ಅಪಘಾತ

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ

ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಡಿಸಿಎಂ ಮುಂಬೈ: ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಬಾರಾಮತಿಯಲ್ಲಿ ನೆರವೇರಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಪವಾರ್ ಕುಟುಂಬ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಾದ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯ ರಂಗದ ನಾಯಕರು ಮತ್ತು ಎಲ್ಲ ವರ್ಗದ ಜನರು ಅಂತ್ಯಕ್ರಿಯೆಯಲ್ಲಿ […]

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ Read More »

ಪಾನಮತ್ತ ನಟನಿಂದ ಸರಣಿ ಅಪಘಾತ

ಯದ್ವಾತದ್ವಾ ಕಾರು ಓಡಿಸಿ ಹಲವು ವಾಹನಗಳಿಗೆ ಗುದ್ದಿದ ನಟ ಬೆಂಗಳೂರು: ಕನ್ನಡದ ನಟನೊಬ್ಬ ಪಾನಮತ್ತನಾಗಿ ಯದ್ವಾತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಕೆಲವು ಚಿತ್ರಗಳಲ್ಲಿ ಹೀರೊ ಆಗಿ ನಟಿಸಿದ್ದ ಮಯೂರ್ ಪಟೇಲ್​ ಎಂಬಾತ ಶರಾಬಿನ ಮತ್ತಿನಲ್ಲಿ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ.

ಪಾನಮತ್ತ ನಟನಿಂದ ಸರಣಿ ಅಪಘಾತ Read More »

ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಜಿತ್‌ ಪವಾರ್‌ ದುರ್ಮರಣ

ಪ್ರಧಾನಿ ಮೋದಿ, ಗಣ್ಯರಿಂದ ಸಂತಾಪದ ಮಹಾಪೂರ ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಪ್ರಭಾವಿ ರಾಜಕೀಯ ನಾಯಕ ಅಜಿತ್‌ ಪವಾರ್‌ ವಿಮಾನ ಅವಘಡದಲ್ಲಿ ಮೃತ್ಯುವಿಗೀಡಾಗಿರುವ ದುರ್ಘಟನೆ ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದೆ. ನಿನ್ನೆ ಮುಂಬೈಯಲ್ಲಿ ಸಚಿವ ಸಂಪುಟ ಸಭಯಲ್ಲಿ ಭಾಗವಹಿಸಿ ಇಂದು ಬೆಳಗ್ಗೆ 8 ಗಂಟೆಗೆ ಕಿರು ವಿಮಾನದಲ್ಲಿ ತನ್ನ ತವರು ಕ್ಷೇತ್ರವಾದ ಬಾರಾಮತಿಗೆ ಹೊರಟಿದ್ದ ಅಜಿತ್‌ ಪವಾರ್‌ 8.45ಕ್ಕೆಲ್ಲ ಇನ್ನಿಲ್ಲವಾಗಿದ್ದಾರೆ. ಬಾರಾಮತಿಯ ಜಿಲ್ಲಾ ಪರಿಸತ್‌ ಚುನಾವಣೆಯ ಪ್ರಚಾರಕ್ಕೆಂದು ಹೊರಟಿದ್ದ ಅವರ ಪಾಲಿಗೆ ಇದುವೇ ಕೊನೆಯ ಪ್ರಯಾಣವಾಗಿತ್ತು. ನಾಲ್ಕು ಸಭೆಗಳಲ್ಲಿ

ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಜಿತ್‌ ಪವಾರ್‌ ದುರ್ಮರಣ Read More »

ವಿಮಾನ ಅವಘಡದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ದುರ್ಮರಣ

ಮುಂಬೈ: ಎನ್‌ಸಿಪಿ ನಾಯಕ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಗ್ಗೆ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಲ್ಯಾಂಡಿಂಗ್‌ಗೆ ಯತ್ನಿಸುತ್ತಿದ್ದಾಗ ಭೀಕರವಾಗಿ ಪತನಗೊಂಡಿದೆ. ಅಜಿತ್ ಪವಾರ್ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. 66 ವರ್ಷದ ಅಜಿತ್ ಪವಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಹಾಗೂ ಅವರ ವೈಯಕ್ತಿಕ ಸಹಾಯಕ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನೂ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ

ವಿಮಾನ ಅವಘಡದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ದುರ್ಮರಣ Read More »

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್‌ ಪವಾರ್‌ಗೆ ಗಂಭೀರ ಗಾಯ, ಐವರು ಸಾವು

ಪುಣೆ ಸಮೀಪ ಬಾರಾಮತಿಯಲ್ಲಿ ಸಂಭವಿಸಿದ ಅವಘಡ ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ ವಿಮಾನ ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಪತನಗೊಂಡು ಅಜಿತ್‌ ಪವಾರ್‌ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾವುನೋವುಗಳ ಬಗ್ಗೆ ಇನ್ನೂ ಅಧಿಕೃತ ಮಾಹಿತಿಗಳು ಬಂದಿಲ್ಲ. ಆದರೆ ಇಂದು ಬೆಳಗ್ಗೆ ಸಂಭವಿಸಿದ ವಿಮಾನ ಪತನ ಅವಘಡದಲ್ಲಿ ಅಜಿತ್‌ ಪವಾರ್‌ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸವೆ. ಈಗಾಗಲೇ ಸ್ಥಳಕ್ಕೆ

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್‌ ಪವಾರ್‌ಗೆ ಗಂಭೀರ ಗಾಯ, ಐವರು ಸಾವು Read More »

ಸ್ಲೀಪರ್‌ ಕೋಚ್‌ ಬಸ್‌ ಬೆಂಕಿಗಾಹುತಿ : ಪ್ರಯಾಣಿಕರಿಗೆ ಗಾಯ

ಸಂಪೂರ್ಣ ಸುಟ್ಟು ಕರಕಲಾದ ಬಸ್‌ ಶಿವಮೊಗ್ಗ : ಚಿತ್ರದುರ್ಗದ ಬಳಿ ನಡೆದ ಬಸ್​​ ದುರಂತ ನೆನಪಿನಿಂದ ಮಾಸುವ ಮುನ್ನವೇ ಇದೇ ಮಾದರಿಯ ಇನ್ನೊಂದು ಭೀಕರ ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಕೋಚ್‌ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ

ಸ್ಲೀಪರ್‌ ಕೋಚ್‌ ಬಸ್‌ ಬೆಂಕಿಗಾಹುತಿ : ಪ್ರಯಾಣಿಕರಿಗೆ ಗಾಯ Read More »

ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ

ಅಳಿವೆ ಬಾಗಿಲಲ್ಲಿ ದೋಣಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ದುರಂತ ಉಡುಪಿ: ಜಿಲ್ಲೆಯ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ ಬಳಿ ಸೋಮವಾರ ಪ್ರವಾಸಿ ದೋಣಿ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಹಂಗರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ 15 ರಿಂದ 20 ಪ್ರಯಾಣಿಕರ ಸಾಮರ್ಥ್ಯದ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕೋಡಿ ಬೆಂಗ್ರೆಯಲ್ಲಿ ನಡೆದ ದುರಂತ ಪ್ರವಾಸಿ ದೋಣಿ

ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ Read More »

ಕಾರು – ರಿಕ್ಷಾ ನಡುವೆ ಅಪಘಾತ

ಪುತ್ತೂರು: ಕಾರು ಮತ್ತು ರಿಕ್ಷಾ‌ ನಡುವೆ ಅಪಘಾತ ಸಂಭವಿಸಿದ ಘಟನೆ ಬಪ್ಪಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರು – ರಿಕ್ಷಾ ನಡುವೆ ಅಪಘಾತ Read More »

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌

ಪುತ್ತೂರು: ಮಾಣಿ ಸಮೀಪ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆದ್ದಾರಿಯ ಡಿವೈಡರ್‌ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ ಎನ್ನಲಾಗಿದೆ. ಅಪಘಾತದಲ್ಲಿ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌ Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

error: Content is protected !!
Scroll to Top