ಅಪಘಾತ

ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ

ರಾಜಸ್ಥಾನ: ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರಾಜಸ್ಥಾನದ ಚುರುವಿನ ಬನೋಡಾ ಗ್ರಾಮದ ಬಳಿ ಪತನಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ವಿಮಾನದ ಅವಶೇಷಗಳಡಿಯಿಂದ ಪೈಲಟ್ ಮೃತದೇಹ ಹೊರತೆಗೆಯಲಾಗಿದೆ. ಜಿಲ್ಲಾಧಿಕಾರಿ ಅಭಿಷೇಕ್ ಸುರಾನ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತದ ಪರಿಣಾಮ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ತಾವೇ ನಂದಿಸಲು ಪ್ರಯತ್ನಿಸಿದೆವು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ Read More »

ಸೇತುವೆ ಕುಸಿದು ನದಿಗೆ ಬಿದ್ದ ನಾಲ್ಕು ವಾಹನಗಳು : ಮೂರು ಮಂದಿ ಸಾವು

ಅಂಚಿನ ತನಕ ಬಂದು ಪವಾಡಸದೃಶವಾಗಿ ಪಾರಾದ ಬೃಹತ್‌ ಟ್ಯಾಂಕರ್‌ ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಹಳೇ ಸೇತುವೆ ಕುಸಿದ ಪರಿಣಾಮ ಅದರ ಮೇಲೆ ಸಂಚರಿಸುತ್ತಿದ್ದ ನಾಲ್ಕು ವಾಹನಗಳು ನದಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7.45ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು

ಸೇತುವೆ ಕುಸಿದು ನದಿಗೆ ಬಿದ್ದ ನಾಲ್ಕು ವಾಹನಗಳು : ಮೂರು ಮಂದಿ ಸಾವು Read More »

ಶಾಲಾ ವ್ಯಾನಿಗೆ ರೈಲು ಡಿಕ್ಕಿ : ಇಬ್ಬರು ಮಕ್ಕಳು ಸಾವು; ಮೂವರಿಗೆ ಗಂಭೀರ ಗಾಯ

ರೈಲು ಬರುತ್ತಿರುವುದನ್ನು ನೋಡಿಯೂ ದಾಟುವ ಸಾಹಸ ಮಾಡಿದಾಗ ದುರಂತ ಚೆನ್ನೈ : ಲೆವೆಲ್‌ ಕ್ರಾಸಿಂಗ್‌ನಲ್ಲಿ ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡ್ಡಲೂರು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗ್ಗೆಮಕ್ಕಳನ್ನು ಹತ್ತಿಸಿಕೊಂಡು ಶಾಲೆಗೆ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಡ್ಡಲೂರು ಸಮೀಪ ಸೆಮ್ಮನಕೊಪ್ಪಂ ಎಂಬಲ್ಲಿ ಲೆವೆಲ್‌ ಕ್ರಾಸಿಂಗ್‌ನ್ನು ಶಾಲಾ ವ್ಯಾನ್‌ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಾನ್‌ ಪೂರ್ತಿ ಜಖಂಗೊಂಡಿದೆ. ಈ ಸಂದರ್ಭದಲ್ಲಿ

ಶಾಲಾ ವ್ಯಾನಿಗೆ ರೈಲು ಡಿಕ್ಕಿ : ಇಬ್ಬರು ಮಕ್ಕಳು ಸಾವು; ಮೂವರಿಗೆ ಗಂಭೀರ ಗಾಯ Read More »

ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ

ಪುತ್ತೂರು: ನಗರದ ಮಂಜಲ್ಪಡ್ಪುವಿನಲ್ಲಿ ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ಬರುತ್ತಿದ್ದ ಹಾಲಿನ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ Read More »

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಪಾವೂರು ನಿವಾಸಿ ನೌಫಲ್ ಅಪಘಾತದಿಂದ ಮೃತಪಟ್ಟವರು. ನೌಫಲ್‍ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು

ಸುಳ್ಯದ ಸೋಂಣಂಗೇರಿ ಸಮೀಪ ಸಂಭವಿಸಿದ ಅಪಘಾತ ಮಂಗಳೂರು : ಸುಳ್ಯ ಸಮೀಪ ಸೋಣಂಗೇರಿ ಸಮೀಪ ಕೆಲದಿನಗಳ ಹಿಂದೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯರೊಬ್ಬರು ಚಿಕಿತ್ಸೆ ಫಲನೀಡದೆ ಮೃತಪಟ್ಟಿದ್ದಾರೆ. ಕಲ್ಲುಗುಂಡಿಯ ಡಾ.ಶಮಂತ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಜುಲೈ 4ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಲು ತೀವ್ರವಾಗಿ ಜಖಂಗೊಂಡಿದ್ದ

ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು Read More »

ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆ | ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಉಸಿರುಗಟ್ಟಿ ನಿಧನ

ಪುತ್ತೂರು: ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆಯಿಂದಾಗಿ ಉಸಿರುಗಟ್ಟಿ ಆಸ್ಪತ್ರೆಗೆ ದಾಖಲಾದ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಕೂರ್ನಡ್ಕ ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ನಡೆದಿದೆ.   ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ (80) ಮೃತಪಟ್ಟವರು. ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಅವರ ಮನೆಯಲ್ಲಿ ಜು.4 ರಂದು ಕೊಠಡಿಯಲ್ಲಿನ ಹವಾನಿಯಂತ್ರಣ ಉಪಕರಣದಲ್ಲಿ ದೋಷ ಕಂಡು ಹೊಗೆ ಕಾಣಿಸಿಕೊಂಡಿತ್ತು. ಘಟನೆಗೆ ಸಂಬಂಧಿಸಿ ಮನೆಯ ಕಪಾಟು, ಮಂಚ ಹಾನಿಯಾಗಿದೆ. ಅಗ್ನಿಶಾಮಕದಳದವರು

ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆ | ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಉಸಿರುಗಟ್ಟಿ ನಿಧನ Read More »

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು

 ಬೆಳ್ತಂಗಡಿ : ವಿದ್ಯುತ್‌ ತಂತಿ ಸ್ಪರ್ಶಿಸಿ  ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವೇಣೂರು ಸಮೀಪ ನಡೆದಿದೆ.      ವೇಣೂರು ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ನಿವಾಸಿ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.    ವಿದ್ಯುತ್‌ ಪರಿವರ್ತಕದ ಬಳಿ ತೋಟದಲ್ಲಿ ಎಲ್.ಟಿ ಲೈನ್‌ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುಂಡಾಗಿ ನೀರಿನ ಹಳ್ಳಕ್ಕೆ ಬಿದ್ದು ತಂತಿಯಲ್ಲಿ ವಿದ್ಯುತ್‌ ಸರಬರಾಜಾಗುವ ಪ್ಯೂಸ಼್ ಹೋಗಿರುವುದು ಕಂಡುಬಂದಿದೆ.  ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೀರಪ್ಪ  ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ತೆಂಗಿನಕಾಯಿ, ಅಡಕೆಯನ್ನು ಹೆಕ್ಕಲು

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು Read More »

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು

ಸುಟ್ಟು ಭಸ್ಮವಾದ ಕಾರು, ಚಾಲಕ ಅಪಾಯದಿಂದ ಪಾರು ಮಂಗಳೂರು: ನಾಯಿಯೊಂದು ಅಡ್ಡ ಬಂದ ಪರಿಣಾಮ ಕಾರೊಂದು ‌ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ಗಂಜಿಮಠದಲ್ಲಿ ನಡೆದಿದೆ. ಕಾರು ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ‌. ಈ ಸಂದರ್ಭದಲ್ಲಿ ಕಾರಿನ ಎಸಿ ಸ್ಪೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕಾರು ಸುಟ್ಟು ಭಸ್ಮವಾಗಿದೆ. ಕಾರು

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು Read More »

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು

ಡ್ಯೂಟಿ ಡಾಕ್ಟರ್‌ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ರೋಗಿಗಳು ಮತ್ತು ಸಿಬ್ಬಂದಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟ್ರರ್ ಬುಕ್, ಬೆಡ್ ಎಲ್ಲ ಸುಟ್ಟುಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು Read More »

error: Content is protected !!
Scroll to Top