ಅಪಘಾತ

ಪಿಕಪ್‌ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು

ಬಂಟ್ವಾಳ: ಬೊಲೆರೊ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 75ರ ಕೈಕಂಬದ ಶಾಂತಿ ಅಂಗಡಿ ಎಂಬಲ್ಲಿ ನಡೆದಿದೆ. ಮಗನ ಹೊಸ ಸೈಕಲ್‌ಗೆ ಗಾಳಿ ಹಾಕಿಸಲು ಹೋಗುತ್ತಿದ್ದ ವ್ಯಕ್ತಿಗೆ ಬೊಲೆರೊ ಡಿಕ್ಕಿ ಹೊಡೆದಿದೆ. ಮೃತರನ್ನು ಶಾಂತಿ ಅಂಗಡಿ ನಿವಾಸಿ ಗಾಡ್ವಿನ್ ಪಿಂಟೊ (49) ಎಂದು ಗುರುತಿಸಲಾಗಿದೆ. ಗಾಡ್ವಿನ್ ಅವರು ಮಂಗಳವಾರವಷ್ಟೇ ತನ್ನ ಮಕ್ಕಳಿಗೆ ಹೊಸ ಸೈಕಲ್ ತಂದಿದ್ದರು. ಸೈಕಲ್ ಟೈರ್‌ನಲ್ಲಿ ಗಾಳಿ ಇಲ್ಲದ ಕಾರಣ ಬುಧವಾರ ಸಮೀಪದ ಸೈಕಲ್ […]

ಪಿಕಪ್‌ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು Read More »

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ ಸಮೀಪ ಮಾರಿಪಳ್ಳದಲ್ಲಿ ತಡರಾತ್ರಿ ಸಂಭವಿಸಿದ ಅಪಘಾತ ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬುಧವಾರ ರಾತ್ರಿ ಸುಮಾರು 12.45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಮಾ.31ರಂದು ಬೆಳಗ್ಗೆ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಗೆ ಸಂಬಂಧಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸಿದ್ದು ನಿರ್ವಾಹಕ ಕಾಶಿನಾಥ್ ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ಸಹೋದರಿಯರಾದ

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು : ಚಾಲಕ, ನಿರ್ವಾಹಕನ ವಿರುದ್ಧ ಕೇಸ್‌ Read More »

ಮೂಡುಬಿದಿರೆ : ಅಪಘಾತಕ್ಕೆ ತಾಯಿ-ಮಗ ಬಲಿ

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್‌ ಮೂಡುಬಿದಿರೆ : ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ದಾರುಣ ಘಟನೆ ಮೂಡುಬಿದಿರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ, ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ

ಮೂಡುಬಿದಿರೆ : ಅಪಘಾತಕ್ಕೆ ತಾಯಿ-ಮಗ ಬಲಿ Read More »

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು

ಚೈತ್ರ ಮಾಸದ ಕೊನೆಯ ಮಂಗಳವಾರದ ಪೂಜೆಗೆ ಸೇರಿದ್ದ ಭಕ್ತರು ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ಮಾತಾ ಮಂದಿರದಲ್ಲಿ ಇಂದು ಭೀಕರ ಕಾಲ್ತುಳಿತಸಂಭವಿಸಿ 8 ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಹಿಳೆಯರಾಗಿದ್ದಾರೆ. ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಇಂದು ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ, ದೇವಾಲಯದಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಭಾರಿ ಸಂಖ್ಯೆಯಲ್ಲಿ ಜನರಿದ್ದ ಕಾರಣ ನೂಕುನುಗ್ಗಲು

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು Read More »

ಲಾರಿ-ಬೈಕ್‌ ಡಿಕ್ಕಿ : ನವದಂಪತಿ ಸಾವು

ಶಿವಮೊಗ್ಗ : ಲಾರಿಗೆ ಬೈಕ್​ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್​ಪಿ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಬಾಬು(30) ಮತ್ತು ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೋಳ ತುಂಬಿದ್ದ ಲಾರಿ ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು,

ಲಾರಿ-ಬೈಕ್‌ ಡಿಕ್ಕಿ : ನವದಂಪತಿ ಸಾವು Read More »

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು

ಶಿವಮೊಗ್ಗ: ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಹತ್ತನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ರಿಪ್ಪನ್ ಪೇಟೆಯ ಬರುವೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂದು ಗುರುತಿಸಲಾಗಿದೆ. ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಬಾಲಕ ಆ‌ನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ

ಕೆರೆಗೆ ಕಾಲು ಜಾರಿ ಬಿದ್ದು ಹತ್ತನೇ ತರಗತಿ ಬಾಲಕ ಸಾವು Read More »

ಮಣ್ಣು ತುಂಬಿದ ಬುಟ್ಟಿ ತಲೆ ಮೇಲೆ ಬಿದ್ದು ಕಾರ್ಮಿಕ ಸಾವು

ಬಾವಿ ಕೊರೆಯುವಾಗ ಸಂಭವಿಸಿದ ದುರಂತ ಉಳ್ಳಾಲ: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್‌ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ತಲೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ಸಮೀಪ ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ (30) ಮೃತರು ಎಂದು ಗುರುತಿಸಲಾಗಿದೆ.ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು.

ಮಣ್ಣು ತುಂಬಿದ ಬುಟ್ಟಿ ತಲೆ ಮೇಲೆ ಬಿದ್ದು ಕಾರ್ಮಿಕ ಸಾವು Read More »

ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿ

ವಿಟ್ಲ: ಇಲ್ಲಿನ ಕಾಶಿಮಠ ಪೆಟ್ರೋಲ್ ಪಂಪ್ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಲ್ಲಕಟ್ಟ ನಿವಾಸಿ ರತ್ನಕರ್ ಎಂಬುವವರು ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಗೊಂಡ ರತ್ನಾಕರ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿ Read More »

ಕಾರುಗಳ ಮುಖಾಮುಖಿ ಡಿಕ್ಕಿ : ಪಾದಚಾರಿಗೆ ಗಂಭೀರ ಗಾಯ

ಬೆಳ್ಳಾರೆಯಲ್ಲಿ ಕಾರುಗಳ ನಡುವೆ ಅಪಘಾತ ನಡೆದಿದ್ದು, ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಗುದ್ದಿ ಗಂಭೀರ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ. ಮಾರುತಿ 800 ಕಾರು ಮತ್ತು ಬ್ರಿಜಾ ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ಪರಿಣಾಮ ಹತ್ತಿರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಗುದ್ದಿದೆ. ಕಾರು ಗುದ್ದಿದ ಪರಿಣಾಮ ಪೆರುವಾಜೆಯ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ಮುಖಾಮುಖಿ ಡಿಕ್ಕಿ : ಪಾದಚಾರಿಗೆ ಗಂಭೀರ ಗಾಯ Read More »

error: Content is protected !!
Scroll to Top