ಲಾರಿಗೆ ಢಿಕ್ಕಿ ಹೊಡೆದ ಬಸ್: ವಿದ್ಯಾರ್ಥಿಗಳಿಬ್ಬರಿಗೆ ಗಾಯ!
ಪುತ್ತೂರು: ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ, ವಿದ್ಯಾರ್ಥಿಗಳಿಬ್ಬರು ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ಬೊಳುವಾರಿನಲ್ಲಿ ನಡೆದಿದೆ. ಇಲ್ಲಿಯ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪವನ್ ಕುಮಾರ್ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಥಿ ಗಣೇಶ್ ಬಸ್ಸಿನಿಂದ ಬಿದ್ದು ಗಾಯಗೊಂಡವರು. ವಿದ್ಯಾರ್ಥಿಗಳು ಬಸ್ಸಿನ ಫುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸುತ್ತಿದ್ದರು. ಬಸ್ ಲಾರಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ, ಇಬ್ಬರು ವಿದ್ಯಾರ್ಥಿಗಳು ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಲಾರಿಗೆ ಢಿಕ್ಕಿ ಹೊಡೆದ ಬಸ್: ವಿದ್ಯಾರ್ಥಿಗಳಿಬ್ಬರಿಗೆ ಗಾಯ! Read More »