ಅಪಘಾತ

ಚಾರ್ಮಾಡಿ ಘಾಟ್ ಪ್ರಪಾತಕ್ಕೆ ಉರುಳಿದ ಲಾರಿ!

ಬೆಳ್ತಂಗಡಿ : ದಟ್ಟ ಮಂಜು ಆವರಿಸಿದ ಪರಿಣಾಮ ಚಾರ್ಮಾಡಿ ಘಾಟಿಯಯಲ್ಲಿ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ. ಸೋಮನಕಾಡು ನೀರಿನ ಫಾಲ್ಸ್ ಸಮೀಪ ಈ ಅಪಘಾತ ಸಂಭವಿಸಿದ್ದು, ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ಮರದಲ್ಲೇ ಸಿಲುಕಿಕೊಂಡಿರುವುದರಿಂದ ಚಾಲಕ, ನಿರ್ವಾಹಕ ಪ್ರಾಣಾಪಾಯದಿಂದ ಪಾರಾದಂತಾಗಿದೆ.

ಚಾರ್ಮಾಡಿ ಘಾಟ್ ಪ್ರಪಾತಕ್ಕೆ ಉರುಳಿದ ಲಾರಿ! Read More »

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ | ಹೆಚ್ಚಿನ ಅನಾಹುತ ತಪ್ಪಿಸಿದ ಸ್ಥಳೀಯರು

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಕಾರಿನಲ್ಲಿ ಹಠಾತ್ತನೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗ ಶಾಲಾ ಬಳಿ ನಡೆದಿದೆ. ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಯಾತ್ರಾರ್ಥಿ ಕುಟುಂಬವೊಂದು ಆದಿಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗ ಶಾಲಾ ಬಳಿ ಕಾರು ನಿಲ್ಲಿಸಿ ದೇವರ ದರ್ಶನಕ್ಕೆ ತೆರಳಿತ್ತು. ಈ ಸಂದರ್ಭ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಸುಬ್ರಹ್ಮಣ್ಯದ ಗಣೇಶ್ ಭಟ್‍ ಹಾಗೂ ಮತ್ತಿತರರು ಈ ಕಾರಿನ ಹಿಂದೆ ಸಾಲು ಸಾಲಾಗಿ ನಿಂತಿದ್ದ ಕಾರಿಗೆ ಬೆಂಕಿ ತಗಲದಂತೆ ಹೆಚ್ಚಿನ

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ | ಹೆಚ್ಚಿನ ಅನಾಹುತ ತಪ್ಪಿಸಿದ ಸ್ಥಳೀಯರು Read More »

ಭೀಕರ ದುರಂತ: ಶಾಲಾ ಮಕ್ಕಳಿದ್ದ ದೋಣಿ ಮುಳುಗಡೆ! | 34 ಮಕ್ಕಳ ಪೈಕಿ ನೀರುಪಾಲಾದವರೆಷ್ಟು?

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರದಲ್ಲಿ ಗುರುವಾರ ಬೆಳಗ್ಗೆ ಶಾಲಾ ಮಕ್ಕಳಿದ್ದ ದೋಣಿ ಬಾಗಮತಿ ನದಿಯಲ್ಲಿ ಮುಳುಗಿದೆ. 18 ಮಕ್ಕಳು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. ದೋಣಿಯಲ್ಲಿ ಸುಮಾರು 34 ಮಕ್ಕಳು ಇದ್ದರು ಎನ್ನಲಾಗಿದೆ. ಸ್ಥಳೀಯರ ನೆರವಿನಿಂದ ಸುಮಾರು 20 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ನಿಖರ ಅಂಕಿಅಂಶಗಳು ದೊರೆತಿಲ್ಲ. ಹೀಗಾಗಿ ಸುಮಾರು 18 ಮಂದಿ ಮಕ್ಕಳು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಮಕ್ಕಳು ಸ್ಥಳೀಯ ಗ್ರಾಮದಿಂದ ನದಿಯಾಚೆಗಿನ ಶಾಲೆಗೆ ತೆರಳುತ್ತಿದ್ದರು. ಬೆನಿಯಾಬಾದ್ ಒಪಿ ಪ್ರದೇಶದ ಭಟ್ಗಾಮಾ ಗ್ರಾಮದ ಮಧುರಪಟ್ಟಿ

ಭೀಕರ ದುರಂತ: ಶಾಲಾ ಮಕ್ಕಳಿದ್ದ ದೋಣಿ ಮುಳುಗಡೆ! | 34 ಮಕ್ಕಳ ಪೈಕಿ ನೀರುಪಾಲಾದವರೆಷ್ಟು? Read More »

ಭಕ್ತಕೋಡಿಯಲ್ಲಿ ಸ್ಕೂಟರಿಗೆ ಬೈಕ್ ಢಿಕ್ಕಿ: ವಿಶೇಷ ಚೇತನ ವಿದ್ಯಾರ್ಥಿಗೆ ಗಾಯ

ಪುತ್ತೂರು: ಸ್ಕೂಟರಿಗೆ ಬೈಕ್ ಮುಖಾಮುಖಿ ಢಿಕ್ಕಿಯಾಗಿ, ವಿಶೇಷಚೇತನ ವಿದ್ಯಾರ್ಥಿ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ಭಕ್ತಕೋಡಿ ಶಾಲಾ ಬಳಿ ನಡೆದಿದೆ. ಭಕ್ತಕೋಡಿಯಲ್ಲಿ ಅಂಗಡಿ ಉದ್ಯಮ ನಡೆಸುತ್ತಿರುವ ಅಶೋಕ್ ಅವರ ಪುತ್ರ ರಕ್ಷಿತ್ ಗಾಯಾಳು. ಇವರು ವಿಶೇಷಚೇತನ ವಿದ್ಯಾರ್ಥಿಯಾಗಿದ್ದು, ಭಕ್ತಕೋಡಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ. ರಕ್ಷಿತ್ ಅವರನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಅಶೋಕ್ ಅವರ ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ರಿಕ್ಷಾವನ್ನು ಓವರ್’ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರ ಉದಯ್, ಸ್ಕೂಟರಿಗೆ

ಭಕ್ತಕೋಡಿಯಲ್ಲಿ ಸ್ಕೂಟರಿಗೆ ಬೈಕ್ ಢಿಕ್ಕಿ: ವಿಶೇಷ ಚೇತನ ವಿದ್ಯಾರ್ಥಿಗೆ ಗಾಯ Read More »

ಕೆದಂಬಾಡಿಯಲ್ಲಿ ಬೈಕ್’ಗಳೆರಡು ಮುಖಾಮುಖಿ ಢಿಕ್ಕಿ | ಬೈಕ್ ಸಹಸವಾರನಿಗೆ ಗಾಯ

ಪುತ್ತೂರು: ಬೈಕ್’ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಸಹಸವಾರ ಗಾಯಗೊಂಡ ಘಟನೆ ಕೆದಂಬಾಡಿಯಲ್ಲಿ ನಡೆದಿದೆ. ಬೈಕ್ ಸಹಸವಾರ ರಮೇಶ್ ಗಾಯಾಳು. ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದೆ ಘಟನೆಗೆ ಕಾರಣವಾಗಿದೆ. ಕೆದಂಬಾಡಿ ಗ್ರಾಮದ ಸಾರೆಪುಣಿ ಎಂಬಲ್ಲಿ ಬಾಬು ಎಂಬವರು ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್’ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಹಸವಾರ ರಮೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು, ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆದಂಬಾಡಿಯಲ್ಲಿ ಬೈಕ್’ಗಳೆರಡು ಮುಖಾಮುಖಿ ಢಿಕ್ಕಿ | ಬೈಕ್ ಸಹಸವಾರನಿಗೆ ಗಾಯ Read More »

ಸರ್ವೆ ಬಳಿ ಹೊಂಡಕ್ಕೆ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ | ಮೂವರು ಪ್ರಯಾಣಿಕರಿಗೆ ಗಾಯ

ಪುತ್ತೂರು: ಪುತ್ತೂರಿನಿಂದ ಪಂಜಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ರಸ್ತೆ ಬದಿಯ ಹೊಂಡದಲ್ಲಿ ಜಖಂಗೊಂಡ ಘಟನೆ ಸರ್ವೆಯಲ್ಲಿ ಸೋಮವಾರ ಸಂಜೆ ನಡೆದಿದೆ. ಘಟನೆಯಿಂದ ಮೂವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಗಾಗಿ ಹೊಂಡ ಅಗೆದು ಕಾಮಗಾರಿ ಬಳಿಕ ಮುಚ್ಚಲಾಗಿತ್ತು. ಮಳೆ ಬಂದ ಕಾರಣ ಮಣ್ಣು ಮೆತ್ತಗಾಗಿತ್ತು. ಇದರ ಮೇಲೆ ಬಸ್ ಹೋಗುತ್ತಿದ್ದಂತೆ, ಬಸ್ ಹೂತು ಹೋಗಿ ಜಖಂಗೊಂಡಿತ್ತು. ಎದುರಿನಿಂದ ಬಂದ ವಾಹನವೊಂದಕ್ಕೆ ಸೈಡ್ ಕೊಡಲು ಹೋದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಳಿಕ ಪ್ರಯಾಣಿಕರನ್ನು

ಸರ್ವೆ ಬಳಿ ಹೊಂಡಕ್ಕೆ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ | ಮೂವರು ಪ್ರಯಾಣಿಕರಿಗೆ ಗಾಯ Read More »

ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ

ಉಪ್ಪಿನಂಗಡಿ: ಇಲ್ಲಿನ ಕಲ್ಲೇರಿ ಸಮೀಪದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ರಿಕ್ಷಾ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವರದಿಯಾಗಿದೆ. ಎದುರಿನಿಂದ ಬಂದ ದ್ವಿಚಕ್ರ ವಾಹನವನ್ನು ತಪ್ಪಿಸುವ ಭರದಲ್ಲಿ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ರಿಕ್ಷಾದಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಿಕ್ಷಾ ಪಲ್ಟಿ: ವಿದ್ಯಾರ್ಥಿಗಳಿಗೆ ಗಾಯ Read More »

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

ಸುಬ್ರಹ್ಮಣ್ಯ : ಕಳೆದ 3 ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಸುಬ್ರಹ್ಮಣ್ಯದ ದೇವರಗದ್ದೆ ಬಳಿ ನಡೆದಿದೆ. ದೇವರಗದ್ದೆ ನಿವಾಸಿ ವಿಠಲ ಶೆಟ್ಟಿ ಎಂಬವರ 40 ಅಡಿಯ ಬಾವಿಗೆ ಹೋರಿ ಬಿದ್ದಿತ್ತು. ಗಮನಕ್ಕೆ ಬಂದ ತಕ್ಷಣ ಸ್ಥಳೀಯರ ಸಹಾಯದಿಂದ ಮೇಲಕ್ಕೆತ್ತಲು ಪ್ರಯತ್ನ ನಡೆಸಲಾಗಿತ್ತು. ಆದರೆ ಪ್ರಯೋಜನವಾಗಿರಲಿಲ್ಲ. ಸೆ. 10ರಂದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹೋರಿಯನ್ನು ರಕ್ಷಿಸಿದ್ದಾರೆ. ಸಮಾಜ ಸೇವಕ ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಪಿ.ಎಸ್.ಐ. ಅವರಿಗೆ ಮಾಹಿತಿ

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ 

ಕಡಬ  : ಹಾಲು ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಪಡ್ಪಿನಂಗಡಿಯಿಂದ ವರದಿಯಾಗಿದೆ. ಎಡಮಂಗಲ, ಏನೆಕಲ್ಲು, ಪಂಜ  ಹಾಲು ಉತ್ಪಾದಕರ ಸಹಕಾರ ಸಂಘಗಳ ಬಿ.ಎಂ.ಸಿ.ಯಿಂದ ಹಾಲು ಶೇಖರಿಸಿ ಸಾಗಾಟ ಮಾಡುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಪಡ್ಪಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದೆ. ಘಟನೆಯಿಂದ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಟ್ಯಾಂಕರಿನಲ್ಲಿರುವ ಹಾಲು ಸುರಕ್ಷಿತವಾಗಿರುವುದಾಗಿ ತಿಳಿದು ಬಂದಿದೆ.

ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ : ಚಾಲಕನಿಗೆ ಗಾಯ  Read More »

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ  ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

error: Content is protected !!
Scroll to Top