ಪಯಸ್ವನಿ ನದಿಯಲ್ಲಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ !
ಸುಳ್ಯ: ಸುಳ್ಯ ಕೆ.ವಿ.ಜಿ ಕ್ಯಾಂಪಸ್ ಬಳಿಯ ಬಸ್ಮಡ್ಕ ಎಂಬಲ್ಲಿ ಪಯಸ್ವಿನಿ ನದಿಯಲ್ಲಿ ಮುಳುಗಿ ಯುವಕ ಕಣ್ಮರೆಯಾದ ವ್ಯಕ್ತಿ ಶವ ಪತ್ತೆಯಾಗಿದೆ. ಬಟ್ಟೆ ಒಗೆಯಲು ಹಾಗೂ ಸ್ನಾನಕ್ಕೆಂದು ನದಿಗೆ ಬಂದ ಮೂವರು ಯುವಕರು ನೀರಿಗೆ ಇಳಿದಿದ್ದರು ಅದರಲ್ಲಿ ಒಬ್ಬರು ಕಣ್ಮರೆಯಾಗಿದ್ದರು. ಆ ವ್ಯಕ್ತಿಯ ಪತ್ತೆಗಾಗಿ ಸುಳ್ಯ ಆರಕ್ಷಕ ಠಾಣೆ ಸಿಬ್ಬಂದಿಗಳು ಅಗ್ನಿಶಾಮಕ ದಳ ಹಾಗೂ ಪೈಚಾರಿನ ಮುಳುಗು ತಜ್ಞರ ತಂಡ ಶೋಧ ಮುಂದುವರಿಸಿದ್ದರು. ಇದೀಗ ಮೃತ ದೇಹವನ್ನು ನೀರಿನಿಂದ ಮೇಲೇತ್ತಲಾಗಿದೆ ಎಂದು ತಿಳಿದು ಬಂದಿದೆ.
ಪಯಸ್ವನಿ ನದಿಯಲ್ಲಿ ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ ! Read More »









