ಅಪಘಾತ

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು

ಪ್ರಯಾಗ್‌ರಾಜ್‌: ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ […]

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು Read More »

ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌

ಕಾರು, ಬೈಕ್‌ಗಳು, ಆಟೋರಿಕ್ಷಾ ಜಖಂ ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ತನ್ನಿಂದ ತಾನೇ ಚಲಿಸಿ ರಸ್ತೆ ದಾಟಿ ಹೋಗಿ ಹೋಟೆಲ್‌ಗೆ ನುಗ್ಗಿ ಕಾರು, ಬೈಕ್‌ಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ರಾತ್ರಿ ಕುಳಾಯಿಯ ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಲ್ಲಿ ಚಲಿಸಿಕೊಂಡು ಹೋಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿ ಹೊಟೇಲ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋರಿಕ್ಷಾ

ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌ Read More »

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಯುವಕ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ ಮೃತ ಪಟ್ಟ ಯುವಕ ಎನ್ನಲಾಗಿದೆ. ಪ್ರಶಾಂತ್‌ ಪೂಜಾರಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬೈಕ್‌ ಚಲಾಯಿಸಿಕೊಂಡು ಹೋಗಿದ್ದು, ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ತಲುಪುತ್ತಿದ್ದಂತೆ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಯುವಕ ಮೃತ್ಯು Read More »

ಆಟೋ ರಿಕ್ಷಾ – ಹೋಂಡಾ ಆಕ್ಟಿವಾ ನಡುವೆ ಅಪಘಾತ | ಆಕ್ಟಿವಾ ಸವಾರರಿಗೆ ಗಾಯ

ಪುತ್ತೂರು : ನರಿಮೊಗರು ಶಾಲಾ ಬಳಿ ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾಗಿದೆ. ಅಪಘಾತ ನಡೆದ ತಕ್ಷಣ ಅಲ್ಲಿಗೆ ಆಗಮಿಸಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು ಮಾರ್ಗದ ಕೆಲಸ ಮಾಡುವ ಗುತ್ತಿಗೆ ದಾರರ ಕೆಲವು ತಪ್ಪುಗಳಿಂದ ಅಪಘಾತ ಹೆಚ್ಚುತ್ತಿದೆ. ಕಾರಣ ನರಿಮೊಗರು ಶಾಲಾ ಬಳಿ ಇರುವ 80 ವರ್ಷ ಹಳೆಯ ಕಟ್ಟಡ ಮಾರ್ಗಕ್ಕೆ ಹೊಂದಿಕೊಂಡು ಇರುವುದರಿಂದ

ಆಟೋ ರಿಕ್ಷಾ – ಹೋಂಡಾ ಆಕ್ಟಿವಾ ನಡುವೆ ಅಪಘಾತ | ಆಕ್ಟಿವಾ ಸವಾರರಿಗೆ ಗಾಯ Read More »

ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ

ಬದುಕುಳಿದ ಕೋಳಿಗಳನ್ನು ಎತ್ತಿಕೊಂಡು ಹೋದ ಸ್ಥಳೀಯರು ಬಂಟ್ವಾಳ : ತಾಲೂಕಿನ ಕಾಲೆಜಿಮಲೆ ಮೀಸಲು ಅರಣ್ಯದ ಒಳರಸ್ತೆಯಲ್ಲಿ ಕೋಳಿ ಸಾಗಾಟದ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕಿಸುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.ತಮಿಳುನಾಡು ನೋಂದಣಿಯ ಪಿಕಪ್ ವಾಹನ ಕನ್ಯಾನ ಜಂಕ್ಷನ್‌ನಿಂದ ಹೊರಟು ಕಾಲೆಜಿಮಲೆ ಮೀಸಲು ಅರಣ್ಯದ ಮೂಲಕ ಕಡಿದಾದ ಗುಡ್ಡಗಾಡು ರಸ್ತೆಯಲ್ಲಿ ಚಲಿಸುತ್ತಿತ್ತು. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಿಕಪ್ ರಸ್ತೆ ಬದಿ ಪಲ್ಟಿಯಾಗಿದೆ.ಅಪಘಾತದಲ್ಲಿ

ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ Read More »

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ

ಬಂಡೆಗೆ ಬಡಿದು ಮುಳುಗಿ 50 ಲ.ರೂ. ನಷ್ಟ ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ದೋಣಿಯೊಂದು ಕಾರವಾರ ಸಮೀಪ ಅವಘಡಕ್ಕೀಡಾಗಿ ಮುಳುಗಿದೆ. ದೋಣಿಯಲ್ಲಿದ್ದ ಆರು ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿ ದಡಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ. ಭಟ್ಕಳದ ಬಂದರು ಬಳಿ ಬೋಟ್ ಕಲ್ಲಿಗೆ ತಾಗಿ ಮುಳುಗಡೆಯಾಗಿದೆ ಎನ್ನಲಾಗಿದೆ. ಉಡುಪಿ ಸಮೀಪದ ಬ್ರಹ್ಮಾವರದ ಸುರೇಶ್ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು, ಕುಮಟಾ ಭಾಗದಲ್ಲಿ ಮೀನುಗಾರಿಕೆ ನಡೆಸಿ ಭಟ್ಕಳ ಬಂದರಿಗೆ ಬರುವಾಗ ಅವಘಡ ಸಂಭವಿಸಿದೆ. ಮೀನು ಇಳಿಸಲು ಬರುತ್ತಿದ್ದಾಗ ಭಟ್ಕಳ ಬಂದರು ಭಾಗದ

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ Read More »

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ

ಎರ್ನಾಕುಲಂ: ಮೆಣಸಿನಕಾಳನ್ನು ಕೀಳುವಾಗ ಆಯ ತಪ್ಪಿ ತಮ್ಮ ಮನೆಯ ಬಾವಿಗೆ ಬಿದ್ದ ತನ್ನ ಪತಿಯನ್ನು 56 ವರ್ಷದ ಮಹಿಳೆಯೊಬ್ಬರು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.64 ವರ್ಷದ ರಮೇಶನ್ ಎಂಬವರು ಮೆಣಿಸಿನ ಬಳ್ಳಿಯಿಂದ ಮೆಣಸಿನ ಕಾಳನ್ನು ಕೀಳುವಾಗ ಏಣಿ ಜಾರಿದ್ದು, ಮರವು ಬಾವಿಯ ಸನಿಹದಲ್ಲೇ ಇದ್ದುದರಿಂದ ರಮೇಶನ್ ಬಾವಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತನ್ನ ಪತಿಯು ಕಿರುಚಿಕೊಳ್ಳುತ್ತಿರುವ ಸದ್ದನ್ನು ಕೇಳಿದ ಮನೆಯೊಳಗಿದ್ದ ಪದ್ಮಾ ಹೊರಗೆ ಓಡಿ ಬಂದಿದ್ದಾರೆ. ತನ್ನ ಪತಿಯು 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡು ಕ್ಷಣಕಾಲ

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ Read More »

ಟ್ಯಾಕ್ಟರ್ ಪಲ್ಟಿ : ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬಗಳು

ಪುತ್ತೂರು: ನರಿಮೊಗರು ಶಾಲಾ ಬಳಿ ಟ್ರ್ಯಾಕ್ಟರ್ ಒಂದು ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್‍ ಕಂಬ ಮುರಿದುಬಿದ್ದ ಬುಧವಾರ ಸಂಜೆ ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಅಪಘಾತದಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಗಡಿಪಿಲ ಬಳಿ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ನೀರು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಇದಾಗಿತ್ತು.

ಟ್ಯಾಕ್ಟರ್ ಪಲ್ಟಿ : ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬಗಳು Read More »

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ವಿಟ್ಲ : ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ತಿಳಿದು ಬಂದಿದೆ ಎಂಬುವುದು ವರದಿಯಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದ್ದು, ಅವರು ಯಾಕೆ ಅಲ್ಲಿ  ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿಲ್ಲ. ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್ Read More »

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ -ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡ ಬೈಕ್‍ ಸವಾರ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕ್ನಿ ಕಲೆಕ್ಟರ್ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ಹಿಂತಿರುಗುವಾಗ ಈ ಘಟನೆ ಸಂಭವಿಸಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ Read More »

error: Content is protected !!
Scroll to Top