ನಿಧನ

ಜೋಕಾಲಿಯ ಹಗ್ಗ ಸಿಲುಕಿ ಬಾಲಕಿ ಮೃತ್ಯು

ವಿಟ್ಲ : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ, ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದ ದುರಂತ ಸಂಭವಿಸಿದೆ

ಜೋಕಾಲಿಯ ಹಗ್ಗ ಸಿಲುಕಿ ಬಾಲಕಿ ಮೃತ್ಯು Read More »

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ

ಪುತ್ತೂರು: ಜೆಸಿಐ ನ ತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ (41) ನಿಧನರಾಗಿದ್ದಾರೆ. ಆಲಂಕಾರು ನಿವಾಸಿಯಾಗಿದ್ದ ಪ್ರದೀಪ್ ರವರ ಮೃತದೇಹ ಮನೆಯ ಅಂಗಳದಲ್ಲಿರುವ ಶೆಡ್ ನಲ್ಲಿ ಪತ್ತೆಯಾಗಿದೆ. ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗಿತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ Read More »

ಪಿಕಪ್ ಚಾಲಕ ಲೋಕೇಶ್‍ ಕಲ್ಕಾರ್ ನಿಧನ

ಪುತ್ತೂರು: ಶಾಂತಿಗೋಡು ಗ್ರಾಮದ ಕಲ್ಕಾರ್ ನಿವಾಸಿ ಲೋಕೇಶ್‍ ಕಲ್ಕಾರ್ ಬುಧವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಸೀತಾ-ರಾಮಣ್ಣ ಗೌಡ ದಂಪತಿ ಪುತ್ರರಾಗಿರುವ ಲೋಕೇಶ್‍ ಕಲ್ಕಾರ್ ಸ್ವಂತ ಪಿಕಪ್ ಹೊಂದಿದ್ದು, ಚಾಲಕರಾಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಿಕಪ್ ಚಾಲಕ ಲೋಕೇಶ್‍ ಕಲ್ಕಾರ್ ನಿಧನ Read More »

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಮಂಗಳೂರು: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತಪಟ್ಟವರು. ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು Read More »

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ಲಾಡ್ಜ್ ಒಂದರಲ್ಲಿ ಬೆಂಗಳೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಭೂಷಣ್‍ (65) ಮೃತಪಟ್ಟವರು. ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷಣ್‍ ಉದ್ಯೋಗ ನಿಮಿತ್ತ ಪುತ್ತೂರಿಗೆ ಬಂದಿದ್ದು, ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ Read More »

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ

ಮಂಗಳೂರು: ಕಾಲೇಜಿನಲ್ಲಿ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು  ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಮೃತಪಟ್ಟವರು. ಬಜೆ ಪಡು ಪೆರಾರ ನಿವಾಸಿ ಗೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್‌ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿದ್ದರು. ಬಳಿಕ ಅಲೋಶಿಯಸ್ ಕಾಲೇಜಿನಲ್ಲಿಯೇ ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು ನ.9ರಂದು ಕಾಲೇಜಿನಲ್ಲಿ ತಲೆಸುತ್ತು ಬಂದು ಬಿದ್ದ ಅವರಿಗೆ ಗಾಯವಾಗಿತ್ತು. ಅವರನ್ನು ಕಂಕನಾಡಿ

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ Read More »

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ಮೃತಪಟ್ಟ ಘಟನೆ ನಡೆದಿದೆ. ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಮೃತರು ತಂದೆ ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ Read More »

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ

ಬಂಟ್ವಾಳ:  ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ವಿಜಯ ಜಿ. ಜೈನ್ ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ Read More »

ಕುಂಬ್ರ ನಿವಾಸಿ ಯುವ ವಕೀಲ ಚಂದ್ರಕಾಂತ್ ಅಡೂರ್ ನಿಧನ

ಪುತ್ತೂರು: ಅನಾರೋಗ್ಯದ ಹಿನ್ನಲೆಯಲ್ಲಿ ಯುವ ವಕೀಲ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಅವರು, ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಮಗು, ಕುಟುಂಬಸ್ಥರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.

ಕುಂಬ್ರ ನಿವಾಸಿ ಯುವ ವಕೀಲ ಚಂದ್ರಕಾಂತ್ ಅಡೂರ್ ನಿಧನ Read More »

error: Content is protected !!
Scroll to Top