಜೆ ವಾಹನ ಸಂಚರಿಸುವಾಗ ಹೈಟೆನ್ಸನ್ ತಂತ್ತಿಗೆ ಸಿಲುಕಿದೆ. ಪರಿಣಾಮ ಸಾವು-ನೋವು ಸಂಭವಿಸಿದೆ. ಡಿಜೆ ವಾಹನವು ತುಂಬಾ ಎತ್ತರವಾಗಿತ್ತು. ರಾತ್ರಿ ವೇಳೆ ಹೈಟೆನ್ಷನ್ ತಂತಿ ಅಡ್ಡಲಾಗಿ ಹಾದು ಹೋಗಿದ್ದು ಕಾಣಿಸಿಲ್ಲ. ತಂತಿ ತಾಗಿದೊಡನೆ 9 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಡಿಜೆ ವಾಹನಕ್ಕೆ ತಗುಲಿದ ಹೈಟೆನ್ಷನ್ ತಂತಿ | 9 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ Read More »

ಮೀನುಗಾರಿಕೆ ಬೋಟ್‍ ಬೆಂಕಿಗಾಹುತಿ

ಮಂಗಳೂರು: ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ಸಮುದ್ರದ ಮಧ್ಯ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಸೋಮವಾರ ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು

ಮೀನುಗಾರಿಕೆ ಬೋಟ್‍ ಬೆಂಕಿಗಾಹುತಿ Read More »

error: Content is protected !!
Scroll to Top