ಅಪಘಾತ

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ

ಪುತ್ತೂರು : ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮುಂದುವರಿದ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತವಾಗಿದ್ದು, ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದೆ. ಈ ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಬಹಳ ದೊಡ್ಡ ದುರಂತ ತಪ್ಪಿದೆ. ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಇದಾಗಿದ್ದು, ಇನ್ನೂ ಮೂರು ಮನೆಗಳು ಅಪಾಯದ ಸ್ಥಿತಿಯಲ್ಲಿದೆ ಎನ್ನಲಾಗಿದೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮುಂದುವರಿದ  ಮಳೆ :  ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ Read More »

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ

ವಿಟ್ಲ: ಲಾರಿಯ ಹಿಂಬದಿಗೆ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಹಾಗೂ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವುನಲ್ಲಿ ನಡೆದಿದೆ. ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟ ಮಾಡುತ್ತಿದ್ದ ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಬ್ಬರನ್ನೂ ಮಂಗಳೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ’ ಎಂದು ತಿಳಿದು

ಲಾರಿ ಹಿಂಬದಿಗೆ ಬೈಕ್‍ ಡಿಕ್ಕಿ : ಸವಾರರಿಬ್ಬರಿಗೆ ಗಂಭೀರ ಗಾಯ Read More »

ಕಾರು -ಮಿನಿ ಟೆಂಪೋ ಡಿಕ್ಕಿ  

ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಅಪಘಾತವಾದ  ಘಟನೆ ಕುದ್ಮಾರು ಆಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಹಾಗೂ  ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದ್ದು, ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಕಾರು -ಮಿನಿ ಟೆಂಪೋ ಡಿಕ್ಕಿ   Read More »

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಭಂಡಾರಕೊಟ್ಟಿಗೆ ನಿವಾಸಿ ಜಯಂತ್ ಗೌಡ ಮೃತಪಟ್ಟ ಚಾಲಕ. ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್‌ ಸಿಬ್ಬಂದಿಯಾಗಿದ್ದ ಜಯಂತ್ ಗೌಡ  ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್‍ ಕಂಬಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರು  ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿದ್ಯುತ್‍ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು Read More »

ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು

ಕಡಬ: ಕೊಯಿಲ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ಕಾರಿನ ಮೇಲೆ ಬಿದ್ದ ಘಟನೆ ಇಂದು ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಮೂರು ಮಂದಿ ಇದ್ದು, ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು Read More »

ಬೈಕ್‍ ಗೆ ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಕಡಬ : ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದು  ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ವಿಶ್ವಜಿತ್ (23) ಮೃತಪಟ್ಟವರು. ವಿಶ್ವಜಿತ್ ಮರ್ಧಾಳದ ಪಾಲಡ್ಕದಲ್ಲಿ ಫ್ಯಾಬ್ರಿಕೇಷನ್ ವ್ಯತ್ತಿ ಮಾಡುತ್ತಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆ ಸ್ಟೇಷನ್ ಬಳಿ

ಬೈಕ್‍ ಗೆ ಸರಕಾರಿ ಬಸ್ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಕಾರು-ಖಾಸಗಿ ಬಸ್‍ ಡಿಕ್ಕಿ : ಮೂವರಿಗೆ ಗಂಭೀರ ಗಾಯ

ಪುತ್ತೂರು : ಕಾರು ಹಾಗೂ ಖಾಸಗಿ ಬಸ್‍ ಡಿಕ್ಕಿ ಹೊಡೆದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಮುರ ಸಮೀಪ ಇಂದು ಮುಂಜಾನೆ ನಡೆದಿದೆ. ಅಪಘಾತದಿಂದ ಅಂಡೆಪುಣಿ ನಿವಾಸಿ ಈಶ್ವರ ಭಟ್‍, ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಪುಟಾಣಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ

ಕಾರು-ಖಾಸಗಿ ಬಸ್‍ ಡಿಕ್ಕಿ : ಮೂವರಿಗೆ ಗಂಭೀರ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ | ಹಲವರಿಗೆ ಗಾಯ

ಪುತ್ತೂರು : ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾದ ಘಟನೆ ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ನಡೆದಿದೆ. ಬಸ್‌ ಪಲ್ಟಿಯಾದ ಪರಿಣಾಮ ಹಲವರಿಗೆ ಗಾಯಗಳಾಗಿವೆ. ಈ ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎನ್ನಲಾಗಿದೆ. ಬೆಳಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದೆ. ಇದರಿಂದ ಬಸ್ ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ | ಹಲವರಿಗೆ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ | ನಾಲ್ವರಿಗೆ ಗಾಯ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯವರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಕಾರಿನಲ್ಲಿದ್ದವರು ಹೊರ ತೆಗೆದು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ | ನಾಲ್ವರಿಗೆ ಗಾಯ Read More »

error: Content is protected !!
Scroll to Top