ನಿಧನ

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಮಂಗಳೂರು : ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸಂಭವಿಸಿದೆ.ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಅಫ್ತಾಬ್ ಏಕೈಕ ಪುತ್ರ. ಅವರ ಮೂವರು ಸಹೋದರಿಯರಿಗೆ […]

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು Read More »

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು

 ಬೆಳ್ತಂಗಡಿ : ವಿದ್ಯುತ್‌ ತಂತಿ ಸ್ಪರ್ಶಿಸಿ  ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವೇಣೂರು ಸಮೀಪ ನಡೆದಿದೆ.      ವೇಣೂರು ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ನಿವಾಸಿ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.    ವಿದ್ಯುತ್‌ ಪರಿವರ್ತಕದ ಬಳಿ ತೋಟದಲ್ಲಿ ಎಲ್.ಟಿ ಲೈನ್‌ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುಂಡಾಗಿ ನೀರಿನ ಹಳ್ಳಕ್ಕೆ ಬಿದ್ದು ತಂತಿಯಲ್ಲಿ ವಿದ್ಯುತ್‌ ಸರಬರಾಜಾಗುವ ಪ್ಯೂಸ಼್ ಹೋಗಿರುವುದು ಕಂಡುಬಂದಿದೆ.  ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೀರಪ್ಪ  ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ತೆಂಗಿನಕಾಯಿ, ಅಡಕೆಯನ್ನು ಹೆಕ್ಕಲು

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು Read More »

ಪ್ರೀತಿಗೆ ಮನೆಯವರ ವಿರೋಧ: ಪ್ರೇಮಿಗಳು ಆತ್ಮಹತ್ಯೆ

ಬೆಳಗಾವಿ: ತಮ್ಮ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಕ್ಕಿಲ್ಲ ಎಂಬ ಕಾರಣಕ್ಕೆ ಪ್ರೇಮಿಗಳಿಬ್ಬರು ಅಟೋದಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ ಘಟನೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಘವೇಂದ್ರ ಜಾದವ(28), ರಂಜಿತಾ ಚೋಬರಿ(26) ಎಂದು ತಿಳಿದು ಬಂದಿದೆ. ಇವರಿಬ್ಬರೂ ಹಲವು ವರ್ಷಗಳಿಂದ ಪ್ರೇಮಿಸುತ್ತಿದ್ದರು. ‌ಇವರಿಬ್ಬರ ಮದುವೆಗೆ ಮನೆಯವರ ಒಪ್ಪಿಗೆ ಇರಲಿಲ್ಲ. ರಂಜಿತಾಗೆ ಕೆಲ ದಿನಗಳ ಹಿಂದಷ್ಟೇ ವಿವಾಹ ನಿಶ್ಚಯವಾಗಿತ್ತು. ಇದರಿಂದ ನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ಅಟೋ‌ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.

ಪ್ರೀತಿಗೆ ಮನೆಯವರ ವಿರೋಧ: ಪ್ರೇಮಿಗಳು ಆತ್ಮಹತ್ಯೆ Read More »

ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ ನಿಧನ

ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ(70) ರವರು ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದ್ದಾರೆ. ಪುತ್ತೂರು ಪೋಸ್ಟ್ ಆಫೀಸ್ ಬಳಿ ಇರುವ ಕೀರ್ತನ್ ಇಲೆಕ್ನಿಕಲ್ ನ  ಸಹ ಮಾಲಕರಾಗಿದ್ದ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ ನಿಧನ Read More »

ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. (36ವ) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಾಮೆತ್ತಡ್ಕ ನಿವಾಸಿ ಜಯಂತ್ ಬಿ. ಅವರ ಪುತ್ರರಾಗಿರುವ ಅವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಮಗು, ಸಹೋದರನನ್ನು ಅಗಲಿದ್ದಾರೆ.

ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. ನಿಧನ Read More »

ತಾಸೆ ಬಳಗದಲ್ಲಿ ಗುರುತಿಸಿಕೊಂಡ ರಕ್ಷಿತ್ ಜೋಗಿ ನಿಧನ

ಪುತ್ತೂರು: ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದರು. ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ, ಅಜ್ಜಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ತಾಸೆ ಬಳಗದಲ್ಲಿ ಗುರುತಿಸಿಕೊಂಡ ರಕ್ಷಿತ್ ಜೋಗಿ ನಿಧನ Read More »

ಕಾಂಟಾ ಲಗಾ…ಖ್ಯಾತಿಯ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ

ಪುನೀತ್‌ ರಾಜ್‌ಕುಮಾರ್‌ ಚಿತ್ರಗಳಲ್ಲೂ ನಟಿಸಿದ್ದ ನಟಿ ಮುಂಬಯಿ: ಕಾಂಟಾ ಲಗಾ… ಹಾಡಿಗೆ ಮಾದಕವಾಗಿ ಕುಣಿದು ಆಲ್ಬಂ ಸಾಂಗ್‌ ಜಮಾನದಲ್ಲಿ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿನಲ್ಲೂ ಮಸ್ತ್‌ ಆಗಿ ಕುಣಿದಿದ್ದರು. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು

ಕಾಂಟಾ ಲಗಾ…ಖ್ಯಾತಿಯ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ Read More »

ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟ‌ರ್, ಕಾವು ನಿವಾಸಿ ಸತೀಶ್‍ ಕುಮಾರ್ ನಿಧನ

ಪುತ್ತೂರು: ಕುಂಬ್ರದ ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ಬೆಂಗಳೂರಿನಲ್ಲಿ ಇಂದು ನಿಧನರಾದರು. ಸತೀಶ್‍ ಕುಮಾರ್ ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟ‌ರ್, ಮಾಜಿ ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಟ್ನರ್, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಆಗಿದ್ದರು. ಮೃತರು ತಾಯಿ, ಮಕ್ಕಳಾದ ಅನಿರುದ್ಧ, ಅನುರಾಗ್ ಮತ್ತು ಅಣ್ಣ ಬೆಂಗಳೂರಿನ ಹೊಟೇಲ್ ಉದ್ಯಮಿ ಹರೀಶ್, ತಮ್ಮ ರಿಪಬ್ಲಿಕ್ ಟಿ.ವಿ ಚಾನಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟ‌ರ್, ಕಾವು ನಿವಾಸಿ ಸತೀಶ್‍ ಕುಮಾರ್ ನಿಧನ Read More »

ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಶನಿವಾರ ನಿಧನರಾದರು. ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ Read More »

ಕೊಂಬಾರು ನಿವಾಸಿ, ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ

ಕಡಬ: ವರ್ಷದ ಹಿಂದೆ ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಊರಿನಲ್ಲಿ ನೆಲೆಸಿದ್ದ ಸೈನಿಕರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಬುಧವಾರ ಸಂಜೆ ನಡೆದಿದೆ. ಮೂಲತ: ಕೊಂಬಾರು ಗ್ರಾಮದಲ್ಲಿ ವಾಸವಿದ್ದ ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ನಿವೃತ್ತ ಸೈನಿಕ ಪ್ರಭಾಕರನ್ ಹೃದಯಾಘಾತಕ್ಕೆ ಒಳಗಾದವರು. ಇಂದು ತನ್ನ ಕಾರಿನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದು ಈ ವೇಳೆ ಆಸ್ಪತ್ರೆಯೊಳಗೆ ಕುಸಿದು ಬಿದ್ದಿದ್ದು ಕೂಡಲೇ ಆಸ್ಪತ್ರೆ ಸಿಬ್ಬಂದಿಗಳು

ಕೊಂಬಾರು ನಿವಾಸಿ, ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ Read More »

error: Content is protected !!
Scroll to Top