ಅಪಘಾತ

ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ ಮುಳಿಹಿತ್ಲು ಬಳಿ ವಾಸವಾಗಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ಸವಾರನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಸಂಚಾರ […]

ಟಿಪ್ಪರ್‌ ಡಿಕ್ಕಿ : ಸ್ಕೂಟಿ ಸವಾರ ಸಾವು Read More »

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಶುಕ್ರವಾರ ನಡೆದಿದೆ. ಬಿ.ಸಿ.ರೋಡು – ಧರ್ಮಸ್ಥಳ ರಸ್ತೆಯ ಮೂರ್ಜೆ ವಿಶಾಲನಗರ ಎಂಬಲ್ಲಿ ಈ ಘಟನೆ ನಡೆದಿದೆ. ಬಾಂಬಿಲ ನಿವಾಸಿ ರೇವಣ್ಣ ಅವರ ಗ್ಯಾಸ್ ಸಂಪರ್ಕ ಹೊಂದಿದ ರಿಕ್ಷಾದಲ್ಲಿ ಗ್ಯಾಸ್ ಖಾಲಿಯಾಗಿದೆ ಎಂಬ ಕಾರಣಕ್ಕಾಗಿ ಪೆಟ್ರೋಲ್ ತುಂಬಿಸಲು ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಗ್ಯಾಸ್ ಸೋರಿಕೆಯ ರೀತಿಯಲ್ಲಿ ವಾಸನೆ ಬರುತ್ತಿದೆ ಎಂದು ಚಾಲಕ ರೇವಣ್ಣ

ಬಂಟ್ವಾಳ : ಚಲಿಸುತ್ತಿದ್ದ ರಿಕ್ಷಾ ಬೆಂಕಿಗಾಹುತಿ Read More »

ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರು ಸಾವು

ರೀಲ್ಸ್‌ ಗೀಳಿನಿಂದಾಗಿ ಸಂಭವಿಸಿದ ಭೀಕರ ದುರಂತ ಹೈದರಾಬಾದ್: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಈ ದುರಂತದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ ಮತ್ತು 16 ವರ್ಷದ ಪವಿತ್ರಾ 16 ಎಂದು ಗುರುತಿಸಲಾಗಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ವಿಡಿಯೋ ಮಾಡಲು ಹೋದ ಮೂವರು ಯುವತಿಯರು

ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರು ಸಾವು Read More »

ಹುಲಿಕಲ್‌ ಘಾಟಿಯಲ್ಲಿ ಭೂಕುಸಿತವಾಗಿ ಮೂವರು ಕಾರ್ಮಿಕರು ಸಾವು

ರಸ್ತೆ ಅಗಲೀಕರಣ ಕಾಮಗಾರಿ ನಡೆಯುವಾಗ ಸಂಭವಿಸಿದ ದುರಂತ ಶಿವಮೊಗ್ಗ: ಹುಲಿಕಲ್‌ ಘಾಟ್‌ನಲ್ಲಿ (ಬಾಳೇಬರೆ) ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿತ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳದಲ್ಲಿಯೇ ಇದ್ದ ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ. ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಹಾಗೂ ಶಬ್ಬೀರ್(40) ಮೃತ ಕಾರ್ಮಿಕರು. ಮಲೆನಾಡು ಮತ್ತು ಕರಾವಳಿ ಸಂಪರ್ಕಕ್ಕೆ ಹುಲಿಕಲ್‌ ಘಾಟ್‌ ಮುಖ್ಯ ಸಂಪರ್ಕ ಸೇತುವೆಯಾಗಿದೆ.

ಹುಲಿಕಲ್‌ ಘಾಟಿಯಲ್ಲಿ ಭೂಕುಸಿತವಾಗಿ ಮೂವರು ಕಾರ್ಮಿಕರು ಸಾವು Read More »

ಖಾಸಗಿ ಬಸ್ – ಲಾರಿ ನಡುವೆ ಅಪಘಾತ: ಚಾಲಕರಿಬ್ಬರಿಗೂ ಗಂಭೀರ ಗಾಯ

ಗುರುಪುರ: ಖಾಸಗಿ ಬಸ್ಸು ಮತ್ತು ಲಾರಿಯೊಂದರ ನಡುವೆ ನಡೆದ ಅಪಘಾತದಲ್ಲಿ ಚಾಲಕರಿಬ್ಬರೂ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಘಟನೆ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಸಮೀಪ ಬುಧವಾರ ನಡೆದಿದೆ. ಬಸ್ಸು ಕಾರ್ಕಳದತ್ತ ಹೋಗುತ್ತಿದ್ದರು, ಲಾರಿ ಮಂಗಳೂರಿನ ಕಡೆಗೆ ಸಾಗುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ಭೀಕರತೆಗೆ ಬಸ್ಸು ಮತ್ತು ಲಾರಿಗಳೆರಡರ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗ್ಯಾಸ್ ಕಟ್ಟರ್ ಮಷಿನ್ ಬಳಸಿ ಸ್ಥಳೀಯರು ಚಾಲಕರಿಬ್ಬರನ್ನೂ ವಾಹನದಿಂದ ಹೊರಕ್ಕೆ ತೆಗೆದಿರುವುದಾಗಿದೆ. ಅವರಿಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ

ಖಾಸಗಿ ಬಸ್ – ಲಾರಿ ನಡುವೆ ಅಪಘಾತ: ಚಾಲಕರಿಬ್ಬರಿಗೂ ಗಂಭೀರ ಗಾಯ Read More »

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ

ಬೆಂಗಳೂರು: ನೆಲಮಂಗಲದಲ್ಲಿರುವ ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್‌ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10 ಅಗ್ನಿಶಾಮಕ ವಾಹನ ಬಳಸಿ ರಾತ್ರಿ ಪೂರ್ತಿ

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ Read More »

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ

ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಒಂಟಿ ವೃದ್ಧ ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ವೃದ್ಧರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆ ಎಂಬಲ್ಲಿ ನಡೆದಿದೆ. ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (62 ವರ್ಷ) ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ. ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ Read More »

ಅಕ್ರಮ ವಲಸಿಗರ ದೋಣಿ ಮುಳುಗಡೆ : 71 ಮಂದಿ ನಾಪತ್ತೆ

ಲಿಬಿಯಾದಿಂದ ಅಕ್ರಮವಾಗಿ ಯುರೋಪ್‌ಗೆ ಹೋಗಲು ಯತ್ನಿಸಿದಾಗ ದುರಂತ ರೋಮ್ : ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಯತ್ನಿಸುತ್ತಿದ್ದ 100ಕ್ಕೂ ಅಧಿಕ ಅಕ್ರಮ ವಲಸಿಗರ ದೋಣಿ ಮುಳುಗಿದ ದುರಂತ ಘಟನೆ ಇಟಲಿ ಕರಾವಳಿಯಲ್ಲಿ ಸಂಭವಿಸಿದೆ. ದುರಂತದಲ್ಲಿ 71 ವಲಸಿಗರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ ಎದುರಾಗಿದೆ. ಲಿಬಿಯಾದಿಂದ ಯುರೋಪ್‌ಗೆ ಹೊರಟಿದ್ದ ಈ ಬೋಟ್‌ನಲ್ಲಿ ಒಟ್ಟು 105 ಜನರಿದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಈ ಪ್ರಯಾಣವನ್ನು ಮಾಡಲಾಗಿತ್ತು. ಮೆಡಿಟರೇನಿಯನ್ ಸಮುದ್ರದ ಭೀಕರ ಅಲೆಗಳು

ಅಕ್ರಮ ವಲಸಿಗರ ದೋಣಿ ಮುಳುಗಡೆ : 71 ಮಂದಿ ನಾಪತ್ತೆ Read More »

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು

ಔತಣಕೂಟದಿಂದ ಹಿಂದಿರುಗುತ್ತಿದ್ದಾಗ ಸಂಭವಿಸಿದ ದುರಂತ ನಾಶಿಕ್‌: ಕಾರು ತೆರೆದ ಬಾವಿಗೆ ಬಿದ್ದು 6 ಮಕ್ಕಳ ಸಹಿತ 9 ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಶುಕ್ರವಾರ ರಾತ್ರಿ ಮಹಾರಾಷ್ಟ್ರದ ನಾಶಿಕ್‌ನಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ನಾಶಿಕ್‌ ಜಿಲ್ಲೆಯ ದಿಂಡೋರಿ ಪಟ್ಟಣದ ಶಿವಾಜಿ ನಗರದಲ್ಲಿ ಈ ದಾರುಣ ಅಪಘಾತ ಸಂಭವಿಸಿದೆ. ಔತಣಕೂಟದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ವಿಶಾಲವಾದ ತೆರೆದ ಬಾವಿಗೆ ಬಿದ್ದಿದೆ. ಮೃತರೆಲ್ಲ ಒಂದೇ ಕುಟುಂಬದ ಸದಸ್ಯರು ಎನ್ನಲಾಗಿದೆ. ಮಕ್ಕಳಲ್ಲಿ ಐವರು

ಬಾವಿಗೆ ಬಿದ್ದ ಕಾರು : 6 ಮಕ್ಕಳ ಸಹಿತ ಒಂಬತ್ತು ಮಂದಿ ಸಾವು Read More »

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಸುಶಾಂತ್ ರಸ್ತೆಗೆ ಎಸೆಯಲ್ಪಟ್ಟದ್ದು, ಈ ವೇಳೆ ತಲೆಗೆ ತೀವ್ರ ಗಾಯಗಳಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಹಿಟ್‌ ಅಂಡ್‌ ರನ್‌ ಪ್ರಕರಣವೆಂದು

ಬೈಕ್‌ಗೆ ಲಾರಿ ಡಿಕ್ಕಿ: ಯುವಕನಿಗೆ ಗಂಭೀರ ಗಾಯ Read More »

error: Content is protected !!
Scroll to Top