ಅಪಘಾತ

ಕಾರು-ಬೈಕ್‌ ಡಿಕ್ಕಿ : ಇಬ್ಬರು ಸವಾರರು ಗಂಭೀರ

ವಿಟ್ಲ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಕಂಬ ಮೂಲದವರು ಎನ್ನಲಾದ ಸವಾರ ಮತ್ತು ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾರು ವಿಟ್ಲದ ಮೇಗಿನಪೇಟೆಯ ನಿವಾಸಿಯದ್ದು, ಹೊರ […]

ಕಾರು-ಬೈಕ್‌ ಡಿಕ್ಕಿ : ಇಬ್ಬರು ಸವಾರರು ಗಂಭೀರ Read More »

ಟಿಪ್ಪರ್ – ಸರ್ಕಾರಿ ಬಸ್ಸಿನ ನಡುವೆ ಅಪಘಾತ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಟಿಪ್ಪರ್ ಚಾಲಕ

ವಿಟ್ಲ: ಮುಚ್ಚಿರಪದವಿನಲ್ಲಿ ಸರ್ಕಾರಿ ಬಸ್ಸು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಬಸ್ಸು ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿತ್ತು. ಟಿಪ್ಪರ್ ‌ಪೆರುವಾಯಿ ಕಡೆಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಇವೆರಡೂ ವಾಹನಗಳು ಮುಖಾಮುಖಿ ಗುದ್ದಿಕೊಂಡಿವೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೆ ಅಪಘಾತದ ಬಳಿಕ ಎರಡೂ ವಾಹನಗಲ‌ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದೆ. ಟಿಪ್ಪರ್ ‌ಚಾಲಕ ಬಿಲಾಲ್ ‌ಎಂಬಾತ‌ ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಕಂಡಕ್ಟರ್ ವಿಟ್ಲ

ಟಿಪ್ಪರ್ – ಸರ್ಕಾರಿ ಬಸ್ಸಿನ ನಡುವೆ ಅಪಘಾತ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಟಿಪ್ಪರ್ ಚಾಲಕ Read More »

ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಗಾಳಿ ಮಳೆಗೆ ಕೇಬಲ್ ಒಂದು ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಚ ಘಟನೆ ನಗರದ ಗೋಕುಲ ರಸ್ತೆಯ ಅರ್ಬನ್ ಓಯಸಿಸ್ ಮಾಲ್‌ನ ಸಮೀಪ ನಡೆದಿದೆ. ಮೃತರನ್ನು ತಾಜ್‌ ನಗರ ನಿವಾಸಿ ಮೀಜಾಮುಲ್ಲಾ ಮುಲ್ಲಾ ಮತ್ತು ಫಯಾಜ್ ಭಾಗವಾನ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಬೈಕ್ ಮೂಲಕ ಗೋಕುಲ್ ರಸ್ತೆ ವಿಮಾನ ನಿಲ್ದಾಣದಿಂದ ಹೊಸೂರು ಕಡೆ ಬರುತ್ತಿದ್ದರು. ಈ ವೇಳೆ ಗಾಳಿ ಮಳೆಗೆ ಕೇಬಲ್‌ ತುಂಡಾಗಿ ಇವರ ಮೇಲೆ ಬಿದ್ದಿದೆ. ಅದನ್ನು ತಪ್ಪಿಸುವ ಪ್ರಯತ್ನದಲ್ಲಿದ್ದಾಗ

ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು Read More »

ಅಮೆರಿಕ ಮಿಲಿಟರಿ ವಿಮಾನ ಪತನ : ಮೃತರ ಸಂಖ್ಯೆ 66ಕ್ಕೇರಿಕೆ

ಟೇಕಾಫ್‌ ಆದ ಮರುಕ್ಷಣ ಪತನಗೊಂಡ ವಿಮಾನ ವಾಷಿಂಗ್ಟನ್‌ : ದಕ್ಷಿಣ ಕೊಲಂಬಿಯಾದಲ್ಲಿ 121 ಮಂದಿ ಪ್ರಯಾಣಿಸುತ್ತಿದ್ದ ಅಮೆರಿಕದ ಸೇನಾ ವಿಮಾನ ಟೇಕ್‌ಆಫ್ ಆದ ತಕ್ಷಣ ಪತನಗೊಂಡ ಪರಿಣಾಮ ಮೃತಪಟ್ಟವರ ಸಂಖ್ಯೆ 66ಕ್ಕೇರಿದೆ. ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಸಚಿವ ಪೆಡ್ರೋ ಸಾಂಚೆಝ್ ಎಕ್ಸ್ ಖಾತೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಈ ಅಪಘಾತ ಅಮೆಜಾನ್ ಪ್ರದೇಶದಲ್ಲಿರುವ ಪುಟುಮಾಯೋ ಪ್ರಾಂತ್ಯದ ದೂರದ ಪಟ್ಟಣವಾದ ಪ್ಯೂರ್ಟೋ ಲೆಗುಇಜಾಮೋದಲ್ಲಿ ಸಂಭವಿಸಿದೆ. ಈ ಪ್ರದೇಶ ಪೆರು ಮತ್ತು ಇಕ್ವಡಾರ್ ದೇಶಗಳ ಗಡಿಗೆ

ಅಮೆರಿಕ ಮಿಲಿಟರಿ ವಿಮಾನ ಪತನ : ಮೃತರ ಸಂಖ್ಯೆ 66ಕ್ಕೇರಿಕೆ Read More »

ಅಮೆರಿಕದ ಮಿಲಿಟರಿ ವಿಮಾನ ಪತನ : ಕನಿಷ್ಠ 8 ಸೈನಿಕರು ಸಾವು

ಭಾರಿ ದುರಂತದಲ್ಲಿ ಎಲ್ಲ 121 ಮಂದಿ ಸಾವಿಗೀಡಾಗಿರುವ ಶಂಕೆ ವಾಷಿಂಗ್ಟನ್‌ : ಅಮೆರಿಕದ ಕೊಲಂಬಿಯಾದಲ್ಲಿ ಭಾರಿ ವಿಮಾನ ದುರಂತ ಸಂಭವಿಸಿದ್ದು, ದೇಶದ ಮಿಲಿಟರಿಗೆ ದೊಡ್ಡ ಆಘಾತ ತಂದಿದೆ. ವಾಯುಪಡೆಯ ಹರ್ಕ್ಯುಲಸ್ C-130 ಮಿಲಿಟರಿ ವಿಮಾನ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಕನಿಷ್ಠ 8 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ವಿಮಾನದಲ್ಲಿ ಸುಮಾರು 110 ಸೈನಿಕರ ಸಹಿತ 121 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ದುರಂತದಲ್ಲಿ ಎಲ್ಲರೂ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ,

ಅಮೆರಿಕದ ಮಿಲಿಟರಿ ವಿಮಾನ ಪತನ : ಕನಿಷ್ಠ 8 ಸೈನಿಕರು ಸಾವು Read More »

ಆಟೋ – ಬಸ್ಸಿನ ನಡುವೆ ಅಪಘಾತ

ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಆಟೋ ಮತ್ತು ಬಸ್ಸು ಗುದ್ದಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಆಟೋ – ಬಸ್ಸಿನ ನಡುವೆ ಅಪಘಾತ Read More »

ದರ್ಬೆಯಲ್ಲಿ ರಿಕ್ಷಾ – ದ್ವಿಚಕ್ರ ವಾಹನದ ನಡುವೆ ಅಪಘಾತ

ಪುತ್ತೂರು: ದರ್ಬೆಯ ಹರ್ಷ ಮಳಿಗೆಯ ಸಮೀಪ ಇಂದು ಮಧ್ಯಾಹ್ನ ಅಟೋ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಸವಾರ ಗಾಯಗೊಂಡಿದ್ದಾರೆ. ಸ್ಕೂಟಿ ಸವಾರ ಒಳ ರಸ್ತೆಯಿಂದ ಮುಖ್ಯರಸ್ತೆಗೆ ‌ಸಂಪರ್ಕಿಸುತ್ತಿದ್ದು, ಆಟೋ ರಿಕ್ಷಾ ದರ್ಬೆಯಿಂದ ಪುತ್ತೂರಿಗೆ ‌ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಸ್ಕೂಟಿ ರಸ್ತೆಗೆ ಬಿದ್ದು ಸವಾರ ಮತ್ತು ಹಿಂಬದಿ ಸವಾರೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಇವರಿಗೆ ತರಚು ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯ ‌ಬಳಿಕ ರಿಕ್ಷಾ ಚಾಲಕ ಮತ್ತು ಸ್ಕೂಟಿಯಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.

ದರ್ಬೆಯಲ್ಲಿ ರಿಕ್ಷಾ – ದ್ವಿಚಕ್ರ ವಾಹನದ ನಡುವೆ ಅಪಘಾತ Read More »

ಆಕ್ಸಿಡೆಂಟ್‌ನಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಮೂಡಬಿದ್ರೆ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ನಡೆದಿದ್ದ ಆ್ಯಕ್ಸಿಡೆಂಟ್ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಚ ಘಟನೆ ನಡೆದಿದೆ. ಪಡುಮಾರ್ನಾಡು ನಿವಾಸಿ ಸಾತ್ವಿಕ್ ‌ಕುಲಾಲ್(21) ಎಂಬವರೇ ‌ಮೃತ ದುರ್ದೈವಿ. ಸಾತ್ವಿಕ್ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಅವರಿಗೆ ಕಳೆದ 2025 ರ ಅಕ್ಟೋಬರ್ ತಿಂಗಳಿನಲ್ಲಿ ಬೈಕ್ ಆ್ಯಕ್ಸಿಡೆಂಟ್ ಸಂಭವಿಸಿತ್ತು. ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿರುವುದಾಗಿದೆ.

ಆಕ್ಸಿಡೆಂಟ್‌ನಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು Read More »

ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್‌ : ಯುವಕನಿಗೆ ಗಾಯ

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಗಾಯಗೊಂಡವರು. ಗುರುಪ್ರಸಾದ್ ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲನ್ನು ತನ್ನ ಪ್ಯಾಂಟ್‌ನ ಜೇಬಿನೊಳಗೆ ಹಾಕಿಕೊಂಡಿದ್ದರು. ಈ ವೇಳೆ ಮೊಬೈಲ್‌ ಸ್ಫೋಟಗೊಂಡಿದೆ. ಪ್ಯಾಂಟ್‌ ಜೇಬಿನೊಳಗಿದ್ದ ಕಾರಣ ತೊಡೆಯ ಚರ್ಮ ಬೆಂದು ಹೋಗಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್‌ : ಯುವಕನಿಗೆ ಗಾಯ Read More »

ಬೆಂಕಿ ಅವಘಡ : ಟಯರ್‌ ಪಂಕ್ಚರ್‌ ಅಂಗಡಿ ನಾಶ

ಟ್ರಾನ್ಸ್‌ಫಾರ್ಮರ್‌ನಿಂದ ಕಿಡಿ ಸಿಡಿದು ಅನಾಹುತ ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಪ್ಲಾಜಾ ಸಮೀಪವಿರುವ ಟೈರ್ ಪಂಕ್ಚರ್ ಅಂಗಡಿಯೊಂದು ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಹತ್ತಿರದ ಇಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್‌ನಿಂದ ಹೊರಬಂದ ಕಿಡಿಗಳು ಒಣ ಹುಲ್ಲಿಗೆ ತಗುಲಿ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಹರಡಿ, ಬಿಹಾರ ಮೂಲದ ಸೈಫುಲ್ಲಾ ಎಂಬುವವರಿಗೆ ಸೇರಿದ ಅಂಗಡಿಗೆ ತಗುಲಿದೆ. ಅಂಗಡಿಯಲ್ಲಿದ್ದ ಕಂಪ್ರೆಸರ್, ಜನರೇಟರ್, ಟೂಲ್ ಕಿಟ್‌ಗಳು ಮತ್ತು ದಾಸ್ತಾನು ಮಾಡಲಾಗಿದ್ದ

ಬೆಂಕಿ ಅವಘಡ : ಟಯರ್‌ ಪಂಕ್ಚರ್‌ ಅಂಗಡಿ ನಾಶ Read More »

error: Content is protected !!
Scroll to Top