ಅಪಘಾತ

ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು !

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನಿರ್ಮಾಣ ಹಂತದ ಮನೆ ಮೇಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲು ಎಂಬಲ್ಲಿ ಇಂದು ನಡೆದಿದೆ. ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಾಫ (35) ಮೃತಪಟ್ಟವರು. ಮುಹಮ್ಮದ್ ಅವರು ಮನೆಯೊಂದನ್ನು ನಿರ್ಮಿಸುತ್ತಿದ್ದು, ಕಾರ್ಮಿಕರೊಂದಿಗೆ ಸೇರಿ ಮನೆ ಕೆಲಸದಲ್ಲಿ ತೊಡಗಿದ್ದರು. ಇಂದು ಮನೆ ಮೇಲೆ ನೀರು ಹಾಕುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರು ಪತ್ನಿ, ಗಂಡು, ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು ! Read More »

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಫೀಕ್‍ ನಿಧನ

ಪುತ್ತೂರು : ಹಲವು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೂರ್ನಡ್ಕ ಮರೀಲ್ ನಿವಾಸಿ ರಫೀಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರು. ರಫೀಕ್ ಅವರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದ ಬಳಿ ಎ.ಎಂ. ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿಯನ್ನು ಹೊಂದಿದ್ದರು. ಜತೆಗೆ ರಿಕ್ಷಾ ಚಾಲಕರಾಗಿ ದುಡಿಯುತಿದ್ದರು. ಹಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಫೀಕ್‍ ನಿಧನ Read More »

ಬಸ್-ಬೈಕ್ ಡಿಕ್ಕಿ | ವಿದ್ಯಾರ್ಥಿ ಸಿನಾನ್ ಮೃತ್ಯು

ಮಂಗಳೂರು: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಸಮೀಪದ ಜಲಾಲಿಯಾ ನಗರದ ನಿವಾಸಿ ಸಿನಾನ್ (21) ಮೃತಪಟ್ಟ ವಿದ್ಯಾರ್ಥಿ. ಸಿನಾನ್ ಮಂಗಳೂರಿನ ಯೆನಪೋಯ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಪಾರ್ಟ್ ಟೈಮ್ ನಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದು, ಈ ಮೂಲಕ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಫುಡ್ ಡೆಲಿವರಿ ಮಾಡಲು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ

ಬಸ್-ಬೈಕ್ ಡಿಕ್ಕಿ | ವಿದ್ಯಾರ್ಥಿ ಸಿನಾನ್ ಮೃತ್ಯು Read More »

ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ

ಪುತ್ತೂರು: ಕೊಂಬೆಟ್ಟು ಬಂಟರ ಭವನದ ಬಳಿ ಕಾರ್ಯಾಚರಿಸುತ್ತಿರುವ ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ಅಂಗಡಿಯಲ್ಲಿರುವ ಕೆಲವು ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಅಗ್ನಿಶಾಮಕ ದಳದವರು ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ Read More »

ಪಾದಚಾರಿಗೆ ಬೈಕ್ ಡಿಕ್ಕಿ | ಪ್ರಕರಣ ದಾಖಲು

ಪುತ್ತೂರು: ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ. ಕೆದಂಬಾಡಿ ಗ್ರಾಮದ ಕುರಿಕ್ಕಾರ ನಿವಾಸಿ ಕೊರಗಪ್ಪ ಪೂಜಾರಿ ಗಾಯಗೊಂಡವರು. ಪತ್ನಿ ರೇವತಿ ಜೊತೆ ಕುಂಬ್ರ ಪೇಟೆಗೆ ಬಂದು ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಬೈಕ್ ಡಿಕ್ಕಿ | ಪ್ರಕರಣ ದಾಖಲು Read More »

ವ್ಯಾಪಾರಿ ಶ್ರೀರಾಮ್ ಭಟ್ ಮೃತದೇಹ ಕೆರೆಯಲ್ಲಿ ಪತ್ತೆ !

ಪೆರ್ಲ: ಪೆರ್ಲ ಪೇಟೆಯ ವ್ಯಾಪಾರಿಯೊಬ್ಬರ ಮೃತದೇಹ ಮನೆ ಸಮೀಪದ ತೋಟದ ಕರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ವಿನಾಯಕ ಸ್ಟೋರ್ಸ್ ಮಾಲಕ, ಪಳ್ಳತ್ತಮೂಲೆ ನಿವಾಸಿ ಶ್ರೀರಾಮ್ ಭಟ್‌ (52) ಎಂಬವರ ಮೃತದೇಹ ಮನೆ ಸಮೀಪದ ತೋಟದ ಕೆರೆಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ. ಪೆರ್ಲ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಶ್ರೀರಾಮ್ ಭಟ್‍ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಸದಸ್ಯರಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಅವರು ಅಂಗಡಿಯ‌ನ್ನು ಸರಿಯಾಗಿ ತೆರಯುತ್ತಿರಲಿಲ್ಲ. ಎರಡು

ವ್ಯಾಪಾರಿ ಶ್ರೀರಾಮ್ ಭಟ್ ಮೃತದೇಹ ಕೆರೆಯಲ್ಲಿ ಪತ್ತೆ ! Read More »

ಮಡ್ಯಂಗಳದಲ್ಲಿ ಖಾಸಗಿ ಗುಡ್ಡಕ್ಕೆ ಬೆಂಕಿ

ಪುತ್ತೂರು: ತಾಲೂಕಿನ ಕೌಡಿಚ್ಚಾರು ಸಮೀಪದ ಮಡ್ಯಂಗಳದಲ್ಲಿ ಗುಡ್ಡವೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಇಂದು ನಡೆದಿದೆ. ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆ ಮತ್ತಷ್ಟು ಜಾಗಕ್ಕೆ ವ್ಯಾಪಿಸುತ್ತಿದ್ದೆ ಎಂದು ತಿಳಿದು ಬಂದಿದೆ.

ಮಡ್ಯಂಗಳದಲ್ಲಿ ಖಾಸಗಿ ಗುಡ್ಡಕ್ಕೆ ಬೆಂಕಿ Read More »

ಪರೀಕ್ಷೆ ಮುಗಿಸಿ ನಾಪತ್ತೆಯಾದ ನಾಲ್ವರು ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ !

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟವರು. ಈ

ಪರೀಕ್ಷೆ ಮುಗಿಸಿ ನಾಪತ್ತೆಯಾದ ನಾಲ್ವರು ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! Read More »

ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಕಾರು ಅಪಘಾತ | ಅಪಾಯದಿಂದ ಪಾರು

ಪುತ್ತೂರು: ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳದಲ್ಲಿ ನಡೆದಿದೆ. ಪುರುಷರಕಟ್ಟೆ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮುಂಭಾಗದಿಂದ ಅಡ್ಡಾದಿಡ್ಡಿಯಾಗಿ ಚಲಿಸುತ್ತಾ ಬಂದ ಕಾರನ್ನು ಗಮನಿಸಿ ಅಪಘಾತ ತಪ್ಪಿಸಲು ಇನ್ನೋವಾ ಕಾರು ಚಾಲಕ ರಸ್ತೆ ಬದಿಯಲ್ಲಿರುವ ಸೇಫ್ ರೂಟಿಗೆ ಚಲಾಯಿಸುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿರುವ ಕೆಂಪು ಕಲ್ಲಿನ ಕಟ್ಟೆಗೆ ಇನ್ನೋವಾ ಕಾರು ಬಡಿದಿದ್ದು ಈ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ಜಖಂ ಗೊಂಡಿದ್ದು ಎದುರಿಂದ ಬಂದ ಫೋರ್ಡ್ ಕಾರು ಕೂಡ

ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ ಕಾರು ಅಪಘಾತ | ಅಪಾಯದಿಂದ ಪಾರು Read More »

ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಕಬಕ ಗ್ರಾಮದ ಪೋಳ್ಯದಲ್ಲಿ ಈ ಅಪಘಾತ ನಡೆದಿದೆ. ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ  ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ.

ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top