ಅಪಘಾತ

ಕಾರು ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಕಾರೊಂದು ಪಲ್ಟಿಯಾದ ಘಟನೆ ಕೌಡಿಚ್ಚಾರು ಬಳಿ ಇಂದು ಮುಂಜಾನೆ ನಡೆದಿದೆ. ಅಲ್ವಿನ್ ಡಿ’ಸೋಜಾ ಹಾಗೂ ಕಾರ್ತಿಕ್ ಶೆಟ್ಟಿ ಕಾರ್ಕಳ ಎಂಬವರು ಮಡಿಕೇರಿ ಕಡೆಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ತಕ್ಷಣ ಸಾರ್ವಜನಿಕರು ರಕ್ಷಿಸಿದ್ದಾರೆ ಎನ್ನಲಾಗಿದೆ. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಸಹಕರಿಸಿದರು.

ಕಾರು ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು Read More »

ರಿಕ್ಷಾ ಪಲ್ಟಿ ! ಮೂವರಿಗೆ ಗಾಯ

ಪುತ್ತೂರು: ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ತಿಂಗಳಾಡಿ ಬಳಿಯ ನಿಡ್ಯಾನ ಎಂಬಲ್ಲಿ ಇಂದು ನಡೆದಿದೆ. ನಾಸಿರ್ ಎಂಬವರು ಮಾಡಾವಿನಿಂದ ತಿಂಗಳಾಡಿ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ರಿಕ್ಷಾ ನಿಡ್ಯಾನ ಬಸ್ ತಂಗುದಾಣದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಾಯಗೊಂಡರು ಎನ್ನಲಾಗಿದೆ. ಬಳಿಕ ಸ್ಥಳೀಯ ಸಹಕಾರದಿಂದ ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಾಸಿರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಷಾ ಪಲ್ಟಿ ! ಮೂವರಿಗೆ ಗಾಯ Read More »

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು

ಫುಟ್ಬಾಲ್ ಆಟಗಾರನೊಬ್ಬ ಆಟದಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಘಟನೆ ಇಂಡೋನೇಷ್ಯಾದ ಸಿಲಿವಾಂಗಿ ಸ್ಟೇಡಿಯಂನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೆಬ್ರವರಿ 10ರಂದು ಘಟನೆ ನಡೆದಿದ್ದು, ಪಶ್ಚಿಮ ಜಾವಾದ ಬಮಡಂಗ್‌ನಲ್ಲಿರುವ ಸಿಲಿವಾಂಗಿ ಸ್ಟೇಡಿಯಂನಲ್ಲಿ ಫುಟ್ಬಾಲ್ ಪಂದ್ಯ ಏರ್ಪಡಿಸಲಾಗಿತ್ತು. ಈ ಸೌಹಾರ್ದದ ಪಂದ್ಯದ ವೇಳೆ ಏಕಾಏಕಿ ಮಳೆ ಪ್ರಾರಂಭವಾಯಿತು. ಈ  ವೇಳೆ ಸಿಡಿಲು ಬಡಿದು ಆಟಗಾರ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಕುಸಿತದ ಬಳಿಕ ಕೊಂಚ ಹೊತ್ತು ಉಸಿರಾಡಿದ್ದು, ಬಳಿಕ ಸಾವನ್ನಪ್ಪಿದ್ದಾನೆ. ಈ

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು Read More »

ಇಬ್ಬರ ಸಾವಿಗೆ ಕಾರಣವಾದ ರಸ್ತೆ ಅಪಘಾತ | ಒಬ್ಬರು ಅಪಘಾತದಿಂದ ಮೃತಪಟ್ಟರೆ, ಇನ್ನೊಬ್ಬರು ಮನನೊಂದು ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತವೊಂದು ಇಬ್ಬರ ಸಾವಿಗೆ ಕಾರಣವಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಎರಡು ಬೈಕ್‍ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಮೃತಪಟ್ಟರೆ, ಅಪಘಾತದಿಂದ ನೊಂದು ಅಪಘಾತವೆಸಗಿದ ಇನ್ನೊಂದು ಬೈಕ್ ಸವಾರ ಹೆಚ್‍. ಡಿ. ತಮ್ಮಯ್ಯ (57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಡಿಕೇರಿಯ ಚೈನ್ ಗೇಟ್ ಬಳಿ ಅಪಘಾತ ಸಂಭವಿಸಿತ್ತು. ವಿದ್ಯಾರ್ಥಿ ಧನಲ್ ಸುಬ್ಬಯ್ಯ ಹಾಗೂ ಹೆಚ್. ಡಿ ತಮ್ಮಯ್ಯ ಅವರ ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿಯಾಗಿದ್ದವು. ಅಪಘಾತದಲ್ಲಿ ಧನಲ್

ಇಬ್ಬರ ಸಾವಿಗೆ ಕಾರಣವಾದ ರಸ್ತೆ ಅಪಘಾತ | ಒಬ್ಬರು ಅಪಘಾತದಿಂದ ಮೃತಪಟ್ಟರೆ, ಇನ್ನೊಬ್ಬರು ಮನನೊಂದು ಆತ್ಮಹತ್ಯೆ Read More »

ಬೈಕ್ – ಕಾರುಗಳ ಮಧ್ಯೆ ಸರಣಿ ಅಪಘಾತ | ಬೈಕ್ ಸಹಸವಾರೆಗೆ ಗಂಭೀರ ಗಾಯ

ಸುಳ್ಯ: ತಾಲೂಕಿನ ಬೊಳುಬೈಲಿನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಎರಡು ಕಾರು ಹಾಗೂ ಬೈಕ್ ಮತ್ತು ಸ್ಕೂಟಿಯ ಮಧ್ಯೆ ನಡೆದ ಸರಣಿ ಅಪಘಾತ ಸಂಭವಿಸಿದ್ದು, ಜಾಲ್ಸೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುನಿಲ್ ಕುಮಾರ್ ಮೋಂಟಡ್ಕ ಅವರು ಚಲಾಯಿಸುತ್ತಿದ್ದ ಬೈಕ್ ಮುಂಭಾಗದಲ್ಲಿ ಹೋಗುತ್ತಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು, ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ಢಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ.

ಬೈಕ್ – ಕಾರುಗಳ ಮಧ್ಯೆ ಸರಣಿ ಅಪಘಾತ | ಬೈಕ್ ಸಹಸವಾರೆಗೆ ಗಂಭೀರ ಗಾಯ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದರ್ಬೆಯಲ್ಲಿ ನಡೆದಿದೆ. ದರ್ಬೆ ಸಚಿನ್ ಟ್ರೇಡರ್ಸ್ ಅಂಗಡಿ ಎದುರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ  ಮಾಹಿತಿ ತಿಳಿದು ಬಂದಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಕ್ಕೆ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡ | ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಮೃತ್ಯು

ಕೇರಳ: ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಕ್ಕೆ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಆಯೇಷಾ ರಿದಾ (13) ಹಾಗೂ ಫಾತಿಮಾ ಮೊಹಿನಾ (11) ಮೃತಪಟ್ಟವರು. ಮೃತ ವಿದ್ಯಾರ್ಥಿಗಳು ಕಲ್ಪಕಂಚೇರಿ ಕಲ್ಲಿಂಗಪರಮ್ ಎಂ.ಎಸ್‍.ಎಂ.ಎಚ್‍.ಎಸ್‍. ತಿರುರು ಉಪಜಿಲಾ ಶಾಲೆಯ ಒಂಬತ್ತು ಮತ್ತು ಆರನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ನಿಲಂಬೂರ್ ಕರುಳ್ಳೆ ವನಂ ರೇಂಜ್‌ನ ನೆಡುಂಕಯಾಟ್ ಸೌಟ್ಸ್ ಮತ್ತು ಗೈಡ್ಸ್ ಶಿಬಿರದಲ್ಲಿ ಪಾಲ್ಗೊಳ್ಳಲು ಶಾಲೆಯ 49 ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರ

ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಕ್ಕೆ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡ | ಇಬ್ಬರು ವಿದ್ಯಾರ್ಥಿನಿಯರು ನದಿಯಲ್ಲಿ ಮುಳುಗಿ ಮೃತ್ಯು Read More »

ಪಡೀಲು ವಿಜಯನಗರ ಬಡಾವಣೆಯಲ್ಲಿ ಮನೆಗೆ ಬೆಂಕಿ ತಗುಲಿ ನಷ್ಟ | ಪುತ್ತಿಲ ಪರಿವಾರದಿಂದ ಧನಸಹಾಯ

ಪುತ್ತೂರು : ಪಡೀಲು ವಿಜಯನಗರ ಬಡಾವಣೆಯಲ್ಲಿ ನಾರಾಯಣ ನಾಯ್ಕ್ ಮತ್ತು ಶಿವಪ್ರಸಾದ್ ನಾಯ್ಕ್ ಎಂಬವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾಗಿದ್ದು, ಪುತ್ತಿಲ ಪರಿವಾರದಿಂದ ಧನಸಹಾಯ ನೀಡಲಾಯಿತು. ಅವಘಡ ಸಂಭವಿಸಿದ ತಕ್ಷಣ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿ, ಕೈಲಾದ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ, ಚಂದ್ರಹಾಸ ಶೆಟ್ಟಿ ಆನೆಮಜಲು, ಸತೀಶ್ ಭಂಡಾರಿ, ಪ್ರವೀಣ್ ಭಂಡಾರಿ,  ಮನೀಶ್ ಕುಲಾಲ್,

ಪಡೀಲು ವಿಜಯನಗರ ಬಡಾವಣೆಯಲ್ಲಿ ಮನೆಗೆ ಬೆಂಕಿ ತಗುಲಿ ನಷ್ಟ | ಪುತ್ತಿಲ ಪರಿವಾರದಿಂದ ಧನಸಹಾಯ Read More »

ಪಡೀಲ್ ವಿಜಯನಗರ ಬಡಾವಣೆಯಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್ | ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ನಗರದ ಹೊರವಲಯದ ಪಡೀಲ್ ವಿಜಯನಗರ ಬಡಾವಣೆಯಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್‍ ನಿಂದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ. ವಿಜಯನಗರ ಬಡಾವಣೆ ನಿವಾಸಿ ಶಾಂಭವಿ ನಾಯ್ಕ್ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಅಡಿಕೆ ಹಾಗೂ ಅಪಾರ ವಸ್ತುಗಳು ಸುಟ್ಟು ಹೋಗಿ ನಷ್ಟ ಉಂಟಾಗಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮೆಸ್ಕಾಂ ಅಧಿಕಾರಿಗೆ ಕರೆ

ಪಡೀಲ್ ವಿಜಯನಗರ ಬಡಾವಣೆಯಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್ | ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ

ಬೆಳ್ತಂಗಡಿ: ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂ. ಡೇವಿಡ್ (49) ಬಂಧಿತ ವ್ಯಕ್ತಿ. ಈತ ಪಟಾಕಿ ತಯಾರಿಕೆಗೆ ರಾಸಾಯನಿಕಗಳನ್ನು ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಜ.28 ರಂದು ಕುಕ್ಕೇಡಿ ಎಂಬಲ್ಲಿ ಸಂಜೆ ಸುಮಾರು 5.30 ರ ಹೊತ್ತಿಗೆ ಪಟಾಕಿ ಗೋಡೌನ್‍ ನಲ್ಲಿ ಸ್ಪೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸಂದರ್ಭ ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ Read More »

error: Content is protected !!
Scroll to Top