ಅಪಘಾತ

ಅಪಘಾತ: ಮಾನವೀಯತೆ ಮೆರೆದ ಪುತ್ತಿಲ ಪರಿವಾರ

ಪುತ್ತೂರು: ಕಾರು ಡಿಕ್ಕಿಯಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಪುತ್ತಿಲ ಪರಿವಾರ ಕಾರ್ಯಕರ್ತರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಗುರುವಾರ ಸಂಜೆ ಭಾರಿ ಮಳೆ ಸುರಿಯುತ್ತಿದ್ದ ಸಂದರ್ಭ ರಸ್ತೆ ದಾಟುತಿದ್ದ ವ್ಯಕ್ತಿಗೆ ಕುಂಬ್ರದಲ್ಲಿ ಕಾರು  ಅಪಘಾತಗೊಂಡಿದೆ. ಅಪಘಾತಗೊಂಡ ವ್ಯಕ್ತಿಯನ್ನು ತಕ್ಷಣ ಪುತ್ತಿಲ ಪರಿವಾರದ ಕಾರ್ಯಕರ್ತರು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತ: ಮಾನವೀಯತೆ ಮೆರೆದ ಪುತ್ತಿಲ ಪರಿವಾರ Read More »

ಮೈಮೇಲೆ ಹರಿದ ಕಾರು: ಯುವಕ ಸ್ಥಳದಲ್ಲೇ ಮೃತ್ಯು!

ಮಂಗಳೂರು: ದ್ವಿಚಕ್ರ ವಾಹನ ಸವಾರರೊಬ್ಬರ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಕುಂಟಿಕಾನದಲ್ಲಿ ನಡೆದಿದೆ. ಕಾವೂರು ನಿವಾಸಿ ಕೌಶಿಕ್ (21) ಮೃತಪಟ್ಟ ದುರ್ದೈವಿ. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ ರಿಕ್ಷಾವೊಂದಕ್ಕೆ ತಗುಲಿ ಅಡ್ಡಬಿದ್ದಿದೆ. ಈ ವೇಳೆ ಸವಾರ ನೆಲಕ್ಕೆ ಬಿದ್ದಾಗ ಅವರ ಮೇಲೆ ಏಕಾಏಕಿ ಕಾರು ಹರಿದಿದೆ. ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಮೈಮೇಲೆ ಹರಿದ ಕಾರು: ಯುವಕ ಸ್ಥಳದಲ್ಲೇ ಮೃತ್ಯು! Read More »

ಮೀನಿನ ಲಾರಿಗೆ ಸ್ಕೂಟರ್ ಢಿಕ್ಕಿ; 21ರ ಹರೆಯದ ಯುವಕ ಮೃತ್ಯು

ಉಳ್ಳಾಲ: ಮೀನಿನ ಲಾರಿಗೆ ಸ್ಕೂಟರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೂಲತಃ ಉಳ್ಳಾಲ ನಿವಾಸಿ, ಕೋಟೆಕಾರ್‌ನಲ್ಲಿ ನೆಲೆಸಿರುವ ಹನೀಫ್ ಎಂಬವರ ಪುತ್ರ ಅಝ್‌ವೀನ್ (21) ಮೃತಪಟ್ಟ ಸ್ಕೂಟರ್ ಸವಾರ. ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ ಬುಧವಾರ ಮುಂಜಾನೆ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದರ. ನೇತ್ರಾವತಿ ಸೇತುವೆಯಲ್ಲಿ ಮೀನಿನ ವಾಹನವೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಸ್ಕೂಟರ್

ಮೀನಿನ ಲಾರಿಗೆ ಸ್ಕೂಟರ್ ಢಿಕ್ಕಿ; 21ರ ಹರೆಯದ ಯುವಕ ಮೃತ್ಯು Read More »

ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ!

ಮಂಗಳೂರು: ಮೀನುಗಾರಿಕಾ ಬೋಟ್’ಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನ ಧಕ್ಕೆಯಲ್ಲಿ ಅ. 10ರ ಮುಂಜಾನೆ ನಡೆದಿದೆ. ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಆಕಸ್ಮಿಕವಾಗಿ ಘಟನೆ ನಡೆದಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದಾಗಿ ಪಕ್ಕದ ಇತರೆ ಬೋಟ್’ಗಳಿಗೆ ಬೆಂಕಿ ಹರಡುವುದು ತಪ್ಪಿದೆ.

ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ! Read More »

ಇಸ್ರೇಲ್ – ಹಮಾಸ್ ಘರ್ಷಣೆ: ಕೇರಳ ಮೂಲದ ನರ್ಸ್’ಗೆ ಗಂಭೀರ ಗಾಯ

ಗಾಜಾ ಪಟ್ಟಿ: ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಘರ್ಷಣೆಯ ವೇಳೆ ಕೇರಳ ಮೂಲದ ನರ್ಸ್ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಮಾಹಿತಿ ಲಭ್ಯವಾಗಿದ್ದು, ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಕೇರಳದ ಮೂಲದ ಮಹಿಳೆ ಶೀಜಾ ಆನಂದ್ ಭಾರತದಲ್ಲಿ ವಾಸಿಸುತ್ತಿರುವ ತನ್ನ ಪತಿಯೊಂದಿಗೆ ವೀಡಿಯೊ ಕರೆ ಮಾಡಿ ಸಂಭಾಷಣೆ ನಡೆಸುತ್ತಿದ್ದ ವೇಳೆ ಪ್ಯಾಲೆಸ್ತೀನಿನ ಹಮಾಸ್‌ ದಾಳಿ ಮಾಡಿದ್ದು ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಏಳು ವರ್ಷಗಳಿಂದ ಇಸ್ರೇಲ್‌ನಲ್ಲಿರುವ ಶೀಜಾ ಆನಂದ್ ಶನಿವಾರ ಮುಂಜಾನೆ ಇಸ್ರೇಲ್‌ನ ಮೇಲೆ ಹಮಾಸ್ ಅನಿರೀಕ್ಷಿತ

ಇಸ್ರೇಲ್ – ಹಮಾಸ್ ಘರ್ಷಣೆ: ಕೇರಳ ಮೂಲದ ನರ್ಸ್’ಗೆ ಗಂಭೀರ ಗಾಯ Read More »

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು

ವಿಜಯನಗರ : ಇಲ್ಲಿನ ಹೊಸಪೇಟೆ ಹಾಗೂ ಮರಿಯಮ್ಮನಹಳ್ಳಿ ಮಧ್ಯೆ ಲಾರಿ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದ್ದು, 7ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಹೊಸಪೇಟೆಯಿಂದ ಮರಿಯಮ್ಮನ ಹಳ್ಳಿಯತ್ತ ಲಾರಿ ಹೊರಟಿತ್ತು. ಈ ವೇಳೆ ಮರಿಯಮ್ಮನ ಹಳ್ಳಿ ಕಡೆಯಿಂದ ಹೊಸಪೇಟೆಯತ್ತ ಮತ್ತೊಂದು ಲಾರಿ ಹಾಗೂ ಕ್ರೂಸರ್ ಬರುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿ ಬರುತ್ತಿದ್ದ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಲಾರಿ ಮಧ್ಯೆ ಸಿಕ್ಕಿಹಾಕಿಕೊಂಡ ಕ್ರೂಸರ್ ವಾಹನ ಅಪ್ಪಚ್ಚಿ ಆಗಿದೆ.

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು Read More »

ಇಸ್ರೇಲ್’ನಲ್ಲಿ 600 ದಾಟಿದ ನಾಗರಿಕರ ಸಾವು, ಗಾಜಾದಲ್ಲಿ 300ಕ್ಕೂ ಹೆಚ್ಚು ಮೃತ್ಯು! | ಗುಪ್ತಚರ ವೈಫಲ್ಯಕ್ಕೆ ಬಲಿಯಾಯಿತೇ ಇಸ್ರೇಲ್??

ಟೆಲ್ ಅವಿವ್: ಇಸ್ರೇಲಿ ಸೈನಿಕರು ನಿನ್ನೆ ಭಾನುವಾರ ದಕ್ಷಿಣ ಇಸ್ರೇಲ್ನ ಬೀದಿಗಳಲ್ಲಿ ಹಮಾಸ್ ಉಗ್ರರ ವಿರುದ್ಧ ಯುದ್ಧಕ್ಕಿಳಿದಿದ್ದು, ಗಾಜಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದರು. ಆದರೆ ಉತ್ತರ ಇಸ್ರೇಲ್ನಲ್ಲಿ ಲೆಬನಾನ್ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪಿನೊಂದಿಗೆ ನಡೆದ ದಾಳಿ ದೊಡ್ಡ ಯುದ್ಧಕ್ಕೆ ದಾರಿಮಾಡಿಕೊಟ್ಟಿತು. ಗಾಜಾದಿಂದ ಅನಿರೀಕ್ಷಿತ ದಾಳಿಯ 24 ಗಂಟೆಗಳ ನಂತರ ಇನ್ನೂ ದಾಳಿ ಮುಂದುವರಿದಿದೆ. ಇದರಲ್ಲಿ ಹಮಾಸ್ ಉಗ್ರಗಾಮಿಗಳು ಇಸ್ರೇಲ್ನ ಭದ್ರತಾ ತಡೆಗೋಡೆಯನ್ನು ಭೇದಿಸಿ ಮತ್ತು ಹತ್ತಿರದ ಸ್ಥಳಗಳ ಮೂಲಕ ಆಗಮಿಸಿದರು. ಇಸ್ರೇಲ್ನಲ್ಲಿ ಕನಿಷ್ಠ 600

ಇಸ್ರೇಲ್’ನಲ್ಲಿ 600 ದಾಟಿದ ನಾಗರಿಕರ ಸಾವು, ಗಾಜಾದಲ್ಲಿ 300ಕ್ಕೂ ಹೆಚ್ಚು ಮೃತ್ಯು! | ಗುಪ್ತಚರ ವೈಫಲ್ಯಕ್ಕೆ ಬಲಿಯಾಯಿತೇ ಇಸ್ರೇಲ್?? Read More »

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಕೈಕಂಬ: ಬೈಕ್‍ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠ ಮುಚ್ಚಾರು ಕ್ರಾಸ್ ನಲ್ಲಿ ನಡೆದಿದೆ. ಗುರುಪುರ ಹೊಸಮನೆ ನಿವಾಸಿ, ಎಚ್‍ಡಿಎಫ್ ಸಿ ಉದ್ಯೋಗಿ ಸಚಿನ್ ಕುಮಾರ್ ಆಚಾರ್ಯ (33) ಮೃತಪಟ್ಟವರು. ಸಚಿನ್ ಸಂಜೆ ಕೆಲಸ ಮುಗಿಸಿ ಗುರುಪುರಕ್ಕೆ ಬೈಕ್‍ ನಲ್ಲಿ ಬರುತ್ತಿದ್ದ ಸಂದರ್ಭ ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಸಚಿನ್ ನ ತಲೆಗೆ ಗಂಭೀರ

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು Read More »

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು

ಬೆಂಗಳೂರು: ಪಟಾಕಿ ಅನ್’ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ. ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್’ಗಳು

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು Read More »

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಸಂಭವಿಸಿದ ಸಣ್ಣ ವಿಮಾನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಭಾರತೀಯರು ಸೇರಿದ್ದಾರೆ ಎಂದು ವರದಿಯಾಗಿದೆ. ಅವಳಿ ಎಂಜಿನ್‌ನ ಲಘು ಪೈಪರ್ ಪಿಎ-34 ಸೆನೆಕಾ ವಿಮಾನವು ಮರಗಳು ಮತ್ತು ಪೊದೆಗಳಿಗೆ ಅಪ್ಪಳಿಸಿತು ಎಂದು ರಾಯಿಟರ್ಸ್ ವರದಿಯಾಗಿದೆ. ವ್ಯಾಂಕೋವರ್‌’ನಿಂದ ಪೂರ್ವಕ್ಕೆ 100 ಕಿಲೋ ಮೀಟರ್ ದೂರದಲ್ಲಿರುವ ಚಿಲ್ಲಿವಾಕ್‌’ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ವರದಿಗಳ ಆಧಾರದ ಮೇಲೆ, ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ತನಿಖೆಗೆ ತನಿಖಾಧಿಕಾರಿಗಳನ್ನು

ಲಘು ವಿಮಾನ ಪತನ: ಇಬ್ಬರು ಭಾರತೀಯರು ಸೇರಿ ಮೂರು ಸಾವು Read More »

error: Content is protected !!
Scroll to Top