ಅಪಘಾತ

ಕಂಬಳ ಕೋಣಗಳ ಯಜಮಾನ ಕಟ್ಟಡದಿಂದ ಬಿದ್ದು ಸಾವು !

ಪೂಂಜಾಲಕಟ್ಟೆ: ಹಳೆಯ ಕಟ್ಟಡದ ಮೇಲ್ಚಾವಣಿ ಕೆಡಹುವ ಸಂದರ್ಭದಲ್ಲಿ ಕೆಳಗೆ ಬಿದ್ದು ಕಂಬಳ ಕೋಣಗಳ ಯಜಮಾನ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಕಕಜೆಕಾರು ಎಂಬಲ್ಲಿ ನಡೆದಿದೆ. ಬಡಗಕಜೆಕಾರು ಗ್ರಾಮದ ಕುಲೆಂಜಿಕೋಡಿ ನಿವಾಸಿ ಸುಂದರ ಪೂಜಾರಿ (55) ಮೃತಪಟ್ಟವರು. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸುಂದರ ಪೂಜಾರಿ ತೆಂಕಕಜೆಕಾರಿನ ವಿಜಯಾ ಎಂಬವರ ದೈವಸ್ಥಾನ ಕಟ್ಟಡ ಕೆಡಹುವ ಕೆಲಸಕ್ಕೆ ಹೋಗಿದ್ದು ಗೋಡೆಯ ಮೇಲಿನಿಂದ ಸ್ಲಾಬ್‌ ತೆಗೆಯುವ ವೇಳೆ ಸ್ಲಾಬ್‌ ಸಹಿತ ಕೆಳಕ್ಕೆ ಬಿದ್ದಿದ್ದರು. ಗಂಭೀರ ಗಾಯಗೊಂಡ […]

ಕಂಬಳ ಕೋಣಗಳ ಯಜಮಾನ ಕಟ್ಟಡದಿಂದ ಬಿದ್ದು ಸಾವು ! Read More »

ದೇಹದ ಮುಕ್ಕಾಲು ಭಾಗ ತಿಂದ ನರಭಕ್ಷಕ ಹುಲಿ!!

ಹುಲಿ ದಾಳಿಗೆ ಸಿಲುಕಿದ ವ್ಯಕ್ತಿಯೋರ್ವನ ಮೃತದೇಹ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಆಡಿನಕಣಿವೆಯ ಬಸವಯ್ಯ (54) ಮೃತ ವ್ಯಕ್ತಿ. ಬಸವಯ್ಯ ಬುಡಕಟ್ಟು ಜನಾಂಗಕ್ಕೆ ಸೇರಿದವನು. ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ. ನಂತರ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಅಭಯಾರಣ್ಯದ ಒಳಗೆ ಮೃತದೇಹ ಪತ್ತೆಯಾಗಿದೆ. ಆತನ ಕಾಲು, ಎದೆಯ ಭಾಗವನ್ನು ಹುಲಿ ತಿಂದು ಹಾಕಿದ್ದು, ಕೇವಲ ಹೊಟ್ಟೆ ಭಾಗವನ್ನು ಮಾತ್ರ ಬಿಟ್ಟಿದೆ. ಮುಕ್ಕಾಲು

ದೇಹದ ಮುಕ್ಕಾಲು ಭಾಗ ತಿಂದ ನರಭಕ್ಷಕ ಹುಲಿ!! Read More »

ಕಲ್ಲಿನ ಕೋರೆಯಲ್ಲಿ ಕಾರ್ಮಿಕ ಮೃತ್ಯು!

ವಿಟ್ಲ: ಕಾರ್ಮಿಕನೋರ್ವ ಕಲ್ಲಿನ ಕೋರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವಿನಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತಪಟ್ಟ ದುರ್ದೈವಿ. ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರಿಗೆ ಈಜು ಬರುತ್ತಿರಲಿಲ್ಲ ಎಂದು ಹೇಳಲಾಗಿದೆ.

ಕಲ್ಲಿನ ಕೋರೆಯಲ್ಲಿ ಕಾರ್ಮಿಕ ಮೃತ್ಯು! Read More »

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ !

ಕೋಟ: ಶಬರಿಮಲೆ ಯಾತ್ರೀಕರ ಟೆಂಪೋ ಟ್ರಾವೆಲರ್ ಪಲ್ಟಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಬಾಳೆಬೆಟ್ಟು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮುರ್ಡೇಶ್ವರದಿಂದ ಯಾತ್ರಿಕರು ಹೊರಟಿದ್ದರು ಎನ್ನಲಾಗಿದ್ದು, ಹೆದ್ದಾರಿಯಲ್ಲಿ ಅಡ್ಡ ಬಂದ ದನವೊಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಎಲ್ಲಾ ಅಯ್ಯಪ್ಪ ಭಕ್ತರು ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕೋಟ ಪೊಲೀಸರು ಮತ್ತು ಟೋಲ್ ಸಿಬ್ಬಂದಿಗಳು, ಸಾರ್ವಜನಿಕರು ಸೇರಿ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ ! Read More »

ಉಳ್ಳಾಲ ಸಮುದ್ರ ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ

ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆ ತೆರಳಿದ್ದ ಸಂದರ್ಭ ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಸೊಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಓದುತ್ತಿದ್ದ  ವಿದ್ಯಾರ್ಥಿಗಳಾದ ಯಶ್ವಿತ್‌, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಮದ್ಯಾಹ್ನ 12.40ಕ್ಕೆ ಕಾಲೇಜು ಮುಗಿಸಿ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆಯ ಬಳಿಕ ದೇವಸ್ಥಾನದಲ್ಲಿ ಮುಗಿಸಿ ಅಲ್ಲೇ ಪಕ್ಕದ ಮರದಡಿಯಲ್ಲಿ ಕುಳಿತಿದ್ದರು. ಸುಮಾರು ಮೂರು ಗಂಟೆಯ ಬಳಿಕ ಸ್ಥಳೀಯ ಗೂಡಂಗಡಿಯಿಂದ ತಿಂಡಿ ತೆಗೆದುಕೊಂಡು ಸೋಮೇಶ್ವರ ದೇವಸ್ಥಾನದಿಂದ ಉಚ್ಚಿಲದ ಕಡೆಗೆ

ಉಳ್ಳಾಲ ಸಮುದ್ರ ಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ Read More »

ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ

ಪುಣಚ: ಮಿಂಚು, ಸಿಡಿಲಿಗೆ ಕೃಷಿ ಪಂಪ್‍ ಶೆಡ್ ಹಾಗೂ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾ ಘಟನೆ ಶನಿವಾರ ರಾತ್ರಿ ಪುಣಚ ಕೆಲ್ಲಾಳಿ ಎಂಬಲ್ಲಿ ನಡೆದಿದೆ. ಪುಣಚ ಕೆಲ್ಲಾಳಿಯ ದೇವಪ್ಪ ನಾಯ್ಕ ಎಂಬವರ ಮನೆ ಪಂಪ್ ಶೆಡ್ ಹಾಗೂ ವಿದ್ಯುತ್ ಉಪಕರಣಗಳು ಸಿಡಿಲಿಗೆ ಸುಟ್ಟು ಕರಕಲಾಗಿದೆ. ಈ ಕುರಿತು ಅಪಾಯ ನಷ್ಟ ಉಂಟಾಗಿದೆ ಎಂದು ಮನೆ ಮಾಲಕ ತಿಳಿಸಿದ್ದಾರೆ.

ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ Read More »

ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ

ಪುತ್ತೂರು: ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಹಿತ ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ. ಚಿಕ್ಕಮುಡೂರು ಗ್ರಾಮ ನಿವಾಸಿ ಹರೀಶ್ ಕೆ(42) ಹಾಗೂ ಕೆ.ಸಚ್ಚಿದಾನಂದ ರಾವ್ ಗಾಯಗೊಂಡವರು. ಕಾರು ಚಾಲಕ ನಿರ್ಲಕ್ಷ್ಯತನದಿಂದ ರಸ್ತೆಯಲ್ಲಿ ಒಮ್ಮೇಲೆ ಯು ಟರ್ನ್ ಮಾಡಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಮಗುಚಿ ಬಿದ್ದಿದ್ದು, ಇಬ್ಬರು ಗಾಯಗೊಂಡರು. ಸಚ್ಚಿದಾನಂದ ರವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ

ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ Read More »

ಲಾರಿಯಡಿಗೆ ಸಿಲುಕಿ ಚಾಲಕ ಮೃತ್ಯು

ಕಾಸರಗೋಡು: ಚಾಲಕನೋರ್ವ ಲಾರಿಯಡಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕದಲ್ಲಿ ನಡೆದಿದೆ. ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಮೃತಪಟ್ಟವರು. ಲಾರಿಯನ್ನು ಸ್ಟಾರ್ಟಿನಲ್ಲಿರಿಸಿ ಗೇಟ್ ತೆರೆಯಲು ತೆರಳಿದ ಸಂದರ್ಭ ಲಾರಿ ಮುಂದಕ್ಕೆ ಚಲಿಸಿದೆ. ಎದುರಿನಲ್ಲಿದ್ದ ಮಹಮ್ಮದ್ ನೌಫಲ್ ಲಾರಿಯಡಿಗೆ ಸಿಲುಕಿದ್ದು, ತಕ್ಷಣ ಅವರನ್ನು ಕುಂಬಳೆ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಲಾರಿಯಡಿಗೆ ಸಿಲುಕಿ ಚಾಲಕ ಮೃತ್ಯು Read More »

ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿ: ತುಂಬು ಗರ್ಭಿಣಿ ಮೃತ್ಯು!

ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ತುಂಬು ಗರ್ಭಿಣಿ ಮೃತಪಟ್ಟ ಘಟನೆ ವಿಜಯಪುರದ ತಾಳಿಕೋಟೆಯಲ್ಲಿ ನಡೆದಿದೆ. ಮೃತರನ್ನು ಭಾಗ್ಯಶ್ರೀ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಗರ್ಭಿಣಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ  ಎಂದು ದೂರಲಾಗಿದೆ. ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿತ್ತು. ಆ್ಯಂಬುಲೆನ್ಸ್’ನಲ್ಲಿದ್ದ ತುಂಬು ಗರ್ಭಿಣಿ ಸಹಿತ ಇಬ್ಬರು ಸ್ಟಾಫ್ ನರ್ಸ್, ಓರ್ವ ಸಹಾಯಕ ಗಾಯಗೊಂಡಿದ್ದರು. ತಾಳಿಕೋಟೆ ಸಮುದಾಯ

ನಿಂತಿದ್ದ ಟ್ರ್ಯಾಕ್ಟರಿಗೆ ಆ್ಯಂಬುಲೆನ್ಸ್ ಡಿಕ್ಕಿ: ತುಂಬು ಗರ್ಭಿಣಿ ಮೃತ್ಯು! Read More »

ಎದೆಯ ಭಾಗದಿಂದಲೇ ಹರಿದ ಬಸ್!! | ಸ್ಥಳದಲ್ಲೇ ಕೊನೆಯುಸಿರೆಳೆದ ಕುಂಞಿರಾಮ ಮಣಿಯಾಣಿ!

ಪುತ್ತೂರು: ಖಾಸಗಿ ಬಸ್ಸಿನ ಅಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಗಾಳಿಮುಖದಲ್ಲಿ ನಡೆದಿದ್ದು, ಮೃತಪಟ್ಟವರನ್ನು ಕುಂಞಿರಾಮ ಮಣಿಯಾಣಿ ಎಂದು ಗುರುತಿಸಲಾಗಿದೆ. ಕೃಷಿಕರಾಗಿದ್ದ ಕುಂಞಿರಾಮ ಮಣಿಯಾಣಿ ಅವರು ಮುಳ್ಳೇರಿಯಾದ ಕೋಳಿಕಾಲ ನಿವಾಸಿ. ಗಾಳಿಮುಖಕ್ಕೆ ಬಂದಿದ್ದ ಅವರು, ಬಸ್ಸಿನಿಂದ ಇಳಿದು ರಸ್ತೆ ದಾಟಬೇಕು ಎನ್ನುವಷ್ಟರಲ್ಲಿ ದುರ್ಘಟನೆ ನಡೆದಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವವರಿದ್ದರು. ಅಷ್ಟರಲ್ಲಿ ಬಸ್ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಬಸ್ ಹರಿದಿದೆ. ತಾನು ಬಂದಿದ್ದ

ಎದೆಯ ಭಾಗದಿಂದಲೇ ಹರಿದ ಬಸ್!! | ಸ್ಥಳದಲ್ಲೇ ಕೊನೆಯುಸಿರೆಳೆದ ಕುಂಞಿರಾಮ ಮಣಿಯಾಣಿ! Read More »

error: Content is protected !!
Scroll to Top