ಅಪಘಾತ

ಶಾಲಾ ಗೋಡೆ, ಮೇಲ್ಛಾವಣಿ ಕುಸಿತ | ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಡಬ: ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಟಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಟಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಶಾಲಾ ಗೋಡೆ, ಮೇಲ್ಛಾವಣಿ ಕುಸಿತ | ನಾಲ್ವರು ವಿದ್ಯಾರ್ಥಿಗಳಿಗೆ ಗಾಯ Read More »

ವಿಟ್ಲದಲ್ಲಿ ಮನೆ ಮೇಲೆ ಗುಡ್ಡ ಕುಸಿತ | ಸ್ಥಳಕ್ಕೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ

ವಿಟ್ಲ: ವ್ಯಾಪ್ತಿಯ ಮನೆಯೊಂದರ ಮೇಲೆ ಗುಡ್ಡ ಕುಸಿದ ಘಟನೆ ನಡೆದಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕುರುಂಬಳ ನಿವಾಸಿ ಕಲಂದರ್ ಅಲಿ ಎಂಬವರ ಮನೆ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದು, ಅವರು ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ

ವಿಟ್ಲದಲ್ಲಿ ಮನೆ ಮೇಲೆ ಗುಡ್ಡ ಕುಸಿತ | ಸ್ಥಳಕ್ಕೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ Read More »

ಇನ್ನೋವಾ ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೂಜಿಬಾಳ್ತಿಲ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಚಿಲಂಪಾಡಿಯ ನೂಜಿಬಾಳ್ತಿಲದಲ್ಲಿ ಇಂದು ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಮೃತಪಟ್ಟವರು. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ವಾಹನವನ್ನು ನೋಡಿ ಬ್ರೇಕ್

ಇನ್ನೋವಾ ಕಾರು-ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ !

ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಕಾರುಗಳೆರಡು ಜಖಂ ಗೊಂಡಿದೆ. ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಕತ್ಯಾಡಿ ನಿವಾಸಿಯೊಬ್ಬರಿಗೆ ತೀವು ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ ! Read More »

ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್‌ರೇಪ್‌

ಬಿಯರ್‌ಗೆ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕೃತ್ಯ ಕಾರ್ಕಳ: ಅನ್ಯಕೋಮಿನ ಯುವಕರ ತಂಡ ಯುವತಿಯೊಬ್ಬಳಿಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಿನ್ನೆ ಕಾರ್ಕಳದಲ್ಲಿ ಸಂಭವಿಸಿದೆ.ರೇಷ್ಮೆ ಕೃಷಿ ಮಾಡಿಕೊಂಡಿರುವ ಬೋವಿ ಸಮುದಾಯದ 21ರ ಹರೆಯದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ರಾತ್ರಿಯೇ ಆಸ್ಪತ್ರೆ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ

ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್‌ರೇಪ್‌ Read More »

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬಸ್ | 14 ಭಾರತೀಯರು ಮೃತ್ಯು

ನೇಪಾಳ:  40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ನಡೆದಿದೆ. ನೇಪಾಳದ ತನಾಹುನ್ ಜಿಲ್ಲೆಯ ಮರ್ಸ್ಯಾಂಗ್ಲಿ ನದಿಗೆ ಬಸ್ ಉರುಳಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಎಫ್‌ಟಿ 7623 ನಂಬ‌ರ್ ಪ್ಲೇಟ್ ಹೊಂದಿದ್ದ ಬಸ್ ನದಿಗೆ ಬಿದ್ದಿದೆ. ತನಾಹುನ್ ಜಿಲ್ಲೆಯ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ದೂರವಾಣಿಯ ಮೂಲಕ ದೃಢಪಡಿಸಿದ್ದಾರೆ. 40 ಭಾರತೀಯ ಪ್ರಯಾಣಿಕರಿದ್ದ ಬಸ್ ಪೋಖರಾದಿಂದ ತೆರಳುತ್ತಿತ್ತು.

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬಸ್ | 14 ಭಾರತೀಯರು ಮೃತ್ಯು Read More »

ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ  ಹಾರಾಡಿ ಸಮೀಪ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದುಕೊಂಡಿದೆ.

ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ Read More »

ಬಸ್-ಲಾರಿ ಡಿಕ್ಕಿ

ಪುತ್ತೂರು : ಸರಕಾರಿ ಬಸ್ ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡ ಘಟನೆ ಕಬಕ ಸಮೀಪ ನಡೆದಿದೆ. ಮಂಗಳೂರಿನಿಂದ ಪುತ್ತೂರು ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ವಾಹನಕ್ಕೆ ಅಲ್ಪ ಪ್ರಮಾಣದ ಹಾನಿಯಾಗಿದೆನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಬಸ್-ಲಾರಿ ಡಿಕ್ಕಿ Read More »

ಬೈಕ್‍-ಪಿಕಪ್ ಡಿಕ್ಕಿ : ಬೈಕ್ ಸವಾರ ಕ್ಷೌರಿಕ ಸುರೇಶ್‍ ಭಂಡಾರಿ ಮೃತ್ಯು

ಪುತ್ತೂರು: ಬೈಕ್‍ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಕಾವು ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಅಮ್ಮಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡೂರು ಗ್ರಾಮದ ಕಾವು ಬಜಿಕುಡೇಲು ದಿ. ರಾಮ ಭಂಡಾರಿ ಎಂಬವರ ಪುತ್ರ ಅವಿವಾಹಿತ ಸುರೇಶ್ ಭಂಡಾರಿ (45) ಅಪಘಾತದಿಂದ ಮೃತಪಟ್ಟವರು. ಸುರೇಶ್‍ ಭಂಡಾರಿ ಇಂದು ಬೆಳಗ್ಗೆ ಬೈಕ್‌ನಲ್ಲಿ ಅಮ್ಚಿನಡ್ಕದ ಸೆಲೂನ್ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾವಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬರುತ್ತಿದ್ದ ಪಿಕಪ್ ನಡುವೆ

ಬೈಕ್‍-ಪಿಕಪ್ ಡಿಕ್ಕಿ : ಬೈಕ್ ಸವಾರ ಕ್ಷೌರಿಕ ಸುರೇಶ್‍ ಭಂಡಾರಿ ಮೃತ್ಯು Read More »

ಸ್ಕೂಟರ್ ಅಪಘಾತ : ಯುವಕ‌ ಸ್ಥಳದಲ್ಲೇ ಮೃತ್ಯು

ಕಟಪಾಡಿ : ಬೆಳಪು‌ ವಿನಯ‌ನಗರ ಸ್ಮಶಾನದ ಬಳಿ ಸ್ಕೂಟರ್ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಎಲ್ಲೂರು ಗ್ರಾಮದ ಕುಂಡೇಲು ಬಂಡಸಾಲೆ ನಿವಾಸಿ ಮೇಸ್ತ್ರಿ ಅಶೋಕ್ ಮೂಲ್ಯ ಎಂಬವರ ಪುತ್ರ ಜಗದೀಶ್ (33) ಮೃತ ಯುವಕ. ಪುಂಚಲಕಾಡುವಿಗೆ ತೆರಳಿದ್ದ ಅವರು  ಅಲ್ಲಿಂದ ಬೆಳಪು ಮಾರ್ಗವಾಗಿ ಮನೆಗೆ ತೆರಳುತ್ತಿದ್ದ ವೇಳೆ ತಿರುವಾದ ರಸ್ತೆಯಲ್ಲಿ ಅವರು ಚಲಾಯಿಸುತ್ತಿದ್ದ‌ ಜುಪಿಟರ್  ಸ್ಕೂಟಿ ಸ್ಕಿಡ್ ಆಗಿ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.  ಢಿಕ್ಕಿಯ ರಭಸಕ್ಕೆ ಮೋರಿಗೆ ಬಡಿದು

ಸ್ಕೂಟರ್ ಅಪಘಾತ : ಯುವಕ‌ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top