ಅಪಘಾತ

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು

ಸುಟ್ಟು ಭಸ್ಮವಾದ ಕಾರು, ಚಾಲಕ ಅಪಾಯದಿಂದ ಪಾರು ಮಂಗಳೂರು: ನಾಯಿಯೊಂದು ಅಡ್ಡ ಬಂದ ಪರಿಣಾಮ ಕಾರೊಂದು ‌ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ಗಂಜಿಮಠದಲ್ಲಿ ನಡೆದಿದೆ. ಕಾರು ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ‌. ಈ ಸಂದರ್ಭದಲ್ಲಿ ಕಾರಿನ ಎಸಿ ಸ್ಪೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕಾರು ಸುಟ್ಟು ಭಸ್ಮವಾಗಿದೆ. ಕಾರು […]

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು Read More »

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು

ಡ್ಯೂಟಿ ಡಾಕ್ಟರ್‌ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ರೋಗಿಗಳು ಮತ್ತು ಸಿಬ್ಬಂದಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟ್ರರ್ ಬುಕ್, ಬೆಡ್ ಎಲ್ಲ ಸುಟ್ಟುಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು Read More »

ಲಾರಿ-ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಇಂದು ನಡೆದಿದೆ. ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಮೃತಪಟ್ಟ ದ್ವಿಚಕ್ರ ಸವಾರ. ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿದಾನಂದ ಅವರು

ಲಾರಿ-ಸ್ಕೂಟರ್ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ಕಲ್ಲುಗುಂಡಿಯಲ್ಲಿ ಕೆಎಸ್‍ ಆರ್ ಟಿಸಿ ಬಸ್‍ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ: ಕೆಎಸ್‍ ಆರ್‍ ಟಿಸಿ ಬಸ್‍ ಅಪಘಾತಕ್ಕೀಡಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡವಾಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‍ ಚಾಲಕನ ನಿಯಂತ್ರಣ ತಪ್ಪಿದ ಬಸ್‍ ರಸ್ತೆ ಬದಿಯ ಚರಂಡಿಗೆ ಇಳಿದು ಬರೆಗೆ ವಾಲಿ ನಿಂತಿದೆ. ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲುಗುಂಡಿಯಲ್ಲಿ ಕೆಎಸ್‍ ಆರ್ ಟಿಸಿ ಬಸ್‍ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು Read More »

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಕಾರಿಗೆ ಕ್ಯಾಂಟರ್‌ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ದುರಂತ ಬೆಂಗಳೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ​ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16) ಮತ್ತು ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು. ಇವರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

ಬೈಕ್‍ – ಆಟೋ ರಿಕ್ಷಾ ಅಪಘಾತ : ಏಳು ಮಂದಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಹಾಗೂ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಗು ಸಹಿತ ಏಳು ಮಂದಿ ಗಾಯಗೊಂಡ ಘಟನೆ ಉರ್ಲಾಂಡಿ ಬೈಪಾಸ್ ರಸ್ತೆ ಬಳಿ ಭಾನುವಾರ ಸಂಜೆ ನಡೆದಿದೆ. ರಿಕ್ಷಾದಲ್ಲಿದ್ದ ಉರೂಸ್ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಸಾಲೆತ್ತೂರು ಮೂಲದ ಮೊಮ್ಮದ್ ತಮೀಮ್ (6), ಹಮೀದ್ (40), ಇಸ್ಮಾಯಿಲ್‌ (45), ಇಬ್ರಾಹಿಂ (65), ಸಮೀರ್ (34), ಸುಲೈಮಾನ್ (6) ಹಾಗೂ ಬೈಕ್ ಸವಾರ ಕೀರ್ತನ್ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸಮೀಪದ

ಬೈಕ್‍ – ಆಟೋ ರಿಕ್ಷಾ ಅಪಘಾತ : ಏಳು ಮಂದಿಗೆ ಗಾಯ Read More »

ಜೀಪು – ಲಾರಿ ಡಿಕ್ಕಿ : ಗಾಯಗೊಂಡ ಜೀಪು ಚಾಲಕ ಆಸ್ಪತ್ರೆಗೆ ದಾಖಲು

ಪುತ್ತೂರು: ಜೀಪು ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡು ಜೀಪು ಚಾಲಕ ಗಾಯಗೊಂಡ ಘಟನೆ ಇಂದು ಮುಕ್ರಂಪಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಜೀಪ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕ ದೇವಸ್ಯ ನಿವಾಸಿ ಮನೋಜ್‍ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ದಾರಿಯಲ್ಲಿ ತೆರಳುತ್ತಿದ್ದ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀ ಪ್ರಸಾದ್ ಪಾಣಾಜೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು

ಜೀಪು – ಲಾರಿ ಡಿಕ್ಕಿ : ಗಾಯಗೊಂಡ ಜೀಪು ಚಾಲಕ ಆಸ್ಪತ್ರೆಗೆ ದಾಖಲು Read More »

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು

ದರ್ಶನಕ್ಕಾಗಿ ಭಕ್ತರು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ನವದೆಹಲಿ: ಒಡಿಶಾದ ಪುರಿಯಲ್ಲಿ ಜಗತ್ಪ್ರಸಿದ್ಧ ಜಗನ್ನಾಥನ ರಥಯಾತ್ರೆಯ ಸಮಯದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ.ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಾಲಯದ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು Read More »

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್‍ ತಂತಿ ತಗುಲಿ ವ್ಯಕ್ತಿ ಮೃತ್ಯು

ನೆಲ್ಯಾಡಿ: ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‍ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ಶನಿವಾರ ನಡೆದಿದೆ. ಉಡೈರೆ ನಿವಾಸಿ ಕೃಷ್ಣಪ್ಪ ಕುಲಾಲ್ (49) ವಿದ್ಯುತ್‍ ಶಾಕ್‍ ನಿಂದ ಮೃತಪಟ್ಟವರು. ತೋಟದಲ್ಲಿ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸುತ್ತಿರುವ ಸಂದರ್ಭ ದೋಟಿಗೆ ಎಚ್‌ಟಿಐ ಲೈನ್‌ಗೆ ಸ್ಪರ್ಶಿಸಿ ತಕ್ಷಣವೇ ವಿದ್ಯುತ್ ಶಾಕ್ ಆಗಿದ್ದಾರೆ. ಅವರನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ದುರದೃಷ್ಟವಶಾತ್ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ..

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್‍ ತಂತಿ ತಗುಲಿ ವ್ಯಕ್ತಿ ಮೃತ್ಯು Read More »

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ

ತಾಳಧ್ವಜ ರಥ ರಥ ಎಳೆಯಲು ತಳ್ಳಾಟ ನಡೆದಾಗ ಅವಘಡ ಭುವನೇಶ್ವರ : ಒಡಿಶಾದ ಪುರಿಯ ಜಗತ್ಪ್ರಸಿದ್ಧ ವಾರ್ಷಿಕ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮೃತಪಟ್ಟು 500ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಲಭದ್ರನ ರಥವನ್ನು ಎಳೆಯಲು ಭಾರಿ ಜನಸಮೂಹ ಮುಂದಕ್ಕೆ ಬಂದಾಗ ಕಾಲ್ತುಳಿದಂಥ ಪರಿಸ್ಥಿತಿ ತಲೆದೋರಿದೆ. ಶತಮಾನಗಳಷ್ಟು ಹಳೆಯ ಸಂಪ್ರದಾಯದ ಭಾಗವಾಗಿ ಎಳೆಯುವ ಮೂರು ಭವ್ಯ ರಥಗಳಲ್ಲಿ ಒಂದಾದ ತಾಳಧ್ವಜ ರಥವನ್ನು ಎಳೆಯುವ ಸಮಯದಲ್ಲಿ ಈ ಕಾಲ್ತುಳಿತದ ರೀತಿಯ ಘಟನೆ ಸಂಭವಿಸಿದೆ. ಲಕ್ಷಾಂತರ ಭಕ್ತರನ್ನು

ಜಗತ್ಪ್ರಸಿದ್ಧ ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಓರ್ವ ಮೃತ, 500 ಮಂದಿಗೆ ಗಾಯ Read More »

error: Content is protected !!
Scroll to Top