ಅಪಘಾತ

ಸ್ಕೂಟಿಗೆ ಲಾರಿ ಡಿಕ್ಕಿ : ಗಂಭೀರ ಗಾಯ!

ಪುತ್ತೂರು: ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರೆ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿ ತೆಂಕಿಲ ಬಳಿ ನಡೆದಿದೆ. ಸುಳ್ಯ ಕಡೆಗೆ ಮೀನು ಮಾರಾಟ ಮಾಡುತ್ತಿದ್ದ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಮುಂದುಗಡೆಯಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಚಾಲಕನ ಅಜಾಗರೂಕತೆ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಕೂಟಿಗೆ ಲಾರಿ ಡಿಕ್ಕಿ : ಗಂಭೀರ ಗಾಯ! Read More »

ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‍ ನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ.

ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ Read More »

ವಿದ್ಯುತ್ ಶಾಕ್ : ಲೈನ್‍ ಮ್ಯಾನ್ ಮೃತ್ಯು

ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್‌ ಓರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಪದ ಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ರಘು ಎಸ್‍.ಆರ್‍. (32) ಮೃತಪಟ್ಟವರು. ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್‌ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ

ವಿದ್ಯುತ್ ಶಾಕ್ : ಲೈನ್‍ ಮ್ಯಾನ್ ಮೃತ್ಯು Read More »

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!!

ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಮತ್ತಾವರದಲ್ಲಿ ಗುರುವಾರ ಸಂಜೆ ನಡೆದಿದೆ. ಮತ್ತಾವರ ಗ್ರಾಮದ ವಸಂತ (43) ಮೃತಪಟ್ಟವರು. ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವಸಂತ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆನೆ ದಾಳಿಗೆ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!! Read More »

ಬಹರೈನಿನಲ್ಲಿ ಕಾರು ಅಪಘಾತ; ಸುಳ್ಯ ಮೂಲದ ಮಗು ಮೃತ್ಯು!

ಕಾರು ಅಪಘಾತದಲ್ಲಿ ಸುಳ್ಯ ಮೂಲದ ಕುಟುಂಬವೊಂದು ಗಂಭೀರ ಗಾಯಗೊಂಡು, ಮಗು ಮೃತಪಟ್ಟ ಘಟನೆ ಬಹರೈನ್‌ನಿಂದ ವರದಿಯಾಗಿದೆ. ಸುಳ್ಯ ಮೂಲದ ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ ಅಶ್ರಫ್ ಮೆತ್ತಡ್ಕ ಅವರ ಮೂರು ವರ್ಷದ ಅಯಾನ್ ಅಬ್ದುಲ್ಲಾ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ದಂಪತಿಗಳು ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಅಶ್ರಫ್ ಮತ್ತು ಅವರ ಪತ್ನಿ ಬಹರೈನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಹರೈನಿನಲ್ಲಿ ಕಾರು ಅಪಘಾತ; ಸುಳ್ಯ ಮೂಲದ ಮಗು ಮೃತ್ಯು! Read More »

ಪಿಕಪ್ – ಆಟೋ ರಿಕ್ಷಾ ಡಿಕ್ಕಿ!

ಪುತ್ತೂರು: ರಿಕ್ಷಾ ಹಾಗೂ ಪಿಕಪ್ ಮುಖಾಮುಖಿ ಡಿಕ್ಕಿಯಾದ ಘಟನೆ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಆಟೋ ರಿಕ್ಷಾ ಚಾಲಕ ರಝಾಕ್ ಜಿಡೆಕಲ್ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ಕಡೆಯಿಂದ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಹಾಗೂ ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ನಡುವೆ ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾದ ಮುಂಭಾಗ ಜಖಂಗೊಂಡಿದೆ.

ಪಿಕಪ್ – ಆಟೋ ರಿಕ್ಷಾ ಡಿಕ್ಕಿ! Read More »

ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ

ಉಡುಪಿ: ಮಲ್ಪೆ ಸಮುದ್ರಕ್ಕೆ ಬಿದ್ದು ಮೃತಪಟ್ಟ ತಮಿಳುನಾಡು ಮೂಲದ ಮೀನುಗಾರನ ಮೃತದೇಹವನ್ನು ಹಾಗೂ ಸ್ಕೂಟಿಯನ್ನು ಮುಳುಗು ತಜ್ಞ ಈಶ್ವರ್ ‍ಮಲ್ಪೆ ಪತ್ತೆ ಮಾಡಿ, ಮೇಲೆತ್ತಿದ್ದಾರೆ. ತಮಿಳುನಾಡು ಮೂಲದ ಮೀನುಗಾರ ಮಲ್ಪೆ ಮೀನುಗಾರಿಕಾ ಬಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಅವರ ಹೆಸರು ತಿಳಿದುಬಂದಿಲ್ಲ. ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಅಚಾನಕ್ ಆಗಿ ಸಮುದ್ರಕ್ಕೆ ಬಿದ್ದಿದ್ದರು. ಸ್ಥಳಕ್ಕಾಗಮಿಸಿದ ಆಪದ್ಭಾಂಧವ ಈಶ್ವರ್ ಮಲ್ಪೆ ಅವರು, ಸಮುದ್ರಕ್ಕೆ ಧುಮುಕ್ಕಿದ್ದಾರೆ. ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿತ್ತು. ಕ್ರೇನ್ ಬಳಸಿ ಸ್ಕೂಟಿ ಹಾಗೂ ಮೃತದೇಹವನ್ನು ಸ್ಕೂಟಿ ಹಾಗೂ ಮೃತದೇಹವನ್ನು

ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ Read More »

ಮೆಡಿಕಲ್ ಶಾಪಿಗೆ ನುಗ್ಗಿದ ಆಂಬುಲೆನ್ಸ್: ಅಂಗಡಿಗಳಿಗೆ ಹಾನಿ!!

ಜನೌಷಧ ಕೇಂದ್ರಕ್ಕೆ ಆಂಬುಲೆನ್ಸ್ ನುಗ್ಗಿದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ, ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ರಸ್ತೆ ಪಕ್ಕಕ್ಕೆ ಚಲಿಸಿದೆ. ನೇರವಾಗಿ ಜನೌಷಧ ಕೇಂದ್ರಕ್ಕೆ ಆಂಬುಲೆನ್ಸ್ ನುಗ್ಗಿದ್ದು, ಚಾಲಕ ಗಾಯಗೊಂಡಿದ್ದಾನೆ. ಜನೌಷಧ ಕೇಂದ್ರ ಸೇರಿದಂತೆ ಪಕ್ಕದ ಅಂಗಡಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಮೆಡಿಕಲ್ ಶಾಪಿಗೆ ನುಗ್ಗಿದ ಆಂಬುಲೆನ್ಸ್: ಅಂಗಡಿಗಳಿಗೆ ಹಾನಿ!! Read More »

ಆಕ್ಟಿವಾ-ಕಾರು ಅಪಘಾತ !

ಪುತ್ತೂರು: ನಗರದ ಹೊರವಲಯದ ಮುಕ್ರಂಪಾಡಿಯಲ್ಲಿ ಆಕ್ಟಿವಾ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ನಡೆದಿದೆ. ಅಪಘಾತದ ಪರಿಣಾಮ ಕೆಲವರಿಗೆ ಗಾಯಗಳಾಗಿವೆ ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆಕ್ಟಿವಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಆಕ್ಟಿವಾ-ಕಾರು ಅಪಘಾತ ! Read More »

ಪಯಸ್ವನಿ ನದಿಯಲ್ಲಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ !

ಸುಳ್ಯ: ಸುಳ್ಯ ಕೆ.ವಿ.ಜಿ ಕ್ಯಾಂಪಸ್ ಬಳಿಯ ಬಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯಲ್ಲಿ ಮುಳುಗಿ ಯುವಕ ಕಣ್ಮರೆಯಾದ ವ್ಯಕ್ತಿ ಶವ ಪತ್ತೆಯಾಗಿದೆ. ಬಟ್ಟೆ ಒಗೆಯಲು ಹಾಗೂ ಸ್ನಾನಕ್ಕೆಂದು ನದಿಗೆ ಬಂದ ಮೂವರು ಯುವಕರು ನೀರಿಗೆ ಇಳಿದಿದ್ದರು ಅದರಲ್ಲಿ ಒಬ್ಬರು ಕಣ್ಮರೆಯಾಗಿದ್ದರು. ಆ ವ್ಯಕ್ತಿಯ ಪತ್ತೆಗಾಗಿ ಸುಳ್ಯ ಆರಕ್ಷಕ ಠಾಣೆ ಸಿಬ್ಬಂದಿಗಳು ಅಗ್ನಿಶಾಮಕ ದಳ ಹಾಗೂ ಪೈಚಾರಿನ ಮುಳುಗು ತಜ್ಞರ ತಂಡ ಶೋಧ ಮುಂದುವರಿಸಿದ್ದರು. ಇದೀಗ ಮೃತ ದೇಹವನ್ನು ನೀರಿನಿಂದ ಮೇಲೇತ್ತಲಾಗಿದೆ ಎಂದು ತಿಳಿದು ಬಂದಿದೆ.

ಪಯಸ್ವನಿ ನದಿಯಲ್ಲಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ ! Read More »

error: Content is protected !!
Scroll to Top